ಹುಬ್ಬಳ್ಳಿ: ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರ ರೈಲು ನಿಲ್ದಾಣದಲ್ಲಿ ಸುರಕ್ಷತಾ ಕಾಮಗಾರಿ ನಡೆಸುವ ಸಲುವಾಗಿ ಮಾರ್ಚ್ 13ರಿಂದ 16ರವರೆಗೆ ರೈಲು ಸಂಚಾರವನ್ನು ಭಾಗಶಃ ರದ್ದುಗೊಳಿಸಲಾಗುತ್ತಿದೆ ಎಂದು ಕೊಂಕಣ ರೈಲ್ವೆ ತಿಳಿಸಿದೆ.
ಮಾರ್ಚ್ 12, 13, 14 ಮತ್ತು 15ರಂದು ಬೆಂಗಳೂರು-ಮುರುಡೇಶ್ವರ ಎಕ್ಸ್ಪ್ರೆಸ್ (16585) ರೈಲು ಭಟ್ಕಳ ನಿಲ್ದಾಣದವರೆಗೆ ಮಾತ್ರ ಸಂಚರಿಸಲಿದೆ. ಭಟ್ಕಳ ಮತ್ತು ಮುರುಡೇಶ್ವರ ನಿಲ್ದಾಣಗಳ ನಡುವಿನ ಸಂಚಾರ ರದ್ದಾಗಲಿದೆ.
ಮಾರ್ಚ್ 13, 14, 15 ಮತ್ತು 16ರಂದು ಮುರುಡೇಶ್ವರ-ಬೆಂಗಳೂರು ಎಕ್ಸ್ಪ್ರೆಸ್ (16586) ರೈಲು ಭಟ್ಕಳ ನಿಲ್ದಾಣದಿಂದ ನಿಗದಿತ ಸಮಯಕ್ಕೆ ಹೊರಡಲಿದೆ. ಮುರುಡೇಶ್ವರ ಮತ್ತು ಭಟ್ಕಳ ನಿಲ್ದಾಣಗಳ ನಡುವೆ ಸಂಚಾರ ರದ್ದಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.