<p><strong>ಧಾರವಾಡ</strong>: ರಾಜಕಾರಣ ಎಂದರೆ ಈಗ ಅಧಿಕಾರ ದಾಹ, ಹಣಬಲದ ವ್ಯಕ್ತಿಗಳ ಸಂಘ ಎಂದಾಗಿದೆ. ಸಮಗ್ರ ಅಧ್ಯಯನ, ಮೇಧಾವಿತನ, ತತ್ವ ಪಾಲನೆ ಗುಣವುಳ್ಳ ಜನರು ರಾಜಕೀಯ ಕ್ಷೇತ್ರವನ್ನು ಹೆಚ್ಚು ಪ್ರವೇಶಿಸಬೇಕು ಎಂದು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಎಸ್.ಎಸ್. ಶಿವಳ್ಳಿ ಹೇಳಿದರು.</p>.<p>ಕರ್ನಾಟಕ ವಿದ್ಯಾವರ್ಧಕ ಸಂಘದ ಕಾನೂನು ಮಂಟಪ ವತಿಯಿಂದ ಆಯೋಜಿಸಿದ್ದ ಉಪನ್ಯಾಸ ಕಾರ್ಯಕ್ರಮದಲ್ಲಿ ‘ನಾಗರಿಕ ಕರ್ತವ್ಯ, ರಾಜಕೀಯ ಅಧಿಕಾರ ಹಾಗೂ ನೈತಿಕ ಮೌಲ್ಯಗಳು’ ಕುರಿತು ಮಾತನಾಡಿದರು.</p>.<p>ಪ್ರಸ್ತುತ ದಿನಮಾನಗಳಲ್ಲಿ ಅಧಿಕಾರ ದುರುಪಯೋಗ ಮಾಡಿಕೊಳ್ಳುವ ರಾಜಕಾರಣಿಗಳ ಸಂಖ್ಯೆ ಜಾಸ್ತಿ ಇದೆ. ರಾಜಕಾರಣಿಗಳು ಸಾರ್ವಜನಿಕ ಸಭೆ ಸಮಾರಂಭಗಳಲ್ಲಿಪದ ಬಳಕೆಯಲ್ಲಿ ಎಚ್ಚರ ವಹಿಸಬೇಕು. ಮನಸ್ಸಿಗೆ ತೋಚಿದಂತೆ ಮಾತನಾಡಿದರೆ ಕೆಟ್ಟ ಪರಿಣಾಮ ಬೀರುತ್ತದೆ. ರಾಜಕೀಯ ಪ್ರವೇಶಿಸುವವರು ಕಾನೂನು, ನೀತಿ, ನಿಯಮ, ತತ್ವ ಪಾಲಿಸಬೇಕು ಎಂದರು.</p>.<p>ವಕೀಲರಾದ ಮಹಾನಂದಾ ಮುದೇನಗುಡಿ ಮಾತನಾಡಿ, ಹಕ್ಕುಗಳಿಗಾಗಿ ಹೋರಾಡುವವರು, ಕರ್ತವ್ಯಗಳನ್ನೂ ಚಾಚು ತಪ್ಪದೆ ಪಾಲಿಸಬೇಕು ಎಂದು ಹೇಳಿದರು.</p>.<p>ಚಂದ್ರಕಾಂತ ಬೆಲ್ಲದ ಅವರು ಮಾತನಾಡಿ, ನಾಗರಿಕರು ಮತ್ತು ರಾಜಕಾರಣಿಗಳು ಮೌಲ್ಯಗಳನ್ನು ಕಾಪಾಡಿಕೊಳ್ಲಬೇಕು. ಮನಸಾಕ್ಷಿಗೆ ಅನುಗುಣವಾಗಿ ಕಾರ್ಯನಿರ್ವಹಿಸಿದರೆ ಸ್ವಸ್ಥ ಸಮಾಜ ಕಟ್ಟಲು ಸಾಧ್ಯ ಎಂದು ಹೇಳಿದರು.</p>.<p>ಧಾರವಾಡ ಹೈಕೋರ್ಟ್ ವಕೀಲರ ಸಂಘದ ಅಧ್ಯಕ್ಷ ಸುರೇಶ ಹುಡೇದಗಡ್ಡಿ ಅಧ್ಯಕ್ಷತೆ ವಹಿಸಿದ್ದರು.</p>.<p>ಕಾನೂನು ಮಂಟಪದ ಸಂಚಾಲಕ ಗುರು ಹಿರೇಮಠ, ಎನ್.ಆರ್.