<p><strong>ಹುಬ್ಬಳ್ಳಿ:</strong> ಉತ್ತರ ಕರ್ನಾಟಕದಲ್ಲಿ ಹೆಚ್ಚು ಬಂಡವಾಳ ಹೂಡಿಕೆಗೆ ಅನುಕೂಲವಾಗುವಂತಹ ವಾತಾವರಣ ನಿರ್ಮಿಸಿ, ಮೂಲಸೌಕರ್ಯ ಅಭಿವೃದ್ಧಿಪಡಿಸಲು ಕ್ರಮ ವಹಿಸಬೇಕು ಎಂದು ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯಿಂದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಅವರಿಗೆ ಈಚೆಗೆ ಮನವಿ ಸಲ್ಲಿಸಲಾಯಿತು.</p>.<p>ಬೆಂಗಳೂರಿನಲ್ಲಿ ಸಚಿವರನ್ನು ಭೇಟಿ ಮಾಡಿದ ಸಂಸ್ಥೆಯವರು, ಪ್ರೋತ್ಸಾಹದಾಯಕ ಕೈಗಾರಿಕಾ ನೀತಿಗಳು ಹಾಗೂ ವಿಶೇಷ ಯೋಜನೆಗಳನ್ನು ಜಾರಿಗೊಳಿಸಬೇಕು ಎಂದು ಕೋರಿದರು.</p>.<p>ಉತ್ತರ ಕರ್ನಾಟಕದ ಕೈಗಾರಿಕೋದ್ಯಮದ ಪ್ರಸ್ತುತ ಸ್ಥಿತಿ, ಸವಾಲುಗಳು, ಭವಿಷ್ಯದ ಅವಕಾಶಗಳು, ‘ಇನ್ಕಾಮೆಕ್ಸ್–2026’ ಬೃಹತ್ ಕೈಗಾರಿಕಾ ವಸ್ತುಪ್ರದರ್ಶನ, ರಾಜ್ಯದಲ್ಲಿ ಹೊಸದಾಗಿ ಬೃಹತ್ ಕೈಗಾರಿಕಾ ಪ್ರದೇಶಗಳ ಸ್ಥಾಪನೆ ಹಾಗೂ ಅಭಿವೃದ್ಧಿಗೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಚರ್ಚಿಸಲಾಯಿತು.</p>.<p>ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು, ‘ಉತ್ತರ ಕರ್ನಾಟಕದಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ’ ಎಂದು ಭರವಸೆ ನೀಡಿದರು.</p>.<p>ಸಂಸ್ಥೆಯ ಅಧ್ಯಕ್ಷ ಜಿ.ಕೆ.ಆದಪ್ಪಗೌಡರ, ಉಪಾಧ್ಯಕ್ಷ ಸಿದ್ದೇಶ್ವರ ಜಿ.ಕಮ್ಮಾರ, ಗೌರವ ಕಾರ್ಯದರ್ಶಿಗಳಾದ ಉದಯ ರೇವಣಕರ, ಪ್ರಕಾಶ ಶೃಂಗೇರಿ ಹಾಗೂ ಡಿ.ಪದ್ಮನಾಭ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ಉತ್ತರ ಕರ್ನಾಟಕದಲ್ಲಿ ಹೆಚ್ಚು ಬಂಡವಾಳ ಹೂಡಿಕೆಗೆ ಅನುಕೂಲವಾಗುವಂತಹ ವಾತಾವರಣ ನಿರ್ಮಿಸಿ, ಮೂಲಸೌಕರ್ಯ ಅಭಿವೃದ್ಧಿಪಡಿಸಲು ಕ್ರಮ ವಹಿಸಬೇಕು ಎಂದು ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯಿಂದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಅವರಿಗೆ ಈಚೆಗೆ ಮನವಿ ಸಲ್ಲಿಸಲಾಯಿತು.</p>.<p>ಬೆಂಗಳೂರಿನಲ್ಲಿ ಸಚಿವರನ್ನು ಭೇಟಿ ಮಾಡಿದ ಸಂಸ್ಥೆಯವರು, ಪ್ರೋತ್ಸಾಹದಾಯಕ ಕೈಗಾರಿಕಾ ನೀತಿಗಳು ಹಾಗೂ ವಿಶೇಷ ಯೋಜನೆಗಳನ್ನು ಜಾರಿಗೊಳಿಸಬೇಕು ಎಂದು ಕೋರಿದರು.</p>.<p>ಉತ್ತರ ಕರ್ನಾಟಕದ ಕೈಗಾರಿಕೋದ್ಯಮದ ಪ್ರಸ್ತುತ ಸ್ಥಿತಿ, ಸವಾಲುಗಳು, ಭವಿಷ್ಯದ ಅವಕಾಶಗಳು, ‘ಇನ್ಕಾಮೆಕ್ಸ್–2026’ ಬೃಹತ್ ಕೈಗಾರಿಕಾ ವಸ್ತುಪ್ರದರ್ಶನ, ರಾಜ್ಯದಲ್ಲಿ ಹೊಸದಾಗಿ ಬೃಹತ್ ಕೈಗಾರಿಕಾ ಪ್ರದೇಶಗಳ ಸ್ಥಾಪನೆ ಹಾಗೂ ಅಭಿವೃದ್ಧಿಗೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಚರ್ಚಿಸಲಾಯಿತು.</p>.<p>ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು, ‘ಉತ್ತರ ಕರ್ನಾಟಕದಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ’ ಎಂದು ಭರವಸೆ ನೀಡಿದರು.</p>.<p>ಸಂಸ್ಥೆಯ ಅಧ್ಯಕ್ಷ ಜಿ.ಕೆ.ಆದಪ್ಪಗೌಡರ, ಉಪಾಧ್ಯಕ್ಷ ಸಿದ್ದೇಶ್ವರ ಜಿ.ಕಮ್ಮಾರ, ಗೌರವ ಕಾರ್ಯದರ್ಶಿಗಳಾದ ಉದಯ ರೇವಣಕರ, ಪ್ರಕಾಶ ಶೃಂಗೇರಿ ಹಾಗೂ ಡಿ.ಪದ್ಮನಾಭ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>