ಚಲನಚಿತ್ರ ಸೆನ್ಸಾರ್ ಬೋರ್ಡ್ ಸ್ಕ್ರೀನಿಂಗ್ ಸಮಿತಿಯ ಸದಸ್ಯ ಎಚ್.ಎಸ್. ಕಿರಣ ಮಾತನಾಡಿ, ಸಂಗೀತ, ಸಾಹಿತ್ಯ, ನಾಟಕ, ನೃತ್ಯದಂತಹ ಕಲಾ ಪ್ರಕಾರದಲ್ಲಿ ತೊಡಗಿಸಿಕೊಂಡವರು ತಮ್ಮ ಬೇಡಿಕೆಗಳನ್ನು ಅಧಿಕಾರಿಗಳು, ಜನಪ್ರತಿನಿಧಿಗಳ ಮುಂದಿಟ್ಟು, ಛಲ ಬಿಡದೆ ಈಡೇರಿಸಿಕೊಳ್ಳುತ್ತಾರೆ. ಚಿತ್ರಕಲಾ ಕ್ಷೇತ್ರದಲ್ಲಿ ಇಂತಹ ಗಟ್ಟಿ ಧ್ವನಿ ಕೇಳಿ ಬರದಿರುವುದು ಬೇಸರದ ಸಂಗತಿ. ಆರ್ಟ್ ಗ್ಯಾಲರಿ ನಿರ್ಮಾಣಕ್ಕಾಗಿ ಎಲ್ಲರೂ ಒಗ್ಗಟ್ಟಾಗಿ ಧ್ವನಿ ಎತ್ತಬೇಕಿದೆ ಎಂದರು.