<p><strong>ಅಳ್ನಾವರ:</strong> ಎರಡು ದಿನಗಳಿಂದಕಿತ್ತೂರು ಭಾಗದಲ್ಲಿ ಸುರಿದ ಮಳೆಯಿಂದ ಅಪಾರ ಪ್ರಮಾಣದ ನೀರು ಹೂಲಿಕೇರಿ ಇಂದಿರಮ್ಮನ ಕೆರೆಗೆ ಹರಿದು ಬಂದು ಕೆರೆ ಸಂಪೂರ್ಣ ಭರ್ತಿಯಾಗಿದೆ. ಹೆಚ್ಚುವರಿ ನೀರು ಕಾಲುವೆ ಹಾಗೂ ಕೋಡಿ ಕಟ್ಟೆ ಮೇಲಿಂದ ಹರಿದಿದೆ.</p>.<p>ಕೆರೆ ಭಾನುವಾರ ರಾತ್ರಿ ಕೋಡಿ ಬಿದ್ದಿತ್ತು. ಸೋಮವಾರಬೆಳಿಗ್ಗೆ ಕೋಡಿ ಕಟ್ಟೆಯಿಂದ ರಭಸವಾಗಿ ಹರಿದ ನೀರು ಜಲಪಾತದಂತೆ ಕಂಡು ನೋಡುಗರನ್ನು ಆಕರ್ಷಿಸಿತು.ನೀರಿನ ರಭಸಕ್ಕೆ ಹಳೆಯ ಕೋಡಿ ಕಟ್ಟೆದ ಮಧ್ಯಭಾಗ ತುಂಡಾಗಿದೆ. ಸಂಜೆ ವೇಳೆಗೆ ನೀರು ಹರಿವಿನ ಪ್ರಮಾಣ ಕಡಿಮೆಯಾಗಿತ್ತು.</p>.<p>ಕಳೆದ ವರ್ಷ ವ್ಯಾಪಕ ಮಳೆಗೆ ಕೋಡಿ ಕಟ್ಟೆ ಕುಸಿದಿತ್ತು. ಈ ಬಾರಿ ಇಂಥ ಅಪಾಯ ಮರುಕಳಿಸಬಾರದೆಂದು ಕೋಡಿ ಕಟ್ಟೆ ಪಕ್ಕ ತಡೆಗೋಡೆ ನಿರ್ಮಿಸಲಾಗಿದೆ. ಇದರಿಂದ ಅನಾಹುತ ತಪ್ಪಿದೆ. ಸದ್ಯಕ್ಕೆ ಯಾವುದೇ ಅಪಾಯವಿಲ್ಲ ಎಂದು ಸಣ್ಣ ನೀರಾವರಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ನಟೇಶ ತಿಳಿಸಿದರು.</p>.<p>ಸ್ಥಳಕ್ಕೆ ಭೇಟಿ ನೀಡಿದಜಿಲ್ಲಾ ಯೋಜನಾಧಿಕಾರಿ ವಿನಾಯಕ ಪಾಲನಕರ ಮಾತನಾಡಿ 'ನೀರಿನ ಮಟ್ಟ ಹಾಗೂ ಒಳಹರಿವಿನ ಬಗ್ಗೆ ತೀವ್ರ ನಿಗಾ ವಹಿಸಲಾಗಿದೆ. ಅತಿವೃಷ್ಟಿ ಎದುರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ’ ಎಂದರು.</p>.<p>ಕೆರೆಯ ಸೊಬಗು ಕಣ್ತುಂಬಿಕೊಳ್ಳಲು ಸಾಕಷ್ಟು ಜನ ಬಂದಿದ್ದರು. ಮೊಬೈಲ್ನಲ್ಲಿ ಸೆಲ್ಫಿ ತೆಗೆದುಕೊಂಡು, ಕೆರೆಯ ದೃಶ್ಯಾವಳಿ ಚಿತ್ರೀಕರಿಸಿಕೊಂಡರು.ತಹಶೀಲ್ದಾರ್ ಅಮರೇಶ ಪಮ್ಮಾರ, ಡಿವೈಎಸ್ಪಿ ರವಿ ನಾಯಕ, ಪಿಎಸ್ಐ ಎಸ್.ಆರ್. ಕಣವಿ, ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ವೈ.ಜಿ.ಗದ್ದಿಗೌಡರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಳ್ನಾವರ:</strong> ಎರಡು ದಿನಗಳಿಂದಕಿತ್ತೂರು ಭಾಗದಲ್ಲಿ ಸುರಿದ ಮಳೆಯಿಂದ ಅಪಾರ ಪ್ರಮಾಣದ ನೀರು ಹೂಲಿಕೇರಿ ಇಂದಿರಮ್ಮನ ಕೆರೆಗೆ ಹರಿದು ಬಂದು ಕೆರೆ ಸಂಪೂರ್ಣ ಭರ್ತಿಯಾಗಿದೆ. ಹೆಚ್ಚುವರಿ ನೀರು ಕಾಲುವೆ ಹಾಗೂ ಕೋಡಿ ಕಟ್ಟೆ ಮೇಲಿಂದ ಹರಿದಿದೆ.</p>.<p>ಕೆರೆ ಭಾನುವಾರ ರಾತ್ರಿ ಕೋಡಿ ಬಿದ್ದಿತ್ತು. ಸೋಮವಾರಬೆಳಿಗ್ಗೆ ಕೋಡಿ ಕಟ್ಟೆಯಿಂದ ರಭಸವಾಗಿ ಹರಿದ ನೀರು ಜಲಪಾತದಂತೆ ಕಂಡು ನೋಡುಗರನ್ನು ಆಕರ್ಷಿಸಿತು.ನೀರಿನ ರಭಸಕ್ಕೆ ಹಳೆಯ ಕೋಡಿ ಕಟ್ಟೆದ ಮಧ್ಯಭಾಗ ತುಂಡಾಗಿದೆ. ಸಂಜೆ ವೇಳೆಗೆ ನೀರು ಹರಿವಿನ ಪ್ರಮಾಣ ಕಡಿಮೆಯಾಗಿತ್ತು.</p>.<p>ಕಳೆದ ವರ್ಷ ವ್ಯಾಪಕ ಮಳೆಗೆ ಕೋಡಿ ಕಟ್ಟೆ ಕುಸಿದಿತ್ತು. ಈ ಬಾರಿ ಇಂಥ ಅಪಾಯ ಮರುಕಳಿಸಬಾರದೆಂದು ಕೋಡಿ ಕಟ್ಟೆ ಪಕ್ಕ ತಡೆಗೋಡೆ ನಿರ್ಮಿಸಲಾಗಿದೆ. ಇದರಿಂದ ಅನಾಹುತ ತಪ್ಪಿದೆ. ಸದ್ಯಕ್ಕೆ ಯಾವುದೇ ಅಪಾಯವಿಲ್ಲ ಎಂದು ಸಣ್ಣ ನೀರಾವರಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ನಟೇಶ ತಿಳಿಸಿದರು.</p>.<p>ಸ್ಥಳಕ್ಕೆ ಭೇಟಿ ನೀಡಿದಜಿಲ್ಲಾ ಯೋಜನಾಧಿಕಾರಿ ವಿನಾಯಕ ಪಾಲನಕರ ಮಾತನಾಡಿ 'ನೀರಿನ ಮಟ್ಟ ಹಾಗೂ ಒಳಹರಿವಿನ ಬಗ್ಗೆ ತೀವ್ರ ನಿಗಾ ವಹಿಸಲಾಗಿದೆ. ಅತಿವೃಷ್ಟಿ ಎದುರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ’ ಎಂದರು.</p>.<p>ಕೆರೆಯ ಸೊಬಗು ಕಣ್ತುಂಬಿಕೊಳ್ಳಲು ಸಾಕಷ್ಟು ಜನ ಬಂದಿದ್ದರು. ಮೊಬೈಲ್ನಲ್ಲಿ ಸೆಲ್ಫಿ ತೆಗೆದುಕೊಂಡು, ಕೆರೆಯ ದೃಶ್ಯಾವಳಿ ಚಿತ್ರೀಕರಿಸಿಕೊಂಡರು.ತಹಶೀಲ್ದಾರ್ ಅಮರೇಶ ಪಮ್ಮಾರ, ಡಿವೈಎಸ್ಪಿ ರವಿ ನಾಯಕ, ಪಿಎಸ್ಐ ಎಸ್.ಆರ್. ಕಣವಿ, ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ವೈ.ಜಿ.ಗದ್ದಿಗೌಡರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>