‘ವಿಧಾನಸಭೆ ದೇವಸ್ಥಾನವಿದ್ದಂತೆ. ಜನರ ಸಮಸ್ಯೆಗೆ ಪರಿಹಾರ ಕಲ್ಪಿಸುವ ವೇದಿಕೆ. ಅಂತಹ ಪವಿತ್ರ ಸ್ಥಳಕ್ಕೆ ನಮಸ್ಕರಿಸಿ ಹೋಗುವುದು ಸಂತಸ ತಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರನ್ನು ಭೇಟಿ ಮಾಡಿ ವಿಧಾಸಭೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿ ಅಧಿವೇಶನದಲ್ಲಿ ಪಾಲ್ಗೊಂಡಿದ್ದೇನೆ. ರಚನಾತ್ಮಕ ಚರ್ಚೆಗಳ ಮೂಲಕ ತಾಲ್ಲೂಕಿನ ಸಮಸ್ಯೆಗೆ ಸ್ಪಂದಿಸುವುದಾಗಿ’ ಹೇಳಿದರು.