ಬಾಳಿಕಾಯಿ, ಶಂಕರ ಹಲಗತ್ತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ</strong>: ರಾಜಕಾರಣ ಎಂದರೆ ಈಗ ಅಧಿಕಾರ ದಾಹ, ಹಣಬಲದ ವ್ಯಕ್ತಿಗಳ ಸಂಘ ಎಂದಾಗಿದೆ. ಸಮಗ್ರ ಅಧ್ಯಯನ, ಮೇಧಾವಿತನ, ತತ್ವ ಪಾಲನೆ ಗುಣವುಳ್ಳ ಜನರು ರಾಜಕೀಯ ಕ್ಷೇತ್ರವನ್ನು ಹೆಚ್ಚು ಪ್ರವೇಶಿಸಬೇಕು ಎಂದು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಎಸ್.ಎಸ್. ಶಿವಳ್ಳಿ ಹೇಳಿದರು.</p>.<p>ಕರ್ನಾಟಕ ವಿದ್ಯಾವರ್ಧಕ ಸಂಘದ ಕಾನೂನು ಮಂಟಪ ವತಿಯಿಂದ ಆಯೋಜಿಸಿದ್ದ ಉಪನ್ಯಾಸ ಕಾರ್ಯಕ್ರಮದಲ್ಲಿ ‘ನಾಗರಿಕ ಕರ್ತವ್ಯ, ರಾಜಕೀಯ ಅಧಿಕಾರ ಹಾಗೂ ನೈತಿಕ ಮೌಲ್ಯಗಳು’ ಕುರಿತು ಮಾತನಾಡಿದರು.</p>.<p>ಪ್ರಸ್ತುತ ದಿನಮಾನಗಳಲ್ಲಿ ಅಧಿಕಾರ ದುರುಪಯೋಗ ಮಾಡಿಕೊಳ್ಳುವ ರಾಜಕಾರಣಿಗಳ ಸಂಖ್ಯೆ ಜಾಸ್ತಿ ಇದೆ. ರಾಜಕಾರಣಿಗಳು ಸಾರ್ವಜನಿಕ ಸಭೆ ಸಮಾರಂಭಗಳಲ್ಲಿಪದ ಬಳಕೆಯಲ್ಲಿ ಎಚ್ಚರ ವಹಿಸಬೇಕು. ಮನಸ್ಸಿಗೆ ತೋಚಿದಂತೆ ಮಾತನಾಡಿದರೆ ಕೆಟ್ಟ ಪರಿಣಾಮ ಬೀರುತ್ತದೆ. ರಾಜಕೀಯ ಪ್ರವೇಶಿಸುವವರು ಕಾನೂನು, ನೀತಿ, ನಿಯಮ, ತತ್ವ ಪಾಲಿಸಬೇಕು ಎಂದರು.</p>.<p>ವಕೀಲರಾದ ಮಹಾನಂದಾ ಮುದೇನಗುಡಿ ಮಾತನಾಡಿ, ಹಕ್ಕುಗಳಿಗಾಗಿ ಹೋರಾಡುವವರು, ಕರ್ತವ್ಯಗಳನ್ನೂ ಚಾಚು ತಪ್ಪದೆ ಪಾಲಿಸಬೇಕು ಎಂದು ಹೇಳಿದರು.</p>.<p>ಚಂದ್ರಕಾಂತ ಬೆಲ್ಲದ ಅವರು ಮಾತನಾಡಿ, ನಾಗರಿಕರು ಮತ್ತು ರಾಜಕಾರಣಿಗಳು ಮೌಲ್ಯಗಳನ್ನು ಕಾಪಾಡಿಕೊಳ್ಲಬೇಕು. ಮನಸಾಕ್ಷಿಗೆ ಅನುಗುಣವಾಗಿ ಕಾರ್ಯನಿರ್ವಹಿಸಿದರೆ ಸ್ವಸ್ಥ ಸಮಾಜ ಕಟ್ಟಲು ಸಾಧ್ಯ ಎಂದು ಹೇಳಿದರು.</p>.<p>ಧಾರವಾಡ ಹೈಕೋರ್ಟ್ ವಕೀಲರ ಸಂಘದ ಅಧ್ಯಕ್ಷ ಸುರೇಶ ಹುಡೇದಗಡ್ಡಿ ಅಧ್ಯಕ್ಷತೆ ವಹಿಸಿದ್ದರು.</p>.<p>ಕಾನೂನು ಮಂಟಪದ ಸಂಚಾಲಕ ಗುರು ಹಿರೇಮಠ, ಎನ್.ಆರ್.ಬಾಳಿಕಾಯಿ, ಶಂಕರ ಹಲಗತ್ತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>