<p><strong>ಹುಬ್ಬಳ್ಳಿ</strong>: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಪೌರಕಾರ್ಮಿಕರಿಗೆ ನೇರ ವೇತನ ನೀಡುವಂತೆ ಪಾಲಿಕೆ ಆಯುಕ್ತ ರುದ್ರೇಶ ಘಾಳಿ ಆದೇಶಿಸಿದ್ದಾರೆ.</p>.<p>ಪಾಲಿಕೆ ವ್ಯಾಪ್ತಿಯಲ್ಲಿ ನೇರ ವೇತನದಿಂದ ಹೊರಗುಳಿದಿರುವ 799 ಪೌರಕಾರ್ಮಿಕರನ್ನು ನೇರ ವೇತನಕ್ಕೆ ಒಳಪಡಿಸುವಂತೆ 2023ರ ಅ.30ರಂದು ನಡೆದ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಠರಾವು ಪಾಸು ಮಾಡಿ, ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿತ್ತು.</p>.<p>ಪಾಲಿಕೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರನ್ನು 700 ಜನಸಂಖ್ಯೆಗೆ ಒಬ್ಬರಂತೆ ನೇರ ನೇಮಕಾತಿ ಮಾಡಿಕೊಂಡು, ಪಾಲಿಕೆಯಿಂದಲೇ ಸಂಭಾವನೆ ನೀಡುವಂತೆ ಆಯುಕ್ತರು ಆದೇಶದಲ್ಲಿ ತಿಳಿಸಿದ್ದಾರೆ.</p>.<p>ವಲಯ ಆಯುಕ್ತರು ತಮ್ಮ ಹಂತದಲ್ಲಿ ಸೆ.30ರಿಂದ ಜಾರಿಗೆ ಬರುವಂತೆ ಸ್ವಚ್ಛತಾ ಗುತ್ತಿಗೆದಾರರಿಗೆ ನೀಡಿದ್ದ ಕಾರ್ಯಾದೇಶವನ್ನು ರದ್ದುಪಡಿಸಬೇಕು ಎಂದು ಸೂಚಿಸಿದ್ದಾರೆ. ಸ್ವಚ್ಛತಾ ಕಾರ್ಯವನ್ನು ಹೊರಗುತ್ತಿಗೆ ಮೂಲಕ ನಿರ್ವಹಿಸುವುದನ್ನು ಸ್ಥಗಿತಗೊಳಿಸುವಂತೆ 2017ರಲ್ಲೇ ಸರ್ಕಾರ ಆದೇಶಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಪೌರಕಾರ್ಮಿಕರಿಗೆ ನೇರ ವೇತನ ನೀಡುವಂತೆ ಪಾಲಿಕೆ ಆಯುಕ್ತ ರುದ್ರೇಶ ಘಾಳಿ ಆದೇಶಿಸಿದ್ದಾರೆ.</p>.<p>ಪಾಲಿಕೆ ವ್ಯಾಪ್ತಿಯಲ್ಲಿ ನೇರ ವೇತನದಿಂದ ಹೊರಗುಳಿದಿರುವ 799 ಪೌರಕಾರ್ಮಿಕರನ್ನು ನೇರ ವೇತನಕ್ಕೆ ಒಳಪಡಿಸುವಂತೆ 2023ರ ಅ.30ರಂದು ನಡೆದ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಠರಾವು ಪಾಸು ಮಾಡಿ, ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿತ್ತು.</p>.<p>ಪಾಲಿಕೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರನ್ನು 700 ಜನಸಂಖ್ಯೆಗೆ ಒಬ್ಬರಂತೆ ನೇರ ನೇಮಕಾತಿ ಮಾಡಿಕೊಂಡು, ಪಾಲಿಕೆಯಿಂದಲೇ ಸಂಭಾವನೆ ನೀಡುವಂತೆ ಆಯುಕ್ತರು ಆದೇಶದಲ್ಲಿ ತಿಳಿಸಿದ್ದಾರೆ.</p>.<p>ವಲಯ ಆಯುಕ್ತರು ತಮ್ಮ ಹಂತದಲ್ಲಿ ಸೆ.30ರಿಂದ ಜಾರಿಗೆ ಬರುವಂತೆ ಸ್ವಚ್ಛತಾ ಗುತ್ತಿಗೆದಾರರಿಗೆ ನೀಡಿದ್ದ ಕಾರ್ಯಾದೇಶವನ್ನು ರದ್ದುಪಡಿಸಬೇಕು ಎಂದು ಸೂಚಿಸಿದ್ದಾರೆ. ಸ್ವಚ್ಛತಾ ಕಾರ್ಯವನ್ನು ಹೊರಗುತ್ತಿಗೆ ಮೂಲಕ ನಿರ್ವಹಿಸುವುದನ್ನು ಸ್ಥಗಿತಗೊಳಿಸುವಂತೆ 2017ರಲ್ಲೇ ಸರ್ಕಾರ ಆದೇಶಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>