ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ‘ನೇಮಕವನ್ನು ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದೆ. ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನಾಲ್ಕು ವಾರಗಳ ಒಳಗೆ ಉತ್ತರ ನೀಡಬೇಕೆಂದು ಸರ್ಕಾರಕ್ಕೆ ಸೂಚಿಸಿದೆ. ಲೋಕಾಯುಕ್ತ ಸಂಸ್ಥೆಗೆ ಅನೇಕ ಪ್ರಾಮಾಣಿಕರು ಬಂದು, ಹೋಗಿದ್ದಾರೆ. ಅಲ್ಲಿ ಪ್ರಾಮಾಣಿಕರೇ ಇರಬೇಕು ಎನ್ನುವ ಆಶಯ ನಮ್ಮದು’ ಎಂದರು.