ಪಕ್ಷದ ಧಾರವಾಡ ಜಿಲ್ಲಾ ಗ್ರಾಮೀಣ ಉಪಾಧ್ಯಕ್ಷ ವಿಕಾಸ ಸೊಪ್ಪಿನ ಮಾತನಾಡಿ, ‘ಕರ್ನಾಟಕ - ಮಹಾರಾಷ್ಟ್ರ ಹಾಗೂ ಕೇರಳ ಗಡಿ ಸಮಸ್ಯೆಗಳ ಪರಿಹಾರಕ್ಕಾಗಿ ಕೇಂದ್ರ ಸರಕಾರ 1966ರಲ್ಲಿ ಮಹಾಜನ್ ಆಯೋಗ ರಚಿಸಿತ್ತು. ಆಯೋಗದ ವರದಿಯನ್ನು ಮಹಾರಾಷ್ಟ್ರ ತಿರಸ್ಕರಿಸಿದರೆ, ಕರ್ನಾಟಕ ಒಪ್ಪಿಕೊಂಡಿತು. ಅಂದಿನಿಂದ ಮಹಾರಾಷ್ಟ್ರ ಗಡಿ ವಿಷಯದಲ್ಲಿ ತಕರಾರು ತೆಗೆಯುತ್ತಿದ್ದರೂ, ವಿವಾದ ತಾರ್ಕಿಕ ಅಂತ್ಯ ಕಾಣಲಿಲ್ಲ. ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ನಡೆದ ಸಭೆಯಲ್ಲೂ ಯಾವುದೇ ತೀರ್ಮಾನ ತೆಗೆದುಕೊಳ್ಳದೆ, ಮತ್ತೆ ಕಾನೂನು ಮೊರೆ ಹೋಗಿದ್ದು ಸರಿಯಲ್ಲ’ ಎಂದು ಅಭಿಪ್ರಾಯಪಟ್ಟರು.