ಭಾನುವಾರ ನೇಹಾ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಕೊಲೆ ಮಾಡಿರುವ ವ್ಯಕ್ತಿಯ ಬಗ್ಗೆ ಸಂಪೂರ್ಣ ತನಿಖೆಯಾಗಬೇಕು. ಅವನ ಹಿಂದೆ ಯಾರ್ಯಾರು ಇದ್ದಾರೆ, ಕೊಲೆಯ ಹಿಂದೆ ಯಾರ ಕೈವಾಡವಿದೆ ಎನ್ನುವುದು ಸಹ ತನಿಖೆ ನಡೆಯಬೇಕು. ಆರೋಪಿಗಷ್ಟೇ ಅಲ್ಲ, ಕೊಲೆಗೆ ಪ್ರೇರಣೆ ನೀಡಿದವರಿಗೂ ಕಠಿಣ ಶಿಕ್ಷೆಯಾಗಬೇಕು‘ ಎಂದು ಆಗ್ರಹಿಸಿದರು.