ಪ್ರಧಾನಿ ನರೇಂದ್ರ ಮೋದಿ ವಿದ್ಯಾರ್ಥಿಗಳೊಂದಿಗೆ ನಡೆಸಿದ ‘ಪರೀಕ್ಷಾ ಪೆ ಚರ್ಚಾ’ ಸಂವಾದ ಕಾರ್ಯಕ್ರಮದ ನೇರ ಪ್ರಸಾರವನ್ನು ಇಲ್ಲಿನ ದೇಶಪಾಂಡೆ ನಗರದ ಸವಾಯಿ ಗಂಧರ್ವ ಸಭಾಂಗಣದಲ್ಲಿ ಶುಕ್ರವಾರ ವಿದ್ಯಾರ್ಥಿಗಳ ಜೊತೆ ವೀಕ್ಷಿಸಿ, ನಂತರ ಮಾತನಾಡಿದರು. ‘ಪರೀಕ್ಷೆ ಹೇಗೆ ಎದುರಿಸಬೇಕು, ಮಾನಸಿಕ –ದೈಹಿಕ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ, ಅಧ್ಯಯನ, ನಿದ್ರೆ ಹೀಗೆ ಇತ್ಯಾದಿ ವಿಷಯಗಳ ಕುರಿತು ಪ್ರಧಾನಿ ವಿದ್ಯಾರ್ಥಿಗಳೊಂದಿಗೆ ಚರ್ಚಿಸಿ, ಸಲಹೆ–ಸೂಚನೆಗಳನ್ನು ನೀಡಿದ್ದಾರೆ. ವಿದ್ಯಾರ್ಥಿಗಳ ಜೀವನಕ್ಕೆ ಪ್ರೇರಣದಾಯಕವಾಗಿದ್ದು, ಪ್ರತಿಭೆ ಅನಾವರಣಕ್ಕೆ ಸಹಕಾರಿಯಾಗಿದೆ. ಪರೀಕ್ಷೆಯಲ್ಲಿ ಉತ್ತೀರ್ಣರಾದಂತೆ ಜೀವನವೂ ವಿಕಾಸವಾಗಬೇಕು ಎನ್ನುವುದು ಪ್ರಧಾನಿಯವರ ಆಶಯ’ ಎಂದರು.