<p>ಧಾರವಾಡ: ‘ರೈತರಿಗೆ ಅಗತ್ಯವಿರುವ ತಾಂತ್ರಿಕ ವಿಚಾರಗಳಣ್ನು ನೀಡಲು ವಿಶ್ವವಿದ್ಯಾಲಯ ಸದಾ ಸಿದ್ಧವಿದೆ’ ಎಂದು ಧಾರವಾಡ ಕೃಷಿ ವಿಶ್ವವಿದ್ಯಾಲಯದ ಪ್ರಭಾರ ಕುಲಪತಿ ಡಾ. ಆರ್.ಬಸವರಾಜಪ್ಪ ಹೇಳಿದರು.</p>.<p>ಕೃಷಿ ವಿಶ್ವವಿದ್ಯಾಲಯದಲ್ಲಿ ಶನಿವಾರದಿಂದ ಆರಂಭವಾದ ಕೃಷಿ ಮೇಳದಲ್ಲಿ ಬೀಜ ಮೇಳದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ಕೃಷಿಯ ಜೊತೆಗೆ ರೈತರು ಪೂರಕ ಚಟುವಟಿಕೆಗಳನ್ನು ಕೈಗೊಳ್ಳಬೇಕು ಹಾಗೂ ಸಮಗ್ರ ಕೃಷಿಯನ್ನು ಅಳವಡಿಸಿಕೊಳ್ಳಬೇಕು’ ಎಂದು ಹೇಳಿದರು.</p>.<p>ಪ್ರಾಸ್ತಾವಿಕವಾಗಿ ಮಾತನಾಡಿದಬೀಜ ಘಟಕದ ವಿಶೇಷ ಅಧಿಕಾರಿ ಡಾ. ಜೆ.ಎಸ್.ಹಿಳ್ಳಿ, ‘ಆಹಾರ ಉತ್ಪಾದನೆ ಹೆಚ್ಚಿಸಲು ಉತ್ತಮ ಬೀಜ ಬೇಕು. ಆದ್ದರಿಂದ ರೈತರು ಬೀಜೋತ್ಪಾದನೆಯಲ್ಲಿ ತೊಡಗಿಸಿಕೊಳ್ಳಬೇಕು. ಇದಕ್ಕೆ ಕೃಷಿ ವಿಶ್ವವಿದ್ಯಾಲಯದ ಬೀಜ ಘಟಕದ ಸಹಕಾರವಿದೆ’ ಎಂದರು.</p>.<p>ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣ ಸಂಸ್ಥೆಯ ನಿರ್ದೇಶಕ ಡಾ. ಜೆ.ಕರುಣಾಕರ ಮಾತನಾಡಿ, ‘ರೈತರ ಉತ್ಪಾದನೆ ಮತ್ತು ಉತ್ಪಾದಕತೆ ಹೆಚ್ಚಿಸುವುದಕ್ಕೆ ಉತ್ತಮ ಗುಣಮಟ್ಟದ ಬೀಜಗಳು ಬೇಕು. ಈ ಬೀಜಗಳನ್ನು ರೈತರಿಗೆ ತಲುಪಿಸಲು ನಮ್ಮ ರಾಜ್ಯದಲ್ಲಿ ಅನೇಕ ಸಂಘ ಸಂಸ್ಥೆಗಳು ಕೆಲಸ ಮಾಡುತ್ತಿವೆ ಹಾಗೂ ಬೀಜಗಳ ಗುಣಮಟ್ಟದ ಮೌಲ್ಯಮಾಪನೆಗೆ ಉತ್ತಮ ಪ್ರಯೋಗಾಲಯಗಳು ಇವೆ. ರೈತರು ರೈತ ಉತ್ಪಾದಕ ಸಂಘಗಳ ಜೊತೆಗೆ ಒಡಂಬಡಿಕೆ ಮಾಡಿಕೊಂಡು ಇಂತಹ ಗುಣಮಟ್ಟದ ಬೀಜೋತ್ಪಾದನೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು’ ಎಂದರು.</p>.<p>ಇದೇ ಸಂದರ್ಭದಲ್ಲಿ ಜೋಳ, ಗೋಧಿ, ಕುಸುಬೆ, ಕಡಲೆ ಹಿಂಗಾರಿ ಬೆಳೆಗಳ ಬೀಜೋತ್ಪಾದನಾ ತಾಂತ್ರಿಕತೆಗಳ ಹಸ್ತ ಪತ್ರಿಕೆಗಳನ್ನು ವೇದಿಕೆ ಮೇಲಿದ್ದ ಗಣ್ಯರೆಲ್ಲರೂ ಬಿಡುಗಡೆಗೊಳಿಸಿದರು.</p>.<p>ಭಾರತೀಯ ಕಿಸಾನ್ ಸಂಘದ ಕರ್ನಾಟಕ ಉತ್ತರ ಪ್ರಾಂತದ ಅಧ್ಯಕ್ಷ ವಿವೇಕ ಮೋರೆ, ಶಶಿಮೌಳಿ ಕುಲಕರ್ಣಿ, ವೈ.ಎನ್.ಪಾಟೀಲ, ಪಿ.