ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ‘ಗ್ರಾಮ ಪಂಚಾಯ್ತಿಯ ವಿವಿಧ ಶ್ರೇಣಿಯ ನೌಕರರಿಗೆ ವೇತನ ನೀಡಲು ರಾಜ್ಯ ಸರ್ಕಾರ 2018ರ ಜನವರಿಯಲ್ಲಿ ಆದೇಶಿಸಿತ್ತು. ಆದರೆ, ಇದಕ್ಕೆ ಬೇಕಾಗಿದ್ದ ₹900 ಕೋಟಿಯಲ್ಲಿ ₹518 ಕೋಟಿಯನ್ನಷ್ಟೇ ಬಿಡುಗಡೆ ಮಾಡಿತ್ತು. ಉಳಿದ ₹382 ಕೋಟಿ ಬಿಡುಗಡೆ ಮಾಡುವಂತೆ ನಿರಂತರವಾಗಿ ಹೋರಾಟಗಳನ್ನು ಮಾಡಲಾಗಿತ್ತು. ಸರ್ಕಾರ ಈಗ ₹250 ಕೋಟಿ ವಿಶೇಷ ಅನುದಾನ ಬಿಡುಗಡೆಗೆ ಅಧಿಸೂಚನೆ ಹೊರಡಿಸಿದೆ. ಉಳಿದ ಹಣವನ್ನು ಬೇರೆ, ಬೇರೆ ಯೋಜನೆಗಳಿಗೆ ಮೀಸಲಿಟ್ಟ ಹಣ ನೀಡಲು ಮುಂದಾಗಿದೆ. ಇದರಿಂದ 6,300 ನೌಕರರಿಗೆ ಅನುಕೂಲವಾಗಲಿದೆ’ ಎಂದರು.