ಹುಬ್ಬಳ್ಳಿ: ವ್ಯಕ್ತಿಗೆ ₹3.50 ಲಕ್ಷ ವಂಚನೆ
ಹುಬ್ಬಳ್ಳಿ: ಶಿವಗಿರಿ ಕಾಲೊನಿಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ವಸತಿ ಸಮುಚ್ಚಯದಲ್ಲಿನ ಲಿಫ್ಟ್ ಕೆಲಸ ನೀಡುವುದಾಗಿ ಅಯೋಧ್ಯಾ ನಗರದ ಫರ್ವೇಜ್ ಬಳಗಾನೂರು ಎಂಬಾತ ಶಕ್ತಿ ಕಾಲೊನಿಯ ಸದಾನಂದ ಜಮಖಂಡಿ ಅವರಿಂದ ₹3.50 ಲಕ್ಷ ಮೊತ್ತದ ಚೆಕ್ ಪಡೆದು ವಂಚಿಸಿದ್ದಾನೆ. ಒಂದು ವರ್ಷದಿಂದ ಕೆಲಸವನ್ನೂ ನೀಡದೆ, ಹಣವನ್ನು ಮರಳಿಸದೆ ವಂಚಿಸಿರುವ ಆರೋಪದ ಮೇಲೆ ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿನ್ನಾಭರಣ ಕಳವು: ಹಳೇ ಹುಬ್ಬಳ್ಳಿಯ ಆನಂದನಗರದ ಚಿದಂಬರ ಲಕ್ಕಣ್ಣವರ ಅವರ ಮನೆ ಬಾಗಿಲು ಮುರಿದು ಒಳ ನುಗ್ಗಿರುವ ಕಳ್ಳರು ₹60 ಸಾವಿರ ಮೌಲ್ಯದ ಚಿನ್ನಾಭರಣ ದೋಚಿದ್ದಾರೆ. ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.