ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀರಾ ಮಾರಾಟ ಮಳಿಗೆ ಅ.18ಕ್ಕೆ ಆರಂಭ

ಧಾರವಾಡ ಜಿಲ್ಲೆಯ ಮೂರನೇ ಮಳಿಗೆ
Last Updated 17 ಅಕ್ಟೋಬರ್ 2020, 8:42 IST
ಅಕ್ಷರ ಗಾತ್ರ

ಹುಬ್ಬಳ್ಳಿ: ನಗರದ ಶಿರೂರ ಪಾರ್ಕ್‌ ಪ್ರದೇಶದಲ್ಲಿ ಭಾನುವಾರ ನೀರಾ ಮಾರಾಟ ಮಳಿಗೆಯ ಉದ್ಘಾಟನೆ ನಡೆಯಲಿದೆ ಎಂದು ಮಲೆನಾಡು ನಟ್ಸ್‌ ಆ್ಯಂಡ್‌ ಸ್ಪೈಸ್‌ ರೈತ ಉತ್ಪಾದಕ ಕಂಪನಿಯ ಅಧ್ಯಕ್ಷ ಮನೋಹರ ಮಸ್ಕಿ ತಿಳಿಸಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬೆಳಿಗ್ಗೆ 10.30ಕ್ಕೆ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಅವರು ‘ವಸಂತ ನೀರಾ ಸೆಂಟರ್‌’ ಉದ್ಘಾಟಿಸುವರು. ಧಾರವಾಡ ಜಿಲ್ಲೆಯಲ್ಲಿ ಇದು ಮೂರನೇ ಮಳಿಗೆಯಾಗಿದೆ. ರಾಜ್ಯದ 14ನೇಯದ್ದಾಗಿದೆ’ ಎಂದರು

‘240 ಎಂ.ಎಲ್‌ನಷ್ಟು ನೀರಾಗೆ ₹50 ದರವಿದೆ. 500 ಎಂ.ಎಲ್‌ನ ಬಾಟಲ್‌ಗೆ ₹120 ದರವಿದೆ’ ಎಂದರು.

ಆರೋಗ್ಯಕರ ಪೇಯ:‘ಔಷಧೀಯ ಗುಣಗಳನ್ನು ಹೊಂದಿರುವ ನೀರಾ ಆರೋಗ್ಯಕರ ಪೇಯವಾಗಿದೆ. ಆದರೆ, ಅದನ್ನು 4 ಡಿಗ್ರಿ ಸೆಲ್ಸಿಯಸ್‌ಗಿಂತಲೂ ಕಡಿಮೆ ತಾಪಮಾಣದಲ್ಲಿ ಶೇಖರಿಸಿಡಬೇಕು. ಇಲ್ಲದಿದ್ದರೆ, ಅದು ಹೆಂಡವಾಗಿ ಬದಲಾಗುತ್ತದೆ’ ಎಂದು ವಿವರಿಸಿದರು.

‘ತೆಂಗಿನ ಮರದ ಹೊಂಬಾಳೆಗೆ ಇನ್ಸುಲೇಟೆಡ್‌ ಐಸ್‌ಬಾಕ್ಸ್ ಅಳವಡಿಸಿ, ಕಡಿಮೆ ತಾಪಮಾನದಲ್ಲಿ ನೀರಾ ಸಂಗ್ರಹಿಸುತ್ತೇವೆ. ಅದನ್ನು ಶುದ್ಧೀಕರಿಸಿ ಗ್ರಾಹಕರಿಗೆ ಸರಬರಾಜು ಮಾಡಲಾಗುವುದು’ ಎಂದರು.

ನೀರಾ ಐಸ್‌ಕ್ರೀಂಗೂ ಸಿದ್ಧತೆ:‘ಸದ್ಯ ನೀರಾ ಬೆಲ್ಲದ ಪುಡಿ ಲಭ್ಯವಿದ್ದು, ಪ್ರತಿ ಕೆ.ಜಿಗೆ ₹1 ಸಾವಿರ ದರವಿದೆ. ದೀಪಾವಳಿ ವೇಳೆಗೆ ಇದರ ದರವನ್ನು ₹800 ಇಳಿಸಲಾಗುವುದು’ ಎಂದರು.

‘ನೀರಾ ಐಸ್‌ಕ್ರೀಂ ತಯಾರಿಗೂ ಮಾತುಕತೆ ನಡೆಯುತ್ತಿದ್ದು, ಮುಂದಿನ ಬೇಸಿಗೆ ಹೊತ್ತಿಗೆ ಬಿಡುಗಡೆ ಮಾಡುವ ನಿರೀಕ್ಷೆಯಿದೆ’ ಎಂದರು.

ಧಾರವಾಡ ಸುಪ್ರೀಂ ನೀರಾ ಪಾರ್ಲರ್‌ನ ಮಹಾದೇವ ಅರಸಿದ್ಧ, ಹುಬ್ಬಳ್ಳಿಯ ವಸಂತ ನೀರಾ ಸೆಂಟರ್‌ನ ನಿಂಗರಾಜ ಬಿಳಿಎಲೆ ಹಾಗೂ ಪ್ರಕಾಶ ಅರಳಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT