<p><strong>ಹುಬ್ಬಳ್ಳಿ:</strong> ಉತ್ತರ ಕರ್ನಾಟಕದ ನೆರೆ ಹಾವಳಿಯ ಸಂಕಷ್ಟದ ಪರಿಸ್ಥಿತಿಯನ್ನು ಕೇಂದ್ರದ ಗಮನಕ್ಕೆ ತಂದು ಪರಿಹಾರ ಕೊಡಿಸುವಲ್ಲಿ ರಾಜ್ಯದ ಸಂಸದರು ವಿಫಲರಾಗಿದ್ದಾರೆ ಎಂದು ಆರೋಪಿಸಿದ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ ರಾಜ್ಯದ ಸಂಸದರ ಭಾವಚಿತ್ರಗಳನ್ನು ಹರಾಜು ಹಾಕಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ನಗರದ ಕಿತ್ತೂರು ರಾಣಿ ಚನ್ನಮ್ಮ ವೃತ್ತದಲ್ಲಿ ರಾಜ್ಯದ ಎಲ್ಲ ಸಂಸದರ ಫೋಟೊಗಳನ್ನು ಹಿಡಿದು ₹1 ಹಾಗೂ ₹2ಕ್ಕೆ ಹರಾಜು ಕೂಗಿದರು. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಭಾವಚಿತ್ರವನ್ನು ₹5ಕ್ಕೆ ಹರಾಜು ಮಾಡಿದರು. ಸಂಸದ ಕರಡಿ ಸಂಗಣ್ಣ ಅವರ ಭಾವಚಿತ್ರವನ್ನು ಬಾಲಕನೊಬ್ಬ ₹1ಕ್ಕೆ ಖರೀದಿಸಿದ. ನವೆಂಬರ್ 15ರಂದು ಬೆಳಗಾವಿಯಲ್ಲಿ ಸಂಸದರನ್ನು ಮತ್ತೊಮ್ಮೆ ಹರಾಜು ಮಾಡಲಾಗುವುದು ಎಂದು ನಾಗರಾಜ ತಿಳಿಸಿದರು.</p>.<p>‘ನೆರೆ ಹಾವಳಿಯ ಕಷ್ಟಕ್ಕೆ ₹50 ಸಾವಿರ ಕೋಟಿ ಪರಿಹಾರದ ಪ್ಯಾಕೇಜ್ ಕೊಡಿಸಲು ಸಂಸದರಿಗೆ ಸಾಧ್ಯವಾಗಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರನ್ನು ನೆರೆಹಾವಳಿ ಪ್ರದೇಶಕ್ಕೆ ಕರೆಸಲು ವಿಫಲರಾಗಿದ್ದಾರೆ, ಇಲ್ಲಿನ ಪರಿಸ್ಥಿತಿ ಬಗ್ಗೆ ಲೋಕಸಭೆಯಲ್ಲಿ ಚರ್ಚೆಯೂ ಮಾಡಲಿಲ್ಲ’ ಎಂದು ಟೀಕಿಸಿದರು.</p>.<p>‘ರಾಜ್ಯದ ಜನರ ಸಂಕಷ್ಟಕ್ಕೆ ಸ್ಪಂದಿಸಲು ನಮ್ಮ ಸಂಸದರು ಸಂಪೂರ್ಣವಾಗಿ ವಿಫಲರಾಗಿದ್ದಾರೆ. ಬೇರೆ ರಾಜ್ಯಗಳ ಸಂಸದರು ತಮ್ಮ ರಾಜ್ಯದ ಸಮಸ್ಯೆಗಳನ್ನು ಲೋಕಸಭೆಯಲ್ಲಿ ಚರ್ಚಿಸಿ ಪರಿಹಾರ ಕಂಡುಕೊಂಡಿದ್ದಾರೆ. ನಮ್ಮವರಿಗೆ ನಮ್ಮವರ ಬಗ್ಗೆ ಕಾಳಜಿಯೇ ಇಲ್ಲ’ ಎಂದರು. ಕನ್ನಡಪರ ಹೋರಾಟಗಾರ ಅಮೃತ ಇಜಾರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ಉತ್ತರ ಕರ್ನಾಟಕದ ನೆರೆ ಹಾವಳಿಯ ಸಂಕಷ್ಟದ ಪರಿಸ್ಥಿತಿಯನ್ನು ಕೇಂದ್ರದ ಗಮನಕ್ಕೆ ತಂದು ಪರಿಹಾರ ಕೊಡಿಸುವಲ್ಲಿ ರಾಜ್ಯದ ಸಂಸದರು ವಿಫಲರಾಗಿದ್ದಾರೆ ಎಂದು ಆರೋಪಿಸಿದ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ ರಾಜ್ಯದ ಸಂಸದರ ಭಾವಚಿತ್ರಗಳನ್ನು ಹರಾಜು ಹಾಕಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ನಗರದ ಕಿತ್ತೂರು ರಾಣಿ ಚನ್ನಮ್ಮ ವೃತ್ತದಲ್ಲಿ ರಾಜ್ಯದ ಎಲ್ಲ ಸಂಸದರ ಫೋಟೊಗಳನ್ನು ಹಿಡಿದು ₹1 ಹಾಗೂ ₹2ಕ್ಕೆ ಹರಾಜು ಕೂಗಿದರು. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಭಾವಚಿತ್ರವನ್ನು ₹5ಕ್ಕೆ ಹರಾಜು ಮಾಡಿದರು. ಸಂಸದ ಕರಡಿ ಸಂಗಣ್ಣ ಅವರ ಭಾವಚಿತ್ರವನ್ನು ಬಾಲಕನೊಬ್ಬ ₹1ಕ್ಕೆ ಖರೀದಿಸಿದ. ನವೆಂಬರ್ 15ರಂದು ಬೆಳಗಾವಿಯಲ್ಲಿ ಸಂಸದರನ್ನು ಮತ್ತೊಮ್ಮೆ ಹರಾಜು ಮಾಡಲಾಗುವುದು ಎಂದು ನಾಗರಾಜ ತಿಳಿಸಿದರು.</p>.<p>‘ನೆರೆ ಹಾವಳಿಯ ಕಷ್ಟಕ್ಕೆ ₹50 ಸಾವಿರ ಕೋಟಿ ಪರಿಹಾರದ ಪ್ಯಾಕೇಜ್ ಕೊಡಿಸಲು ಸಂಸದರಿಗೆ ಸಾಧ್ಯವಾಗಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರನ್ನು ನೆರೆಹಾವಳಿ ಪ್ರದೇಶಕ್ಕೆ ಕರೆಸಲು ವಿಫಲರಾಗಿದ್ದಾರೆ, ಇಲ್ಲಿನ ಪರಿಸ್ಥಿತಿ ಬಗ್ಗೆ ಲೋಕಸಭೆಯಲ್ಲಿ ಚರ್ಚೆಯೂ ಮಾಡಲಿಲ್ಲ’ ಎಂದು ಟೀಕಿಸಿದರು.</p>.<p>‘ರಾಜ್ಯದ ಜನರ ಸಂಕಷ್ಟಕ್ಕೆ ಸ್ಪಂದಿಸಲು ನಮ್ಮ ಸಂಸದರು ಸಂಪೂರ್ಣವಾಗಿ ವಿಫಲರಾಗಿದ್ದಾರೆ. ಬೇರೆ ರಾಜ್ಯಗಳ ಸಂಸದರು ತಮ್ಮ ರಾಜ್ಯದ ಸಮಸ್ಯೆಗಳನ್ನು ಲೋಕಸಭೆಯಲ್ಲಿ ಚರ್ಚಿಸಿ ಪರಿಹಾರ ಕಂಡುಕೊಂಡಿದ್ದಾರೆ. ನಮ್ಮವರಿಗೆ ನಮ್ಮವರ ಬಗ್ಗೆ ಕಾಳಜಿಯೇ ಇಲ್ಲ’ ಎಂದರು. ಕನ್ನಡಪರ ಹೋರಾಟಗಾರ ಅಮೃತ ಇಜಾರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>