<p><strong>ಹುಬ್ಬಳ್ಳಿ: </strong>ಹುಬ್ಬಳ್ಳಿ, ಬೆಂಗಳೂರು, ಮೈಸೂರಿನಲ್ಲಿಸಾರ್ವಜನಿಕ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ ಟ್ರಕ್ ಟರ್ಮಿನಲ್ ನಿರ್ಮಿಸಲು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗುವುದು. ಇಲ್ಲಿನ ಹೊರವಲಯದಅಂಚಟಗೇರಿಯಲ್ಲಿ ₹228 ಕೋಟಿ ವೆಚ್ಚದಲ್ಲಿ ಲಾಜಿಸ್ಟಿಕ್ ಪಾರ್ಕ್ನಿರ್ಮಿಸಲು ಯೋಜನೆ ರೂಪಿಸಲಾಗಿದೆ ಎಂದು ಡಿ.ದೇವರಾಜ ಅರಸು ಟ್ರಕ್ ಟರ್ಮಿನಲ್ ನಿಗಮದ ಅಧ್ಯಕ್ಷ ಡಿ.ಎಸ್.ವೀರಯ್ಯ ಹೇಳಿದರು.</p>.<p>ಅಂಚಟಗೇರಿಯಲ್ಲಿ ಉದ್ದೇಶಿತ ಟ್ರಕ್ ಟರ್ಮಿನಲ್ ಪರಿಶೀಲಿಸಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ‘ಪ್ರತಿ ಜಿಲ್ಲೆಯಲ್ಲೂ ಟ್ರಕ್ ಟರ್ಮಿನಲ್ ನಿರ್ಮಿಸುವ ಉದ್ದೇಶವಿದೆ. ಈ ಕುರಿತು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ನಿರ್ಮಾಣಕ್ಕೆ ಅಗತ್ಯ ಇರುವ ಜಮೀನು ನೀಡುವಂತೆ ಕೋರಲಾಗಿದೆ. ಸರ್ಕಾರಿ ಜಮೀನುಗಳು ಲಭ್ಯವಿರದಿದ್ದರೆ, ನಿಗಮದ ವತಿಯಿಂದ ಖಾಸಗಿ ಜಮೀನು ಖರೀದಿ ಮಾಡಲಾಗುವುದು. ಇದಕ್ಕಾಗಿ ₹300 ಕೋಟಿ ಮೀಸಲಿಡುವಂತೆ ಸರ್ಕಾರಕ್ಕೆ ಕೋರಲಾಗುವುದು’ ಎಂದರು.</p>.<p>‘ಅಂಚಗೇರಿಯಲ್ಲಿ 56 ಎಕರೆ ಜಮೀನು ಮಂಜೂರು ಆಗಿದೆ. ಇದರಲ್ಲಿ 4 ಎಕರೆ ಗ್ರಾಮಕ್ಕೆ ಹೊಂದಿಕೊಂಡಂತಿದೆ.ಇದನ್ನು ಗ್ರಾಮಕ್ಕೆ ನೀಡುವಂತೆ ಸಾರ್ವಜನಿಕರು ಮನವಿ ಮಾಡಿದ್ದಾರೆ. ಈ ಕುರಿತು ನಿರ್ಧರಿಸಲು ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ.ಅಂಚಟಗೇರಿಯ 43.38 ಎಕರೆಯಲ್ಲಿ, 2,000 ಟ್ರಕ್ ನಿಲುಗಡೆ, 1,500 ದ್ವಿಚಕ್ರ, 700 ನಾಲ್ಕು ಚಕ್ರದ ವಾಹನಗಳ ನಿಲುಗಡೆ ಸಾಮರ್ಥ್ಯವುಳ್ಳ ಟ್ರಕ್ ಟರ್ಮಿನಲ್ ನಿರ್ಮಿಸಲಾಗುವುದು’ ಎಂದರು.</p>.<p>‘ರಾಜ್ಯ ಸರ್ಕಾರ 2018-19ರ ಬಜೆಟ್ನಲ್ಲಿ ₹110 ಕೋಟಿ ಮೀಸಲಿಟ್ಟಿದೆ.ನಿಗಮದ ವತಿಯಿಂದ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗುವುದು ಎಂದರು.</p>.