ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮುಸ್ಲಿಂ ಸಮುದಾಯವು ಲಿಂಗಾ ಯತರು ಮತ್ತು ಒಕ್ಕಲಿಗರೊಂದಿಗೆ ಸೋದರ ಸಂಬಂಧ ಹೊಂದಿದೆ. ಅವರ ಮೀಸಲಾತಿ ಬೇಡಿಕೆ ನ್ಯಾಯೋಚಿತ. ಆದರೆ, ನಮ್ಮ ಮೀಸಲಾತಿ ಕಿತ್ತು ಹಾಕಿ, ಅವೆರಡೂ ಸಮುದಾಯಗಳಿಗೆ ಹಂಚಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಹೋದರರ ನಡುವೆ ಜಗಳ ಹಚ್ಚುವ ಪ್ರಯತ್ನ ಮಾಡಿ ದ್ದಾರೆ. ಅದು ಎಂದಿಗೂ ಸಾಧ್ಯವಿಲ್ಲ’ ಎಂದು ಹೇಳಿದರು.