<p><strong>ಧಾರವಾಡ</strong>: 'ರಾಜ್ಯ ಸರ್ಕಾರದ ಏಕಾಏಕಿ ಪೆಟ್ರೋಲ್, ಡಿಸೇಲ್ ದರ ಏರಿಕೆ ನಿರ್ಧಾರವನ್ನು ತಡೆಹಿಡಿಯುವಂತೆ ಆದೇಶ ನೀಡಬೇಕು’ ಎಂದು ಬಿಜೆಪಿ ಮುಖಂಡ ಪಿ.ಎಚ್.ನೀರಲಕೇರಿ ಅವರು ಭಾನುವಾರ ರಾಜಭವನದಲ್ಲಿ ರಾಜ್ಯಪಾಲ ಥಾವರಚೆಂದ್ ಗೆಹಲೋತ್ ಅವರಿಗೆ ಮನವಿ ಸಲ್ಲಿಸಿದರು.</p>.<p>ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ರಾಜ್ಯ ಸರ್ಕಾರ ಮತ್ತೊಂದು ಆಘಾತ ನೀಡಿದೆ. ಪೆಟ್ರೋಲ್ ₹3 ಹಾಗೂ ಡಿಸೇಲ್ ಬೆಲೆಯಲ್ಲಿ ₹3.50 ದರ ಹೆಚ್ಚಳ ಮಾಡಿದೆ. ಈ ಬೆಲೆ ಏರಿಕೆಯು ಸಾರ್ವಜನಿಕರ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ. ಸಹಜವಾಗಿಯೇ ಸರಕು ಸಾಗಾಣಿಕೆ, ಹಾಗೂ ಸಾರಿಗೆ ದರಗಳೂ ವಿಪರೀತ ಹೆಚ್ಚಳವಾಗಲಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.</p>.<p>‘ಕಚ್ಚಾ ತೈಲದ ಬೆಲೆಯಲ್ಲಿ ವ್ಯತ್ಯಾಸವಾಗಿಲ್ಲ. ರಾಜ್ಯ ಸರ್ಕಾರ ಹೇಳಿದಂತೆ ಸರ್ಕಾರದ ಬೊಕ್ಕಸ ತುಂಬಿ ತುಳುಕುತ್ತಿದೆ. ಕರ್ನಾಟಕ ದಿವಾಳಿ ಸಹ ಆಗಿಲ್ಲ. ಆದಾಗ್ಯೂ ದಿಢೀರ್ ತೈಲಗಳ ಬೆಲೆ ಏರಿಕೆ ಯಾವು ಪುರುಷಾರ್ಥಕ್ಕೆ’ ಎಂದು ಪ್ರಶ್ನಿಸಿದ್ದಾರೆ.</p>.<p>‘ಗ್ಯಾರಂಟಿಗಳಿಂದ ಬರಿದಾದ ರಾಜ್ಯದ ಖಜಾನೆ ತುಂಬಿಸಲು, ಕೈ ಸರ್ಕಾರವು ತೈಲಗಳ ಬೆಲೆ ಏರಿಸಿ ಬಡವರ ಜೇಬಿಗೆ ಕತ್ತರಿ ಹಾಕಿದೆ. ಸರ್ಕಾರ ಬೆಲೆ ಏರಿಕೆ ನಿರ್ಧಾರ ಹಿಂಪಡೆಯುವಂತೆ ಸರ್ಕಾರಕ್ಕೆ ಆದೇಶಿಸಬೇಕು’ ಎಂದು ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ</strong>: 'ರಾಜ್ಯ ಸರ್ಕಾರದ ಏಕಾಏಕಿ ಪೆಟ್ರೋಲ್, ಡಿಸೇಲ್ ದರ ಏರಿಕೆ ನಿರ್ಧಾರವನ್ನು ತಡೆಹಿಡಿಯುವಂತೆ ಆದೇಶ ನೀಡಬೇಕು’ ಎಂದು ಬಿಜೆಪಿ ಮುಖಂಡ ಪಿ.ಎಚ್.ನೀರಲಕೇರಿ ಅವರು ಭಾನುವಾರ ರಾಜಭವನದಲ್ಲಿ ರಾಜ್ಯಪಾಲ ಥಾವರಚೆಂದ್ ಗೆಹಲೋತ್ ಅವರಿಗೆ ಮನವಿ ಸಲ್ಲಿಸಿದರು.</p>.<p>ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ರಾಜ್ಯ ಸರ್ಕಾರ ಮತ್ತೊಂದು ಆಘಾತ ನೀಡಿದೆ. ಪೆಟ್ರೋಲ್ ₹3 ಹಾಗೂ ಡಿಸೇಲ್ ಬೆಲೆಯಲ್ಲಿ ₹3.50 ದರ ಹೆಚ್ಚಳ ಮಾಡಿದೆ. ಈ ಬೆಲೆ ಏರಿಕೆಯು ಸಾರ್ವಜನಿಕರ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ. ಸಹಜವಾಗಿಯೇ ಸರಕು ಸಾಗಾಣಿಕೆ, ಹಾಗೂ ಸಾರಿಗೆ ದರಗಳೂ ವಿಪರೀತ ಹೆಚ್ಚಳವಾಗಲಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.</p>.<p>‘ಕಚ್ಚಾ ತೈಲದ ಬೆಲೆಯಲ್ಲಿ ವ್ಯತ್ಯಾಸವಾಗಿಲ್ಲ. ರಾಜ್ಯ ಸರ್ಕಾರ ಹೇಳಿದಂತೆ ಸರ್ಕಾರದ ಬೊಕ್ಕಸ ತುಂಬಿ ತುಳುಕುತ್ತಿದೆ. ಕರ್ನಾಟಕ ದಿವಾಳಿ ಸಹ ಆಗಿಲ್ಲ. ಆದಾಗ್ಯೂ ದಿಢೀರ್ ತೈಲಗಳ ಬೆಲೆ ಏರಿಕೆ ಯಾವು ಪುರುಷಾರ್ಥಕ್ಕೆ’ ಎಂದು ಪ್ರಶ್ನಿಸಿದ್ದಾರೆ.</p>.<p>‘ಗ್ಯಾರಂಟಿಗಳಿಂದ ಬರಿದಾದ ರಾಜ್ಯದ ಖಜಾನೆ ತುಂಬಿಸಲು, ಕೈ ಸರ್ಕಾರವು ತೈಲಗಳ ಬೆಲೆ ಏರಿಸಿ ಬಡವರ ಜೇಬಿಗೆ ಕತ್ತರಿ ಹಾಕಿದೆ. ಸರ್ಕಾರ ಬೆಲೆ ಏರಿಕೆ ನಿರ್ಧಾರ ಹಿಂಪಡೆಯುವಂತೆ ಸರ್ಕಾರಕ್ಕೆ ಆದೇಶಿಸಬೇಕು’ ಎಂದು ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>