<p><strong>ಹುಬ್ಬಳ್ಳಿ</strong>: ‘ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಪಂಚಮಸಾಲಿ ಸಮಾಜದವರು ಜಾತಿ, ಧರ್ಮದ ಕಾಲಂನಲ್ಲಿ ಏನು ನಮೂದಿಸಬೇಕು ಎಂದು ಸೆ. 17ರಂದು ಬೆಂಗಳೂರಿನಲ್ಲಿ ಸಭೆ ನಡೆಸಿ ನಿರ್ಧರಿಸಲಾಗುವುದು’ ಎಂದು ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಹೇಳಿದರು. </p>.<p>‘14 ಜಿಲ್ಲೆಗಳಲ್ಲಿ ಪ್ರವಾಸ ಮಾಡಿ, ಭಕ್ತರು, ಮುಖಂಡರು, ಶಿಕ್ಷಣ ತಜ್ಞರ ಜತೆ ಚರ್ಚಿಸಿದ್ದೇವೆ. ಲಿಂಗಾಯತರಲ್ಲಿ ಶೇ 80ರಷ್ಟು ಪಂಚಮಸಾಲಿ ಸಮಾಜದವರು ಇದ್ದಾರೆ. ಹರಿಹರ, ಕೂಡಲಸಂಗಮ, ಜಮಖಂಡಿಯಲ್ಲಿ ಪೀಠಗಳಿವೆ. ಈ ಪೀಠಗಳ ಮಠಾಧೀಶರು, ಪಂಚಮಸಾಲಿ ಸಂಘದವೀ ನಿರ್ಣಯವನ್ನು ಸಮಾಜದವರು ಕೇಳಬೇಕು’ ಎಂದು ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಬಸವ ಸಂಸ್ಕೃತಿ ಯಾತ್ರೆ ಸ್ವಾಗತಾರ್ಹ. ಅದರಲ್ಲಿ ಸ್ವಾಮೀಜಿಗಳು ಬಸವಣ್ಣನವರ ವಿಚಾರ, ತತ್ವ, ಸಿದ್ಧಾಂತ ತಿಳಿಸಬೇಕು. ಸಮಾಜವನ್ನು ಒಡೆಯುವ ಹೇಳಿಕೆ ನೀಡಬಾರದು’ ಎಂದು ಹೇಳಿದರು. </p>.<p>‘ವಚನಾನಂದ ಸ್ವಾಮೀಜಿ ಅವರನ್ನು ಪಂಚಮಸಾಲಿ ಪೀಠಕ್ಕೆ ತಂದಿದ್ದು ನಾನು’ ಎಂಬ ದಿಂಗಾಲೇಶ್ವರ ಸ್ವಾಮೀಜಿ ಹೇಳಿಕೆಗೆ ಪ್ರತಿಕ್ರಿಯಿಸಿ, ‘ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಕೊಡಿಸುವಂತೆ ಕೋರಲು ನಮ್ಮ ಮಠಕ್ಕೆ ಬಂದಿದ್ದರು. ಅವರ ಹೇಳಿಕೆಗೆ ಮಹತ್ವ ಕೊಡುವ ಅಗತ್ಯ ಇಲ್ಲ’ ಎಂದರು.</p>.<p>‘ಹುಬ್ಬಳ್ಳಿಯಲ್ಲಿ ಸೆ.19ರಂದು ನಡೆಯುವುದು ವೀರಶೈವ ಲಿಂಗಾಯತ ಏಕತೆ ಸಮಾವೇಶವಲ್ಲ. ಬೇಡ ಜಂಗಮ ಸಮಾವೇಶ. ಪಂಚಮಸಾಲಿ ಸಮಾಜದವರು ಹೋಗಬಾರದು’ ಎಂದು ಕೋರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ‘ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಪಂಚಮಸಾಲಿ ಸಮಾಜದವರು ಜಾತಿ, ಧರ್ಮದ ಕಾಲಂನಲ್ಲಿ ಏನು ನಮೂದಿಸಬೇಕು ಎಂದು ಸೆ. 17ರಂದು ಬೆಂಗಳೂರಿನಲ್ಲಿ ಸಭೆ ನಡೆಸಿ ನಿರ್ಧರಿಸಲಾಗುವುದು’ ಎಂದು ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಹೇಳಿದರು. </p>.<p>‘14 ಜಿಲ್ಲೆಗಳಲ್ಲಿ ಪ್ರವಾಸ ಮಾಡಿ, ಭಕ್ತರು, ಮುಖಂಡರು, ಶಿಕ್ಷಣ ತಜ್ಞರ ಜತೆ ಚರ್ಚಿಸಿದ್ದೇವೆ. ಲಿಂಗಾಯತರಲ್ಲಿ ಶೇ 80ರಷ್ಟು ಪಂಚಮಸಾಲಿ ಸಮಾಜದವರು ಇದ್ದಾರೆ. ಹರಿಹರ, ಕೂಡಲಸಂಗಮ, ಜಮಖಂಡಿಯಲ್ಲಿ ಪೀಠಗಳಿವೆ. ಈ ಪೀಠಗಳ ಮಠಾಧೀಶರು, ಪಂಚಮಸಾಲಿ ಸಂಘದವೀ ನಿರ್ಣಯವನ್ನು ಸಮಾಜದವರು ಕೇಳಬೇಕು’ ಎಂದು ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಬಸವ ಸಂಸ್ಕೃತಿ ಯಾತ್ರೆ ಸ್ವಾಗತಾರ್ಹ. ಅದರಲ್ಲಿ ಸ್ವಾಮೀಜಿಗಳು ಬಸವಣ್ಣನವರ ವಿಚಾರ, ತತ್ವ, ಸಿದ್ಧಾಂತ ತಿಳಿಸಬೇಕು. ಸಮಾಜವನ್ನು ಒಡೆಯುವ ಹೇಳಿಕೆ ನೀಡಬಾರದು’ ಎಂದು ಹೇಳಿದರು. </p>.<p>‘ವಚನಾನಂದ ಸ್ವಾಮೀಜಿ ಅವರನ್ನು ಪಂಚಮಸಾಲಿ ಪೀಠಕ್ಕೆ ತಂದಿದ್ದು ನಾನು’ ಎಂಬ ದಿಂಗಾಲೇಶ್ವರ ಸ್ವಾಮೀಜಿ ಹೇಳಿಕೆಗೆ ಪ್ರತಿಕ್ರಿಯಿಸಿ, ‘ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಕೊಡಿಸುವಂತೆ ಕೋರಲು ನಮ್ಮ ಮಠಕ್ಕೆ ಬಂದಿದ್ದರು. ಅವರ ಹೇಳಿಕೆಗೆ ಮಹತ್ವ ಕೊಡುವ ಅಗತ್ಯ ಇಲ್ಲ’ ಎಂದರು.</p>.<p>‘ಹುಬ್ಬಳ್ಳಿಯಲ್ಲಿ ಸೆ.19ರಂದು ನಡೆಯುವುದು ವೀರಶೈವ ಲಿಂಗಾಯತ ಏಕತೆ ಸಮಾವೇಶವಲ್ಲ. ಬೇಡ ಜಂಗಮ ಸಮಾವೇಶ. ಪಂಚಮಸಾಲಿ ಸಮಾಜದವರು ಹೋಗಬಾರದು’ ಎಂದು ಕೋರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>