’ರೈತರು, ಸ್ತ್ರೀಶಕ್ತಿ ಸಂಘದವರು ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಹೊಂದಿರುವ ಸಾಲ ಮನ್ನಾ ಮಾಡಬೇಕು. ಎಪಿಎಂಸಿ ಕಾಯ್ದೆ ತಿದ್ದುಪಡಿ ಅನ್ನದಾತರ ಪರವಾಗಿ ಇರಬೇಕು, 60 ವರ್ಷ ಮೇಲ್ಪಟ್ಟ ರೈತರಿಗೆ ₹3,000 ಮಾಸಾಶನ ನೀಡಬೇಕು, ಎಪಿಎಂಸಿಗಳಿಗೆ ಹುತಾತ್ಮ ರೈತರು ಹೆಸರು ನಾಮಕಾರಣ ಮಾಡಬೇಕು, ಕೃಷಿ ಚಟುವಟಿಕೆಗಳಿಗೆ ರೈತರಿಗೆ ತೈಲ ದರದಲ್ಲಿ ವಿನಾಯಿತಿ ನೀಡಬೇಕು, ಕಳಸಾ ಬಂಡೂರಿ ನಾಲಾ ಯೋಜನೆ ಕಾರ್ಯ ಶೀಘ್ರದಲ್ಲಿ ಪೂರ್ಣಗೊಳಿಸಬೇಕು, ಪ್ರಕೃತಿ ವಿಕೋಪಕ್ಕೆ ಒಳಗಾದ ರೈತರಿಗೆ ಸರ್ಕಾರ ಸಕಾಲಕ್ಕೆ ಪರಿಹಾರ ಒದಗಿಸಲು ತುರ್ತು ಕ್ರಮ ತೆಗೆದುಕೊಳ್ಳಬೇಕು’ ಎಂದು ಆಗ್ರಹಿಸಿದರು.