<p><strong>ಹುಬ್ಬಳ್ಳಿ</strong>: ಬಿವಿಬಿ ಕಾಲೇಜು ಆವರಣದಲ್ಲಿ ಕೊಲೆಯಾದ ವಿದ್ಯಾರ್ಥಿನಿ ನೇಹಾ ಅವರ ಪೋಷಕರಾದ ನಿರಂಜನಯ್ಯ ಹಿರೇಮಠ ಮತ್ತು ಗೀತಾ ಬುಧವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ, ಮನವಿ ಸಲ್ಲಿಸಿದರು.</p>.<p>ಬಿಜೆಪಿ ವಿಜಯ ಸಂಕಲ್ಪ ಸಮಾವೇಶದ ಸ್ಥಳದ ಬಳಿ ಭೇಟಿಯಾದ ಪೋಷಕರು, ‘ಹೆಣ್ಣುಮಕ್ಕಳ ಮೇಲೆ ನಡೆಯುವ ಇಂತಹ ಅಪರಾಧ ಕೃತ್ಯಗಳನ್ನು ತಡೆಯಲು ನೇಹಾ ಹೆಸರಿನಲ್ಲಿ ಕಾನೂನು ಜಾರಿಗೆ ತರಬೇಕು. ತನಿಖೆ ಬೇಗ ಪೂರ್ಣಗೊಳಿಸಿ, 120 ದಿನಗಳಲ್ಲಿ ಅಪರಾಧಿಗೆ ಮರಣದಂಡನೆ ಶಿಕ್ಷೆ ವಿಧಿಸಬೇಕು’ ಎಂದರು.</p>.<p>ಮನವಿಗೆ ಸ್ಪಂದಿಸಿದ ಶಾ, ‘ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರವು ಸಿಐಡಿಗೆ ವಹಿಸಿದೆ. ಆ ತನಿಖೆ ತೃಪ್ತಿಕರ ಆಗದಿದ್ದರೆ, ಸಿಬಿಐ ತನಿಖೆಗೆ ನೀವು ಒತ್ತಾಯಿಸಿ. ರಾಜ್ಯ ಸರ್ಕಾರವು ತನಿಖೆಯನ್ನು ಸಿಬಿಐಗೆ ಒಪ್ಪಿಸಿದರೆ, ನಾವು ಮುಂದಿನ ಕ್ರಮ ಜರುಗಿಸುತ್ತೇವೆ’ ಎಂದರು.</p>.<p>‘ಮಗಳ ಸಾವಿಗೆ ಸಿಐಡಿ ತನಿಖೆಯಲ್ಲಿ ನ್ಯಾಯ ಸಿಗದಿದ್ದರೆ, ಸಿಬಿಐ ತನಿಖೆಗೆ ಒತ್ತಾಯಿಸುವೆ. ಅಮಿತ್ ಶಾ ಅವರ ಜೊತೆ 10 ನಿಮಿಷ ಚರ್ಚಿಸಿದ್ದು, ಗಂಭೀರವಾಗಿ ಪರಿಗಣಿಸುವುದಾಗಿ ಭರವಸೆ ನೀಡಿದ್ದಾರೆ’ ಎಂದು ನಿರಂಜನಯ್ಯ ಹಿರೇಮಠ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ಬಿವಿಬಿ ಕಾಲೇಜು ಆವರಣದಲ್ಲಿ ಕೊಲೆಯಾದ ವಿದ್ಯಾರ್ಥಿನಿ ನೇಹಾ ಅವರ ಪೋಷಕರಾದ ನಿರಂಜನಯ್ಯ ಹಿರೇಮಠ ಮತ್ತು ಗೀತಾ ಬುಧವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ, ಮನವಿ ಸಲ್ಲಿಸಿದರು.</p>.<p>ಬಿಜೆಪಿ ವಿಜಯ ಸಂಕಲ್ಪ ಸಮಾವೇಶದ ಸ್ಥಳದ ಬಳಿ ಭೇಟಿಯಾದ ಪೋಷಕರು, ‘ಹೆಣ್ಣುಮಕ್ಕಳ ಮೇಲೆ ನಡೆಯುವ ಇಂತಹ ಅಪರಾಧ ಕೃತ್ಯಗಳನ್ನು ತಡೆಯಲು ನೇಹಾ ಹೆಸರಿನಲ್ಲಿ ಕಾನೂನು ಜಾರಿಗೆ ತರಬೇಕು. ತನಿಖೆ ಬೇಗ ಪೂರ್ಣಗೊಳಿಸಿ, 120 ದಿನಗಳಲ್ಲಿ ಅಪರಾಧಿಗೆ ಮರಣದಂಡನೆ ಶಿಕ್ಷೆ ವಿಧಿಸಬೇಕು’ ಎಂದರು.</p>.<p>ಮನವಿಗೆ ಸ್ಪಂದಿಸಿದ ಶಾ, ‘ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರವು ಸಿಐಡಿಗೆ ವಹಿಸಿದೆ. ಆ ತನಿಖೆ ತೃಪ್ತಿಕರ ಆಗದಿದ್ದರೆ, ಸಿಬಿಐ ತನಿಖೆಗೆ ನೀವು ಒತ್ತಾಯಿಸಿ. ರಾಜ್ಯ ಸರ್ಕಾರವು ತನಿಖೆಯನ್ನು ಸಿಬಿಐಗೆ ಒಪ್ಪಿಸಿದರೆ, ನಾವು ಮುಂದಿನ ಕ್ರಮ ಜರುಗಿಸುತ್ತೇವೆ’ ಎಂದರು.</p>.<p>‘ಮಗಳ ಸಾವಿಗೆ ಸಿಐಡಿ ತನಿಖೆಯಲ್ಲಿ ನ್ಯಾಯ ಸಿಗದಿದ್ದರೆ, ಸಿಬಿಐ ತನಿಖೆಗೆ ಒತ್ತಾಯಿಸುವೆ. ಅಮಿತ್ ಶಾ ಅವರ ಜೊತೆ 10 ನಿಮಿಷ ಚರ್ಚಿಸಿದ್ದು, ಗಂಭೀರವಾಗಿ ಪರಿಗಣಿಸುವುದಾಗಿ ಭರವಸೆ ನೀಡಿದ್ದಾರೆ’ ಎಂದು ನಿರಂಜನಯ್ಯ ಹಿರೇಮಠ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>