ಹುಬ್ಬಳ್ಳಿ: ಮತಾಂತರ ನಿಷೇಧ ಮಸೂದೆಯನ್ನು ಬೆಳಗಾವಿಯ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದು ಶಾಸಕ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತಾಂತರ ನಿಷೇಧ ಕಾಯ್ದೆ ಜಾರಿಗೆ ಕಾಂಗ್ರೆಸ್ ವಿರೋಧ ಇದ್ದೇ ಇರುತ್ತೆ. ಆದರೆ, ಈಗಾಗಲೇ ಹಲವು ರಾಜ್ಯಗಳಲ್ಲಿ ಮತಾಂತರ ನಿಷೇಧ ಕಾಯ್ದೆ ಇದೆ. ಹೀಗಾಗಿ, ಇಲ್ಲಿಯೂ ಕಾಯ್ದೆ ಜಾರಿ ಮಾಡುವ ಅಪೇಕ್ಷೆ ಇದೆ ಎಂದರು.
ಅಧಿವೇಶನ ಮುಗಿಯುವುದರೊಳಗಾಗಿ ಮಸೂದೆಗೆ ಸದನದಲ್ಲಿ ಒಪ್ಪಿಗೆ ಪಡೆಯಲಾಗುವುದು ಎಂದರು.
ಪರಿಷತ್ನಲ್ಲಿ ಬಹುಮತ: ಪರಿಷತ್ ಸದಸ್ಯತ್ವಕ್ಕೆ ನಡೆದ ಚುನಾವಣೆಯಲ್ಲಿ 15 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಪಕ್ಷ ಗೆಲುವು ಸಾಧಿಸಲಿದೆ. ಆ ಮೂಲಕ ಪರಿಷತ್ನಲ್ಲೂ ಬಹುಮತ ದೊರೆಯಲಿದೆ ಎಂದರು.