<p><strong>ಧಾರವಾಡ: </strong>ತಾಲ್ಲೂಕಿನ ಮರೇವಾಡ ಗ್ರಾಮದಲ್ಲಿ ಬಸವಣ್ಣ (ನಂದಿಶ್ವರ) ದೇವರ ವಾರ್ಷಿಕ ರಥೋತ್ಸವವು ಬಸವೇಶ್ವರ ಮಹಾರಾಜ ಕೀ ಜೈ, ಹರಹರ ಮಹಾದೇವ ಎಂಬ ಜಯ ಘೋಷಗಳೊಂದಿಗೆ ಶ್ರದ್ಧಾ ಭಕ್ತಿಯಿಂದ ಸೋಮವಾರ ಜರುಗಿತು.</p>.<p>ವಿವಿಧ ಜನಪದ ವಾದ್ಯ-ಮೇಳಗಳೊಂದಿಗೆ ನೆರೆದ ಅಪಾರ ಭಕ್ತ ಸಮೂಹದ ಹರ್ಷೋದ್ಗಾರಗಳ ಮಧ್ಯೆ ಬಸವಣ್ಣ (ನಂದೀಶ್ವರ) ದೇವರ ಅಲಂಕೃತ ರಥೋತ್ಸವ ವೈಭವದಿಂದ ಆರಂಭಗೊಂಡಿತು. ಭಕ್ತರು ರಥೋತ್ಸವಕ್ಕೆ ಬಾಳೆಹಣ್ಣು, ಲಿಂಬೆಹಣ್ಣು, ಉತ್ತತ್ತಿ ಎಸೆದು ಭಕ್ತಿ ಮೆರೆದರು.</p>.<p>ಬೆಳಿಗ್ಗೆ ಬಸವಣ್ಣ (ನಂದೀಶ್ವರ) ದೇವರ ಶಿಲಾ ವಿಗ್ರಹಕ್ಕೆ ಏಕಾದಶ ಮಹಾರುದ್ರಾಭಿಷೇಕ, ನೂರಾಎಂಟು ಬಿಲ್ವಾರ್ಚನೆ, ಪುಷ್ಪಾಲಂಕಾರ ವಿಶೇಷ ಪೂಜೆ ಮತ್ತು ಮಹಾಮಂಗಳಾರತಿ ನಡೆದವು.</p>.<p>ನೂರಾರು ವರ್ಷಗಳಿಂದ ನಿರಂತರವಾಗಿ ನಡೆದು ಬಂದಿರುವ ಈ ಪ್ರಸಿದ್ಧ ಜಾತ್ರಾ ಮಹೋತ್ಸವದಲ್ಲಿ ಅಮ್ಮಿನಬಾವಿ ಪಂಚಗೃಹ ಹಿರೇಮಠದ ಪ್ರತಿನಿಧಿಗಳು, ಅಮ್ಮಿನಬಾವಿ ಬಸವಣ್ಣ ದೇವರ ದೇವಾಲಯದ ಪ್ರಧಾನ ಅರ್ಚಕ ಪೂಜಾರ ಬಸವರಾಜ ದೇವರು ಸೇರಿದಂತೆ ಗ್ರಾಮದ ಮಠಸ್ಥ ಜಂಗಮರು, ಊರಿನ ಹಕ್ಕು-ಬಾಬುಗಳ ಪ್ರಮುಖರು, ದೇವಾಲಯದ ಸೇವಾ ಸಮಿತಿ ಪದಾಧಿಕಾರಿಗಳು ರಥೋತ್ಸವದಲ್ಲಿ ಪಾಲ್ಗೊಂಡರು.</p>.<p>ಮಹಾರಾಷ್ಟ್ರ ಸೇರಿದಂತೆ ಗದಗ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಯ ಭಕ್ತರು ಭಾಗಿಯಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ: </strong>ತಾಲ್ಲೂಕಿನ ಮರೇವಾಡ ಗ್ರಾಮದಲ್ಲಿ ಬಸವಣ್ಣ (ನಂದಿಶ್ವರ) ದೇವರ ವಾರ್ಷಿಕ ರಥೋತ್ಸವವು ಬಸವೇಶ್ವರ ಮಹಾರಾಜ ಕೀ ಜೈ, ಹರಹರ ಮಹಾದೇವ ಎಂಬ ಜಯ ಘೋಷಗಳೊಂದಿಗೆ ಶ್ರದ್ಧಾ ಭಕ್ತಿಯಿಂದ ಸೋಮವಾರ ಜರುಗಿತು.</p>.<p>ವಿವಿಧ ಜನಪದ ವಾದ್ಯ-ಮೇಳಗಳೊಂದಿಗೆ ನೆರೆದ ಅಪಾರ ಭಕ್ತ ಸಮೂಹದ ಹರ್ಷೋದ್ಗಾರಗಳ ಮಧ್ಯೆ ಬಸವಣ್ಣ (ನಂದೀಶ್ವರ) ದೇವರ ಅಲಂಕೃತ ರಥೋತ್ಸವ ವೈಭವದಿಂದ ಆರಂಭಗೊಂಡಿತು. ಭಕ್ತರು ರಥೋತ್ಸವಕ್ಕೆ ಬಾಳೆಹಣ್ಣು, ಲಿಂಬೆಹಣ್ಣು, ಉತ್ತತ್ತಿ ಎಸೆದು ಭಕ್ತಿ ಮೆರೆದರು.</p>.<p>ಬೆಳಿಗ್ಗೆ ಬಸವಣ್ಣ (ನಂದೀಶ್ವರ) ದೇವರ ಶಿಲಾ ವಿಗ್ರಹಕ್ಕೆ ಏಕಾದಶ ಮಹಾರುದ್ರಾಭಿಷೇಕ, ನೂರಾಎಂಟು ಬಿಲ್ವಾರ್ಚನೆ, ಪುಷ್ಪಾಲಂಕಾರ ವಿಶೇಷ ಪೂಜೆ ಮತ್ತು ಮಹಾಮಂಗಳಾರತಿ ನಡೆದವು.</p>.<p>ನೂರಾರು ವರ್ಷಗಳಿಂದ ನಿರಂತರವಾಗಿ ನಡೆದು ಬಂದಿರುವ ಈ ಪ್ರಸಿದ್ಧ ಜಾತ್ರಾ ಮಹೋತ್ಸವದಲ್ಲಿ ಅಮ್ಮಿನಬಾವಿ ಪಂಚಗೃಹ ಹಿರೇಮಠದ ಪ್ರತಿನಿಧಿಗಳು, ಅಮ್ಮಿನಬಾವಿ ಬಸವಣ್ಣ ದೇವರ ದೇವಾಲಯದ ಪ್ರಧಾನ ಅರ್ಚಕ ಪೂಜಾರ ಬಸವರಾಜ ದೇವರು ಸೇರಿದಂತೆ ಗ್ರಾಮದ ಮಠಸ್ಥ ಜಂಗಮರು, ಊರಿನ ಹಕ್ಕು-ಬಾಬುಗಳ ಪ್ರಮುಖರು, ದೇವಾಲಯದ ಸೇವಾ ಸಮಿತಿ ಪದಾಧಿಕಾರಿಗಳು ರಥೋತ್ಸವದಲ್ಲಿ ಪಾಲ್ಗೊಂಡರು.</p>.<p>ಮಹಾರಾಷ್ಟ್ರ ಸೇರಿದಂತೆ ಗದಗ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಯ ಭಕ್ತರು ಭಾಗಿಯಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>