ಅಧ್ಯಾಪಕ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಸೀಮಾ ಸಿದ್ದು ಮೊಗಲಿಶೆಟ್ಟರ್ ಪರ ಪಾಲಿಕೆ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು ‘ಧಾರವಾಡದ ಸಿವಿಲ್ ಆಸ್ಪತ್ರೆ, ನವಲಗುಂದ, ಕಲಘಟಗಿ, ಕುಂದಗೋಳ ಆರೋಗ್ಯ ಕೇಂದ್ರಗಳಲ್ಲೂ ಆಮ್ಲಜನಕ ಘಟಕ ಸ್ಥಾಪಿಸಲಾಗುತ್ತಿದೆ. ಕೋವಿಡ್ ಮೂರನೇ ಅಲೆಯನ್ನು ಸಮರ್ಥವಾಗಿ ನಿಭಾಯಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ’ ಎಂದರು.