‘ರಾಸಾಯನಿಕಗಳನ್ನು ಬಳಸಿ ಕಳೆ ನಿರ್ಮೂಲನೆ ಮಾಡುವುದರಿಂದ ಭೂಮಿಯ ಫಲವತ್ತತೆಗೆ ಹಾನಿಯಾಗುತ್ತದೆ. ಹೀಗಾಗಿ, ಈ ಯಂತ್ರವನ್ನು ಪರಿಚಯಿಸಲಾಗಿದೆ. ಇದು ಪೆಟ್ರೋಲ್ ಚಾಲಿತವಾಗಿದ್ದು, ಕಳೆ ನಿಯಂತ್ರಣ ಹಾಗೂ ನೆಲ ಹಗುರು ಮಾಡಲು ಸಹಕಾರಿಯಾಗಿದೆ. ಯಂತ್ರವು ಮೂರು ಹರಗುವ ಕುಂಟೆಗಳನ್ನು ಹೊಂದಿದ್ದು, ಬೀಜ ಬಿತ್ತುವ ಹಾಗೂ ರಾಸಾಯನಿಕ ಸಿಂಪಡಣೆಗೆ ಸಹಕಾರಿ ಆಗುವ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗಿದೆ’ ಎಂದರು.