ಮಲ್ಲೇಶ, ಕುಲಸಚಿವ ಶಿವಾನಂದ ಬಿ. ಕರಾಳೆ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಧಾರವಾಡ: ‘ರೈತರಿಗೆ ಅಗತ್ಯವಿರುವ ತಾಂತ್ರಿಕ ವಿಚಾರಗಳಣ್ನು ನೀಡಲು ವಿಶ್ವವಿದ್ಯಾಲಯ ಸದಾ ಸಿದ್ಧವಿದೆ’ ಎಂದು ಧಾರವಾಡ ಕೃಷಿ ವಿಶ್ವವಿದ್ಯಾಲಯದ ಪ್ರಭಾರ ಕುಲಪತಿ ಡಾ. ಆರ್.ಬಸವರಾಜಪ್ಪ ಹೇಳಿದರು.</p>.<p>ಕೃಷಿ ವಿಶ್ವವಿದ್ಯಾಲಯದಲ್ಲಿ ಶನಿವಾರದಿಂದ ಆರಂಭವಾದ ಕೃಷಿ ಮೇಳದಲ್ಲಿ ಬೀಜ ಮೇಳದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ಕೃಷಿಯ ಜೊತೆಗೆ ರೈತರು ಪೂರಕ ಚಟುವಟಿಕೆಗಳನ್ನು ಕೈಗೊಳ್ಳಬೇಕು ಹಾಗೂ ಸಮಗ್ರ ಕೃಷಿಯನ್ನು ಅಳವಡಿಸಿಕೊಳ್ಳಬೇಕು’ ಎಂದು ಹೇಳಿದರು.</p>.<p>ಪ್ರಾಸ್ತಾವಿಕವಾಗಿ ಮಾತನಾಡಿದಬೀಜ ಘಟಕದ ವಿಶೇಷ ಅಧಿಕಾರಿ ಡಾ. ಜೆ.ಎಸ್.ಹಿಳ್ಳಿ, ‘ಆಹಾರ ಉತ್ಪಾದನೆ ಹೆಚ್ಚಿಸಲು ಉತ್ತಮ ಬೀಜ ಬೇಕು. ಆದ್ದರಿಂದ ರೈತರು ಬೀಜೋತ್ಪಾದನೆಯಲ್ಲಿ ತೊಡಗಿಸಿಕೊಳ್ಳಬೇಕು. ಇದಕ್ಕೆ ಕೃಷಿ ವಿಶ್ವವಿದ್ಯಾಲಯದ ಬೀಜ ಘಟಕದ ಸಹಕಾರವಿದೆ’ ಎಂದರು.</p>.<p>ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣ ಸಂಸ್ಥೆಯ ನಿರ್ದೇಶಕ ಡಾ. ಜೆ.ಕರುಣಾಕರ ಮಾತನಾಡಿ, ‘ರೈತರ ಉತ್ಪಾದನೆ ಮತ್ತು ಉತ್ಪಾದಕತೆ ಹೆಚ್ಚಿಸುವುದಕ್ಕೆ ಉತ್ತಮ ಗುಣಮಟ್ಟದ ಬೀಜಗಳು ಬೇಕು. ಈ ಬೀಜಗಳನ್ನು ರೈತರಿಗೆ ತಲುಪಿಸಲು ನಮ್ಮ ರಾಜ್ಯದಲ್ಲಿ ಅನೇಕ ಸಂಘ ಸಂಸ್ಥೆಗಳು ಕೆಲಸ ಮಾಡುತ್ತಿವೆ ಹಾಗೂ ಬೀಜಗಳ ಗುಣಮಟ್ಟದ ಮೌಲ್ಯಮಾಪನೆಗೆ ಉತ್ತಮ ಪ್ರಯೋಗಾಲಯಗಳು ಇವೆ. ರೈತರು ರೈತ ಉತ್ಪಾದಕ ಸಂಘಗಳ ಜೊತೆಗೆ ಒಡಂಬಡಿಕೆ ಮಾಡಿಕೊಂಡು ಇಂತಹ ಗುಣಮಟ್ಟದ ಬೀಜೋತ್ಪಾದನೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು’ ಎಂದರು.</p>.<p>ಇದೇ ಸಂದರ್ಭದಲ್ಲಿ ಜೋಳ, ಗೋಧಿ, ಕುಸುಬೆ, ಕಡಲೆ ಹಿಂಗಾರಿ ಬೆಳೆಗಳ ಬೀಜೋತ್ಪಾದನಾ ತಾಂತ್ರಿಕತೆಗಳ ಹಸ್ತ ಪತ್ರಿಕೆಗಳನ್ನು ವೇದಿಕೆ ಮೇಲಿದ್ದ ಗಣ್ಯರೆಲ್ಲರೂ ಬಿಡುಗಡೆಗೊಳಿಸಿದರು.</p>.<p>ಭಾರತೀಯ ಕಿಸಾನ್ ಸಂಘದ ಕರ್ನಾಟಕ ಉತ್ತರ ಪ್ರಾಂತದ ಅಧ್ಯಕ್ಷ ವಿವೇಕ ಮೋರೆ, ಶಶಿಮೌಳಿ ಕುಲಕರ್ಣಿ, ವೈ.ಎನ್.ಪಾಟೀಲ, ಪಿ.ಮಲ್ಲೇಶ, ಕುಲಸಚಿವ ಶಿವಾನಂದ ಬಿ. ಕರಾಳೆ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>