<p>ಹುಬ್ಬಳ್ಳಿ: ನಗರದಲ್ಲಿ ಇತ್ತೀಚೆಗೆ ನಡೆದಿದ್ದ ರಾಷ್ಟ್ರಪತಿ ಪೌರ ಸನ್ಮಾನ ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ದುಂದುವೆಚ್ಚ ಮಾಡಿದೆ ಎಂದು ಆರೋಪಿಸಿ, ಮೇಯರ್ ಈರೇಶ ಅಂಚಟಗೇರಿ ವಿರುದ್ಧ ‘ಪೇ ಮೇಯರ್’ ಪೋಸ್ಟರ್ ಅಭಿಯಾನ ನಡೆಸಿದ್ದ ವಿದ್ಯಾನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಜತ್ ಉಳ್ಳಾಗಡ್ಡಿಮಠ ಅವರು, ಈ ಕುರಿತು ಮೇಯರ್ ಕ್ಷಮೆ ಯಾಚಿಸಲು ನಿರಾಕರಿಸಿದ್ದಾರೆ.</p>.<p>ಈ ಕುರಿತು ಸಾಮಾಜಿಕ ಜಾಲತಾಣ ಫೇಸ್ಬುಕ್ನಲ್ಲಿ ಪ್ರತಿಕ್ರಿಯಿಸಿರುವ ರಜತ್, ‘ಈರೇಶ ಅಂಚಟಗೇರಿ ಅವರೇ ನಾನು ಸಾವರ್ಕರ್ ಅಲ್ಲ, ರಜತ್. ಯಾವುದೇ ಕಾರಣಕ್ಕೂ ಕ್ಷಮೆ ಯಾಚಿಸುವುದಿಲ್ಲ’ ಎಂದು ತಿರುಗೇಟು ನೀಡಿದ್ದಾರೆ.</p>.<p>‘ನೀವು ಕೋಟಿ ಕೋಟಿ ಪರಿಹಾರಕ್ಕಾಗಿ ಮಾನನಷ್ಟ ಮೊಕದ್ದಮೆ ಹಾಕಿದರೂ, ನೀವು ಮಾಡಿರುವ ಕೋಟ್ಯಂತರ ರೂಪಾಯಿಗಳ ಅವ್ಯವಹಾರದ ಕೆಲಸವನ್ನು ಜನರ ಪರವಾಗಿ ನಾನು ಕೇಳೇ ಕೇಳುತ್ತೇನೆ. ಅದು ನಮಗೆ ಸಂವಿಧಾನ ಕೊಟ್ಟಿರುವ ಹಕ್ಕು’ ಎಂದು ಹೇಳಿದ್ದಾರೆ.</p>.<p>ಅಭಿಯಾನದ ವಿರುದ್ಧ ಕೆಂಡಾಮಂಡಲವಾಗಿದ್ದ ಮೇಯರ್ ಅವರು, ಉಳ್ಳಾಗಡ್ಡಿಮಠ ಸೇರಿದಂತೆ ಮೂವರು ಕಾಂಗ್ರೆಸ್ ಮುಖಂಡರಿಗೆ ಅ. 3ರಂದು ಮಾನಹಾನಿ ನೋಟಿಸ್ ಕಳಿಸಿದ್ದರು. ಪರಿಹಾರವಾಗಿ ಮೂವರೂ ತಲಾ ₹1 ಕೋಟಿಯನ್ನು ಪಾಲಿಕೆಗೆ ಸಂದಾಯ ಮಾಡಬೇಕು. 7 ದಿನಗಳೊಳಗೆ ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕು. ಇಲ್ಲದಿದ್ದರೆ, ಕ್ರಿಮಿನಲ್ ಮತ್ತು ಸಿವಿಲ್ ಪ್ರಕರಣಗಳನ್ನು ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದರು.</p>.<p><strong>ಪ್ರತಿಭಟನೆ:</strong> ನೋಟಿಸ್ ಖಂಡಿಸಿ, ಕಾಂಗ್ರೆಸ್ ಕಾರ್ಯಕರ್ತರು ಪಾಲಿಕೆ ಆವರಣದಲ್ಲಿರುವ ಮೇಯರ್ ಕಚೇರಿ ಎದುರು‘ಐ ಆ್ಯಮ್ ನಾಟ್ ಸಾವರ್ಕರ್, ಐ ಆ್ಯಮ್ ರಜತ್’ ಎಂಬ ಫಲಕಗಳನ್ನು ಹಿಡಿದು ಬುಧವಾರ ಪ್ರತಿಭಟನೆ ನಡೆಸಿದರು.ಮೇಯರ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ಪಕ್ಷದ ಮುಖಡರಾದ ಸುನೀಲ ಮಠಪತಿ, ಪುಷ್ಟರಾಜ ಹಳ್ಳಿ, ಮಾಲತೇಶ ಕಂಬಾರ, ಜ್ಯೋತಿ ವಾಲಿಕಾರ, ಸೈಫ್ ಯರಗಟ್ಟಿ, ಪ್ರಕಾಶ ಮಾಯಕರ, ಲಕ್ಷ್ಮಣ ಗಡ್ಡಿ, ದೀಪಕ ಮೆಹರವಾಡೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಬ್ಬಳ್ಳಿ: