ಹಳೇಹುಬ್ಬಳ್ಳಿ, ಕಸಬಾಪೇಟ, ಬೆಂಡಿಗೇರಿ, ಘಂಟಿಕೇರಿ ಪೊಲೀಸ್ ಠಾಣೆಯಲ್ಲಿ ನಡೆದ ಸಭೆಯಲ್ಲಿ ವಿವಿಧ ಸಮುದಾಯದ ಮುಖಂಡರು ಹಾಗೂ ಸಂಘ–ಸಂಸ್ಥೆಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು. ನೂಪುರ್ ಶರ್ಮಾ ಹೇಳಿಕೆಗೆ ಸಂಬಂಧಿಸಿ ಸರ್ಕಾರ ಅವರ ವಿರುದ್ಧ ಕ್ರಮ ಕೈಗೊಂಡಿದೆ. ಎಲ್ಲಿಯೋ ನಡೆದ ಘಟನೆಯನ್ನು ಮುಂದಿಟ್ಟುಕೊಂಡು ನಮ್ಮ ನಡುವಿನ ಸೌಹಾರ್ದ ಹಾಳು ಮಾಡಿಕೊಳ್ಳುವುದು ಬೇಡ ಎಂದು ಇನ್ಸ್ಪೆಕ್ಟರ್ ಶ್ಯಾಮರಾಜ್ ಸಜ್ಜನ್ ತಿಳಿಸಿದರು.