<p><strong>ಹುಬ್ಬಳ್ಳಿ:</strong> ಇಲ್ಲಿನ ಹೆಗ್ಗೇರಿಯ ಭುವನೇಶ್ವರಿ ನಗರದ ದಲಿತರ ಕಾಲೊನಿಯಲ್ಲಿ ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಗುರುವಾರ ಪಾದಯಾತ್ರೆ ನಡೆಸಿದರು. ಭಕ್ತರು ಹೂವು ಸುರಿದು ಭಕ್ತಿ ಸಮರ್ಪಿಸಿದರು. ಜೈಶ್ರೀರಾಮ್, ಬೋಲೋ ಭಾರತ್ ಮಾತಾಕಿ ಜೈ ಘೋಷಣೆ ಕೂಗಿದರು.</p>.<p>ವಿಶ್ವ ಹಿಂದೂ ಪರಿಷತ್ ಹುಬ್ಬಳ್ಳಿ ಮಹಾನಗರದ ಧರ್ಮಚಾರಿ ಸಂಪರ್ಕ ಪ್ರಮುಖ ಯಲ್ಲಪ್ಪ ಬಾಗಲಕೋಟಿ ಅವರ ಮನೆಗೆ ಭೇಟಿ ನೀಡಿದ ಸ್ವಾಮೀಜಿ, ಫಲಮಂತ್ರಾಕ್ಷತೆ ವಿತರಿಸಿದರು. ವಿಶ್ವ ಹಿಂದೂ ಪರಿಷತ್ ಉತ್ತರ ಪ್ರಾಂತ ಪ್ರಚಾರಕ ಬಸವರಾಜ್ ಅವರು ಕುಟುಂಬ ಸದಸ್ಯರನ್ನು ಸ್ವಾಮೀಜಿಗೆ ಪರಿಚಯಿಸಿದರು. </p>.<p>ಭುವನೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದ ಸ್ವಾಮೀಜಿ, ‘ದೇಶದಲ್ಲಿರುವ ಎಲ್ಲರೂ ಸನಾತನ ಧರ್ಮೀಯರು. ಶ್ರೀರಾಮ ಧರ್ಮದ ಪ್ರತಿರೂಪ. ಶತಮಾನಗಳ ನ್ಯಾಯಯುತ ಹೋರಾಟದ ಫಲವಾಗಿ ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣವಾಗುತ್ತಿದೆ’ ಎಂದು ಹೇಳಿದರು.</p>.<p>‘ಯಾರಿಗೂ ಅನ್ಯಾಯ ಮಾಡದೆ ಎಲ್ಲರೂ ಒಂದಾಗಿ ಬಾಳಿದರೆ ಅದು ದೇವರಿಗೆ ಸಲ್ಲಿಸುವ ದೊಡ್ಡ ಪೂಜೆ. ಇನ್ನೊಬ್ಬರನ್ನು ಹೊಡೆಯುತ್ತೇವೆ, ಬಡಿಯುತ್ತೇವೆ ಎನ್ನುವುದು ರಾವಣನ ಸಂಸ್ಕೃತಿ. ಸುಖ, ಶಾಂತಿ, ನೆಮ್ಮದಿ ಬಯಸುವವರು ರಾಮಚಂದ್ರನ ಆದರ್ಶ ಪರಿಪಾಲಿಸಬೇಕು’ ಎಂದರು.</p>.<p>ನಾಣ್ಯದ ತುಲಾಭಾರ: ವಿಶ್ವಪ್ರಸನ್ನ ತೀರ್ಥ ಶ್ರೀಗಳ ಷಷ್ಟ್ಯಬ್ದ ಪ್ರಯುಕ್ತ ಅಖಿಲ ಭಾರತ ಮಾಧ್ವ ಮಹಾಮಂಡಲದ ವತಿಯಿಂದ ಹುಬ್ಬಳ್ಳಿಯ ಶ್ರೀಕೃಷ್ಣ ಕಲ್ಯಾಣ ಮಂಟಪದಲ್ಲಿ ಗುರುವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಶ್ರೀಗಳಿಗೆ ನಾಣ್ಯದ ತುಲಾಭಾರ ಮಾಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ಇಲ್ಲಿನ ಹೆಗ್ಗೇರಿಯ ಭುವನೇಶ್ವರಿ ನಗರದ ದಲಿತರ ಕಾಲೊನಿಯಲ್ಲಿ ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಗುರುವಾರ ಪಾದಯಾತ್ರೆ ನಡೆಸಿದರು. ಭಕ್ತರು ಹೂವು ಸುರಿದು ಭಕ್ತಿ ಸಮರ್ಪಿಸಿದರು. ಜೈಶ್ರೀರಾಮ್, ಬೋಲೋ ಭಾರತ್ ಮಾತಾಕಿ ಜೈ ಘೋಷಣೆ ಕೂಗಿದರು.</p>.<p>ವಿಶ್ವ ಹಿಂದೂ ಪರಿಷತ್ ಹುಬ್ಬಳ್ಳಿ ಮಹಾನಗರದ ಧರ್ಮಚಾರಿ ಸಂಪರ್ಕ ಪ್ರಮುಖ ಯಲ್ಲಪ್ಪ ಬಾಗಲಕೋಟಿ ಅವರ ಮನೆಗೆ ಭೇಟಿ ನೀಡಿದ ಸ್ವಾಮೀಜಿ, ಫಲಮಂತ್ರಾಕ್ಷತೆ ವಿತರಿಸಿದರು. ವಿಶ್ವ ಹಿಂದೂ ಪರಿಷತ್ ಉತ್ತರ ಪ್ರಾಂತ ಪ್ರಚಾರಕ ಬಸವರಾಜ್ ಅವರು ಕುಟುಂಬ ಸದಸ್ಯರನ್ನು ಸ್ವಾಮೀಜಿಗೆ ಪರಿಚಯಿಸಿದರು. </p>.<p>ಭುವನೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದ ಸ್ವಾಮೀಜಿ, ‘ದೇಶದಲ್ಲಿರುವ ಎಲ್ಲರೂ ಸನಾತನ ಧರ್ಮೀಯರು. ಶ್ರೀರಾಮ ಧರ್ಮದ ಪ್ರತಿರೂಪ. ಶತಮಾನಗಳ ನ್ಯಾಯಯುತ ಹೋರಾಟದ ಫಲವಾಗಿ ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣವಾಗುತ್ತಿದೆ’ ಎಂದು ಹೇಳಿದರು.</p>.<p>‘ಯಾರಿಗೂ ಅನ್ಯಾಯ ಮಾಡದೆ ಎಲ್ಲರೂ ಒಂದಾಗಿ ಬಾಳಿದರೆ ಅದು ದೇವರಿಗೆ ಸಲ್ಲಿಸುವ ದೊಡ್ಡ ಪೂಜೆ. ಇನ್ನೊಬ್ಬರನ್ನು ಹೊಡೆಯುತ್ತೇವೆ, ಬಡಿಯುತ್ತೇವೆ ಎನ್ನುವುದು ರಾವಣನ ಸಂಸ್ಕೃತಿ. ಸುಖ, ಶಾಂತಿ, ನೆಮ್ಮದಿ ಬಯಸುವವರು ರಾಮಚಂದ್ರನ ಆದರ್ಶ ಪರಿಪಾಲಿಸಬೇಕು’ ಎಂದರು.</p>.<p>ನಾಣ್ಯದ ತುಲಾಭಾರ: ವಿಶ್ವಪ್ರಸನ್ನ ತೀರ್ಥ ಶ್ರೀಗಳ ಷಷ್ಟ್ಯಬ್ದ ಪ್ರಯುಕ್ತ ಅಖಿಲ ಭಾರತ ಮಾಧ್ವ ಮಹಾಮಂಡಲದ ವತಿಯಿಂದ ಹುಬ್ಬಳ್ಳಿಯ ಶ್ರೀಕೃಷ್ಣ ಕಲ್ಯಾಣ ಮಂಟಪದಲ್ಲಿ ಗುರುವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಶ್ರೀಗಳಿಗೆ ನಾಣ್ಯದ ತುಲಾಭಾರ ಮಾಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>