ಹುಬ್ಬಳ್ಳಿ: ‘ಪ್ರಜಾವಾಣಿ’ ಹಾಗೂ ‘ಡೆಕ್ಕನ್ ಹೆರಾಲ್ಡ್’ ಬಳಗದ ವತಿಯಿಂದ ಕೆಎಲ್ಇ ಸೊಸೈಟಿಯ ಶುಶ್ರೂಷಕ ವಿಜ್ಞಾನ ಸಂಸ್ಥೆ ಹಾಗೂ ಕೆನರಾ ಬ್ಯಾಂಕ್ ಸಹಯೋಗದಲ್ಲಿ, ನಗರದ ಕಿಮ್ಸ್ ಸಭಾಂಗಣದಲ್ಲಿ ನರ್ಸಿಂಗ್ ವಿದ್ಯಾರ್ಥಿಗಳಿಗಾಗಿ ಆಯೋಜಿಸಿರುವ ‘ಶುಶ್ರೂಷಕರ ಸಮ್ಮೇಳನ'ವನ್ನು ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆಯ ಹೆಚ್ಚುವರಿ ಆಯುಕ್ತ ಮಾಧವ ಗಿತ್ತೆ ಉದ್ಘಾಟಿಸಿದರು.
ಕಿಮ್ಸ್ ನಿರ್ದೇಶಕ ಡಾ. ರಾಮಲಿಂಗಪ್ಪ ಅಂಟರತಾನಿ, ನೈರುತ್ಯ ರೈಲ್ವೆಯ ಸಂತೋಷ್ ಹೆಗ್ಡೆ, ಕಿಮ್ಸ್ ನರ್ಸಿಂಗ್ ಕಾಲೇಜಿನ ಪ್ರಾಚಾರ್ಯೆ ಅನ್ನಪೂರ್ಣ, ಕೆಎಲ್ಇ ನರ್ಸಿಂಗ್ ವಿಜ್ಞಾನ ಸಂಸ್ಥೆಯ ಪ್ರಾಚಾರ್ಯ ಡಾ. ಸಂಜಯ್ ಎಂ. ಪೀರಾಪುರ ಇದ್ದರು.