<p><strong>ಹುಬ್ಬಳ್ಳಿ:</strong> ‘ದೇಹ ಹಾಗೂ ಮನಸ್ಸಿನ ಮೇಲೆ ದುಷ್ಪರಿಣಾಮ ಬೀರುವ ಮೊಬೈಲ್ಫೋನ್ ಗೀಳಿನಿಂದ ಪೋಷಕರು ಹೊರಬರಬೇಕು. ಜ್ಞಾನ ಹೆಚ್ಚಿಸುವ ಪುಸ್ತಕಗಳ ಸಾಂಗತ್ಯ ಬೆಳೆಸಿಕೊಂಡರೆ ಮಕ್ಕಳು ಸಹ ಅದನ್ನೇ ಅನುಸರಿಸುತ್ತಾರೆ’ ಎಂದು ಇನ್ನರ್ವೀಲ್ ಹುಬ್ಬಳ್ಳಿ ಪಶ್ಚಿಮದ ಅಧ್ಯಕ್ಷೆ ಜ್ಯೋತಿ ಸೇಟ್ ಹೇಳಿದರು.</p>.<p>ತಾಲ್ಲೂಕಿನ ಕಿರೇಸೂರ ಸರ್ಕಾರಿ ಪ್ರೌಢಶಾಲಾ ಆವರಣದ ಅರಳೀಕಟ್ಟೆ ತೆರೆದ ವಾಚನಾಲಯದಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ, ಡಿ.ಎಸ್.ಇ.ಆರ್.ಟಿ ಸಹಯೋಗದಲ್ಲಿ ‘ಇಂಡಿಯಾ ಫೌಂಡೇಷನ್ ಫಾರ್ ಆರ್ಟ್ಸ್, ಕಲಿ-ಕಲಿಸು ಕಲಾ ಅಂತರ್ಗತ ಕಲಿಕಾ ಯೋಜನೆ’ ಅಂಗವಾಗಿ ನಡೆದ ‘ಮೊಬೈಲ್ ಬಿಡಿ- ಪುಸ್ತಕ ಹಿಡಿ; ಪಾಲಕರೇ ಓದೋಣ ಬನ್ನಿ’ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿದರು.</p>.<p>ಅರಳೀಕಟ್ಟೆ ತೆರೆದ ವಾಚನಾಲಯದ ಸಂಯೋಜಕ ಲಿಂಗರಾಜ ರಾಮಾಪೂರ ಪ್ರಾಸ್ತಾವಿಕವಾಗಿ ಮಾತನಾಡಿ, ‘ಪೋಷಕರು–ಶಿಕ್ಷಕರ ಮಹಾಸಭೆ ಮೂಲಕ ಮಕ್ಕಳ ಶೈಕ್ಷಣಿಕ ಅಭಿವೃದ್ಧಿ ಸಾಧಿಸುವುದು ಅಗತ್ಯವಾಗಿದೆ. ಪಾಲಕರು ಪುಸ್ತಕಗಳನ್ನು ಓದುವುದು ಸಕಾರಾತ್ಮಕ ಬೆಳವಣಿಗೆ. ಈ ಅಭ್ಯಾಸ ಮಕ್ಕಳಲ್ಲೂ ಪ್ರವಹಿಸಬೇಕಿದೆ’ ಎಂದು ತಿಳಿಸಿದರು.</p>.<p>ಇನ್ನರ್ವೀಲ್ ಕ್ಲಬ್ ಕಾರ್ಯದರ್ಶಿ ಮೇಘನಾ ಹಿರೇಮಠ, ಸದಸ್ಯರಾದ ರಶ್ಮಿ ವಿ.ಪಾಟೀಲ, ಪಲ್ಲವಿ ರಾಠೋಡ ಮಾತನಾಡಿದರು. ಸುವರ್ಣಾ ಸೇಠ್ ಅವರು ಗರ್ಭಕೋಶ ಕ್ಯಾನ್ಸರ್ ಹಾಗೂ ಲಸಿಕೆಗಳ ಬಗ್ಗೆ ಮಾಹಿತಿ ನೀಡಿದರು. ಮುಖ್ಯಶಿಕ್ಷಕರಾದ ಸುಮನ ತೇಲಂಗ ಅಧ್ಯಕ್ಷತೆ ವಹಿಸಿದ್ದರು.</p>.<p>ಎಸ್.ಡಿ.ಎಂ.ಸಿ. ಅಧ್ಯಕ್ಷ ಸಂಜೀವ ತಿರ್ಲಾಪೂರ, ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ಕೆ.ಪಾಟೀಲ, ಸದಸ್ಯ ಎಚ್.ಎಸ್.