ನಗರದಲ್ಲಿ ಇತ್ತೀಚೆಗೆ ನಡೆದಿದ್ದ ರಾಷ್ಟ್ರಪತಿ ಪೌರ ಸನ್ಮಾನ ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ದುಂದುವೆಚ್ಚ ಮಾಡಿದೆ ಎಂದು ಆರೋಪಿಸಿ, ಮೇಯರ್ ಈರೇಶ ಅಂಚಟಗೇರಿ ವಿರುದ್ಧ ‘ಪೇ ಮೇಯರ್’ ಪೋಸ್ಟರ್ ಅಭಿಯಾನ ನಡೆಸಿದ್ದ ವಿದ್ಯಾನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಜತ್ ಉಳ್ಳಾಗಡ್ಡಿಮಠ ಅವರು, ಈ ಕುರಿತು ಮೇಯರ್ ಕ್ಷಮೆ ಯಾಚಿಸಲು ನಿರಾಕರಿಸಿದ್ದಾರೆ.</p>.<p>ಈ ಕುರಿತು ಸಾಮಾಜಿಕ ಜಾಲತಾಣ ಫೇಸ್ಬುಕ್ನಲ್ಲಿ ಪ್ರತಿಕ್ರಿಯಿಸಿರುವ ರಜತ್, ‘ಈರೇಶ ಅಂಚಟಗೇರಿ ಅವರೇ ನಾನು ಸಾವರ್ಕರ್ ಅಲ್ಲ, ರಜತ್. ಯಾವುದೇ ಕಾರಣಕ್ಕೂ ಕ್ಷಮೆ ಯಾಚಿಸುವುದಿಲ್ಲ’ ಎಂದು ತಿರುಗೇಟು ನೀಡಿದ್ದಾರೆ.</p>.<p>‘ನೀವು ಕೋಟಿ ಕೋಟಿ ಪರಿಹಾರಕ್ಕಾಗಿ ಮಾನನಷ್ಟ ಮೊಕದ್ದಮೆ ಹಾಕಿದರೂ, ನೀವು ಮಾಡಿರುವ ಕೋಟ್ಯಂತರ ರೂಪಾಯಿಗಳ ಅವ್ಯವಹಾರದ ಕೆಲಸವನ್ನು ಜನರ ಪರವಾಗಿ ನಾನು ಕೇಳೇ ಕೇಳುತ್ತೇನೆ. ಅದು ನಮಗೆ ಸಂವಿಧಾನ ಕೊಟ್ಟಿರುವ ಹಕ್ಕು’ ಎಂದು ಹೇಳಿದ್ದಾರೆ.</p>.<p>ಅಭಿಯಾನದ ವಿರುದ್ಧ ಕೆಂಡಾಮಂಡಲವಾಗಿದ್ದ ಮೇಯರ್ ಅವರು, ಉಳ್ಳಾಗಡ್ಡಿಮಠ ಸೇರಿದಂತೆ ಮೂವರು ಕಾಂಗ್ರೆಸ್ ಮುಖಂಡರಿಗೆ ಅ. 3ರಂದು ಮಾನಹಾನಿ ನೋಟಿಸ್ ಕಳಿಸಿದ್ದರು. ಪರಿಹಾರವಾಗಿ ಮೂವರೂ ತಲಾ ₹1 ಕೋಟಿಯನ್ನು ಪಾಲಿಕೆಗೆ ಸಂದಾಯ ಮಾಡಬೇಕು. 7 ದಿನಗಳೊಳಗೆ ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕು. ಇಲ್ಲದಿದ್ದರೆ, ಕ್ರಿಮಿನಲ್ ಮತ್ತು ಸಿವಿಲ್ ಪ್ರಕರಣಗಳನ್ನು ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದರು.</p>.<p><strong>ಪ್ರತಿಭಟನೆ:</strong> ನೋಟಿಸ್ ಖಂಡಿಸಿ, ಕಾಂಗ್ರೆಸ್ ಕಾರ್ಯಕರ್ತರು ಪಾಲಿಕೆ ಆವರಣದಲ್ಲಿರುವ ಮೇಯರ್ ಕಚೇರಿ ಎದುರು‘ಐ ಆ್ಯಮ್ ನಾಟ್ ಸಾವರ್ಕರ್, ಐ ಆ್ಯಮ್ ರಜತ್’ ಎಂಬ ಫಲಕಗಳನ್ನು ಹಿಡಿದು ಬುಧವಾರ ಪ್ರತಿಭಟನೆ ನಡೆಸಿದರು.ಮೇಯರ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ಪಕ್ಷದ ಮುಖಡರಾದ ಸುನೀಲ ಮಠಪತಿ, ಪುಷ್ಟರಾಜ ಹಳ್ಳಿ, ಮಾಲತೇಶ ಕಂಬಾರ, ಜ್ಯೋತಿ ವಾಲಿಕಾರ, ಸೈಫ್ ಯರಗಟ್ಟಿ, ಪ್ರಕಾಶ ಮಾಯಕರ, ಲಕ್ಷ್ಮಣ ಗಡ್ಡಿ, ದೀಪಕ ಮೆಹರವಾಡೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>