‘ಅವಳಿ ನಗರದಲ್ಲಿ ಸಂಚರಿಸಲು ಇರುವ ಅಡೆತಡೆ ಇನ್ನೂ ಬಗೆಹರಿದಿಲ್ಲ. ಈ ಬಗ್ಗೆ ಕಂಪನಿಗೆ ಈಗಾಗಲೇ ಮನವಿ ಮಾಡಲಾಗಿದ್ದು, ಪ್ರಕ್ರಿಯೆ ಜಾರಿಯಲ್ಲಿದೆ ಎಂದು ಅವರು ಹೇಳಿದ್ದಾರೆ. ಕಂಪನಿಯಿಂದ ದಾಖಲೆಗಳು ಇನ್ನೂ ಸಲ್ಲಿಕೆಯಾಗಿಲ್ಲ ಎಂದು ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳು ಹೇಳುತ್ತಿದ್ದಾರೆ. ಈ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕಾದರೆ ಸಂಘಟನೆ ಅಗತ್ಯ ಎಂಬ ಅಭಿಪ್ರಾಯ ವ್ಯಕ್ತವಾದ ಕಾರಣ, ಸಂಘ ರಚಿಸಿ ಚುನಾವಣೆ ನಡೆಸಲಾಯಿತು’ ಎಂದು ಮಹೇಶ ‘ಪ್ರಜಾವಾಣಿ’ಗೆ ತಿಳಿಸಿದರು.