ರಾಯನಗೌಡ್ರ, ಮಂಜುನಾಥ ಹುಬ್ಬಳ್ಳಿ, ಪ್ರವೀಣ ಚಿಕ್ಕರಡ್ಡಿ, ಮಹಾಬಳೇಶ್ವರ ಕೊಂಡಗೋಳಿ, ಪ್ರಭು ಬಡಿಗೇರ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ‘ದೇಹ ಹಾಗೂ ಮನಸ್ಸಿನ ಮೇಲೆ ದುಷ್ಪರಿಣಾಮ ಬೀರುವ ಮೊಬೈಲ್ಫೋನ್ ಗೀಳಿನಿಂದ ಪೋಷಕರು ಹೊರಬರಬೇಕು. ಜ್ಞಾನ ಹೆಚ್ಚಿಸುವ ಪುಸ್ತಕಗಳ ಸಾಂಗತ್ಯ ಬೆಳೆಸಿಕೊಂಡರೆ ಮಕ್ಕಳು ಸಹ ಅದನ್ನೇ ಅನುಸರಿಸುತ್ತಾರೆ’ ಎಂದು ಇನ್ನರ್ವೀಲ್ ಹುಬ್ಬಳ್ಳಿ ಪಶ್ಚಿಮದ ಅಧ್ಯಕ್ಷೆ ಜ್ಯೋತಿ ಸೇಟ್ ಹೇಳಿದರು.</p>.<p>ತಾಲ್ಲೂಕಿನ ಕಿರೇಸೂರ ಸರ್ಕಾರಿ ಪ್ರೌಢಶಾಲಾ ಆವರಣದ ಅರಳೀಕಟ್ಟೆ ತೆರೆದ ವಾಚನಾಲಯದಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ, ಡಿ.ಎಸ್.ಇ.ಆರ್.ಟಿ ಸಹಯೋಗದಲ್ಲಿ ‘ಇಂಡಿಯಾ ಫೌಂಡೇಷನ್ ಫಾರ್ ಆರ್ಟ್ಸ್, ಕಲಿ-ಕಲಿಸು ಕಲಾ ಅಂತರ್ಗತ ಕಲಿಕಾ ಯೋಜನೆ’ ಅಂಗವಾಗಿ ನಡೆದ ‘ಮೊಬೈಲ್ ಬಿಡಿ- ಪುಸ್ತಕ ಹಿಡಿ; ಪಾಲಕರೇ ಓದೋಣ ಬನ್ನಿ’ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿದರು.</p>.<p>ಅರಳೀಕಟ್ಟೆ ತೆರೆದ ವಾಚನಾಲಯದ ಸಂಯೋಜಕ ಲಿಂಗರಾಜ ರಾಮಾಪೂರ ಪ್ರಾಸ್ತಾವಿಕವಾಗಿ ಮಾತನಾಡಿ, ‘ಪೋಷಕರು–ಶಿಕ್ಷಕರ ಮಹಾಸಭೆ ಮೂಲಕ ಮಕ್ಕಳ ಶೈಕ್ಷಣಿಕ ಅಭಿವೃದ್ಧಿ ಸಾಧಿಸುವುದು ಅಗತ್ಯವಾಗಿದೆ. ಪಾಲಕರು ಪುಸ್ತಕಗಳನ್ನು ಓದುವುದು ಸಕಾರಾತ್ಮಕ ಬೆಳವಣಿಗೆ. ಈ ಅಭ್ಯಾಸ ಮಕ್ಕಳಲ್ಲೂ ಪ್ರವಹಿಸಬೇಕಿದೆ’ ಎಂದು ತಿಳಿಸಿದರು.</p>.<p>ಇನ್ನರ್ವೀಲ್ ಕ್ಲಬ್ ಕಾರ್ಯದರ್ಶಿ ಮೇಘನಾ ಹಿರೇಮಠ, ಸದಸ್ಯರಾದ ರಶ್ಮಿ ವಿ.ಪಾಟೀಲ, ಪಲ್ಲವಿ ರಾಠೋಡ ಮಾತನಾಡಿದರು. ಸುವರ್ಣಾ ಸೇಠ್ ಅವರು ಗರ್ಭಕೋಶ ಕ್ಯಾನ್ಸರ್ ಹಾಗೂ ಲಸಿಕೆಗಳ ಬಗ್ಗೆ ಮಾಹಿತಿ ನೀಡಿದರು. ಮುಖ್ಯಶಿಕ್ಷಕರಾದ ಸುಮನ ತೇಲಂಗ ಅಧ್ಯಕ್ಷತೆ ವಹಿಸಿದ್ದರು.</p>.<p>ಎಸ್.ಡಿ.ಎಂ.ಸಿ. ಅಧ್ಯಕ್ಷ ಸಂಜೀವ ತಿರ್ಲಾಪೂರ, ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ಕೆ.ಪಾಟೀಲ, ಸದಸ್ಯ ಎಚ್.ಎಸ್.ರಾಯನಗೌಡ್ರ, ಮಂಜುನಾಥ ಹುಬ್ಬಳ್ಳಿ, ಪ್ರವೀಣ ಚಿಕ್ಕರಡ್ಡಿ, ಮಹಾಬಳೇಶ್ವರ ಕೊಂಡಗೋಳಿ, ಪ್ರಭು ಬಡಿಗೇರ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>