<p>ವ್ಯವಸ್ಥಾಪಕ ನಿರ್ದೇಶಕ ಪುರುಷೋತ್ತಮ್, ನಿರ್ದೇಶಕ ಗೈಲುಸಾಬ್ ಎಂ ಹೊನ್ನಾಳ್, ಅಧಿಕಾರಿಗಳಾದ ಹೇಮಣ್ಣ, ಜೀವಣ್ಣ, ಗ್ರಾಮ ಲೆಕ್ಕಾಧಿಕಾರಿ ದಾನೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: </strong>ಹುಬ್ಬಳ್ಳಿ, ಬೆಂಗಳೂರು, ಮೈಸೂರಿನಲ್ಲಿಸಾರ್ವಜನಿಕ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ ಟ್ರಕ್ ಟರ್ಮಿನಲ್ ನಿರ್ಮಿಸಲು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗುವುದು. ಇಲ್ಲಿನ ಹೊರವಲಯದಅಂಚಟಗೇರಿಯಲ್ಲಿ ₹228 ಕೋಟಿ ವೆಚ್ಚದಲ್ಲಿ ಲಾಜಿಸ್ಟಿಕ್ ಪಾರ್ಕ್ನಿರ್ಮಿಸಲು ಯೋಜನೆ ರೂಪಿಸಲಾಗಿದೆ ಎಂದು ಡಿ.ದೇವರಾಜ ಅರಸು ಟ್ರಕ್ ಟರ್ಮಿನಲ್ ನಿಗಮದ ಅಧ್ಯಕ್ಷ ಡಿ.ಎಸ್.ವೀರಯ್ಯ ಹೇಳಿದರು.</p>.<p>ಅಂಚಟಗೇರಿಯಲ್ಲಿ ಉದ್ದೇಶಿತ ಟ್ರಕ್ ಟರ್ಮಿನಲ್ ಪರಿಶೀಲಿಸಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ‘ಪ್ರತಿ ಜಿಲ್ಲೆಯಲ್ಲೂ ಟ್ರಕ್ ಟರ್ಮಿನಲ್ ನಿರ್ಮಿಸುವ ಉದ್ದೇಶವಿದೆ. ಈ ಕುರಿತು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ನಿರ್ಮಾಣಕ್ಕೆ ಅಗತ್ಯ ಇರುವ ಜಮೀನು ನೀಡುವಂತೆ ಕೋರಲಾಗಿದೆ. ಸರ್ಕಾರಿ ಜಮೀನುಗಳು ಲಭ್ಯವಿರದಿದ್ದರೆ, ನಿಗಮದ ವತಿಯಿಂದ ಖಾಸಗಿ ಜಮೀನು ಖರೀದಿ ಮಾಡಲಾಗುವುದು. ಇದಕ್ಕಾಗಿ ₹300 ಕೋಟಿ ಮೀಸಲಿಡುವಂತೆ ಸರ್ಕಾರಕ್ಕೆ ಕೋರಲಾಗುವುದು’ ಎಂದರು.</p>.<p>‘ಅಂಚಗೇರಿಯಲ್ಲಿ 56 ಎಕರೆ ಜಮೀನು ಮಂಜೂರು ಆಗಿದೆ. ಇದರಲ್ಲಿ 4 ಎಕರೆ ಗ್ರಾಮಕ್ಕೆ ಹೊಂದಿಕೊಂಡಂತಿದೆ.ಇದನ್ನು ಗ್ರಾಮಕ್ಕೆ ನೀಡುವಂತೆ ಸಾರ್ವಜನಿಕರು ಮನವಿ ಮಾಡಿದ್ದಾರೆ. ಈ ಕುರಿತು ನಿರ್ಧರಿಸಲು ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ.ಅಂಚಟಗೇರಿಯ 43.38 ಎಕರೆಯಲ್ಲಿ, 2,000 ಟ್ರಕ್ ನಿಲುಗಡೆ, 1,500 ದ್ವಿಚಕ್ರ, 700 ನಾಲ್ಕು ಚಕ್ರದ ವಾಹನಗಳ ನಿಲುಗಡೆ ಸಾಮರ್ಥ್ಯವುಳ್ಳ ಟ್ರಕ್ ಟರ್ಮಿನಲ್ ನಿರ್ಮಿಸಲಾಗುವುದು’ ಎಂದರು.</p>.<p>‘ರಾಜ್ಯ ಸರ್ಕಾರ 2018-19ರ ಬಜೆಟ್ನಲ್ಲಿ ₹110 ಕೋಟಿ ಮೀಸಲಿಟ್ಟಿದೆ.ನಿಗಮದ ವತಿಯಿಂದ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗುವುದು ಎಂದರು.</p>.<p>ವ್ಯವಸ್ಥಾಪಕ ನಿರ್ದೇಶಕ ಪುರುಷೋತ್ತಮ್, ನಿರ್ದೇಶಕ ಗೈಲುಸಾಬ್ ಎಂ ಹೊನ್ನಾಳ್, ಅಧಿಕಾರಿಗಳಾದ ಹೇಮಣ್ಣ, ಜೀವಣ್ಣ, ಗ್ರಾಮ ಲೆಕ್ಕಾಧಿಕಾರಿ ದಾನೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>