ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಪೇ ಮೇಯರ್’ ಪೋಸ್ಟರ್: ಕಾಂಗ್ರೆಸ್ ಮುಖಂಡರಿಗೆ ನೋಟಿಸ್

Last Updated 3 ಅಕ್ಟೋಬರ್ 2022, 13:16 IST
ಅಕ್ಷರ ಗಾತ್ರ

ಹುಬ್ಬಳ್ಳಿ: ರಾಷ್ಟ್ರಪತಿಗೆ ಹಮ್ಮಿಕೊಂಡಿದ್ದ ಪೌರ ಸನ್ಮಾನ ಕಾರ್ಯಕ್ರಮದಲ್ಲಿ ದುಂದುವೆಚ್ಚ ಮಾಡಲಾಗಿದೆ ಎಂದು ಆರೋಪಿಸಿ, ನಗರದ ವಿವಿಧೆಡೆ ‘ಪೇ ಮೇಯರ್’ ಪೋಸ್ಟರ್‌ಗಳನ್ನು ಅಂಟಿಸಿದ್ದ ಕಾಂಗ್ರೆಸ್ ಮುಖಂಡರಿಗೆ ಮೇಯರ್ ಈರೇಶ ಅಂಚಟಗೇರಿ ಅವರು ಸೋಮವಾರ ಮಾನಹಾನಿ ನೋಟಿಸ್ ಕಳಿಸಿದ್ದಾರೆ.

ಹುಬ್ಬಳ್ಳಿಯ ರಜತ ಉಳ್ಳಾಗಡ್ಡಿಮಠ, ಧಾರವಾಡದ ದೀಪಕ ಚಿಂಚೋರೆ ಹಾಗೂ ಮಂಜುನಾಥ ನಡಟ್ಟಿ ಅವರಿಗೆ ವಕೀಲರ ಮೂಲಕ ನೋಟಿಸ್ ಕಳಿಸಿರುವ ಮೇಯರ್, ಮಾನಹಾನಿಗೆ ಪರಿಹಾರವಾಗಿ ಮೂವರೂ ತಲಾ ₹1 ಕೋಟಿಯನ್ನು ಮಹಾನಗರ ಪಾಲಿಕೆಗೆ ಸಂದಾಯ ಮಾಡಬೇಕು.

ಏಳು ದಿನಗಳೊಳಗೆ ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕು. ಇಲ್ಲದಿದ್ದರೆ, ನಿಮ್ಮ ವಿರುದ್ಧ ಕ್ರಿಮಿನಲ್ ಮತ್ತು ಸಿವಿಲ್ ಪ್ರಕರಣಗಳನ್ನು ದಾಖಲಿಸಲಾಗುವುದು ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT