ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಬ್ಬಳ್ಳಿಯಲ್ಲಿ ಆಮ್ಲಜನಕ ಘಟಕ: ಮುನೇನಕೊಪ್ಪ

Last Updated 1 ಸೆಪ್ಟೆಂಬರ್ 2021, 4:02 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಕೋವಿಡ್‌ ರೋಗಿಗಳಿಗೆ ನೆರವಾಗಲು ರಾಜ್ಯದ ಮೊದಲ ಆಮ್ಲಜನಕ ಘಟಕವನ್ನು ಹುಬ್ಬಳ್ಳಿಯಲ್ಲಿ ಶೀಘ್ರದಲ್ಲಿಯೇ ಆರಂಭಿಸಲಾಗುವುದು ಎಂದು ರಾಜ್ಯದ ಸಕ್ಕರೆ ಹಾಗೂ ಜವಳಿ ಖಾತೆ ಸಚಿವ ಶಂಕರಪಾಟೀಲ ಮುನೇನಕೊಪ್ಪ ಹೇಳಿದರು.

ಅಧ್ಯಾಪಕ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಸೀಮಾ ಸಿದ್ದು ಮೊಗಲಿಶೆಟ್ಟರ್ ಪರ ಪಾಲಿಕೆ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು ‘ಧಾರವಾಡದ ಸಿವಿಲ್ ಆಸ್ಪತ್ರೆ, ನವಲಗುಂದ, ಕಲಘಟಗಿ, ಕುಂದಗೋಳ ಆರೋಗ್ಯ ಕೇಂದ್ರಗಳಲ್ಲೂ ಆಮ್ಲಜನಕ ಘಟಕ ಸ್ಥಾಪಿಸಲಾಗುತ್ತಿದೆ. ಕೋವಿಡ್‌ ಮೂರನೇ ಅಲೆಯನ್ನು ಸಮರ್ಥವಾಗಿ ನಿಭಾಯಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ’ ಎಂದರು.

ಉದ್ಯಮಿ ವಿಜಯ ಶೆಟ್ಟರ್, ನಿಖಿಲ್ ಶೆಟ್ಟರ್, ಬಿಜೆಪಿ ಮುಖಂಡ ಸಿದ್ದು ಮೊಗಲಿಶೆಟ್ಟರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT