‘ಜಾರ್ಜಿಯಾದಲ್ಲಿ ಸುಮಾರು 500 ಕನ್ನಡಿಗರ ಕುಟುಂಬಗಳಿವೆ. ಇಲ್ಲಿರುವ ನೃಪತುಂಗ ಕನ್ನಡ ಕೂಟವು 30 ವರ್ಷಗಳಿಂದ ರಾಜ್ಯೋತ್ಸವ ಆಚರಿಸಿಕೊಂಡು ಬರುತ್ತಿದೆ. ಅಂದು ಭಾವಗೀತೆ, ಜನಪದ ಗೀತೆ, ಸಿನಿಮಾ ಗೀತೆಗಳ ಗಾಯನ, ನಾಟಕ ಪ್ರದರ್ಶನ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಈ ಬಾರಿ ಕೋವಿಡ್–19 ಕಾರಣದಿಂದಾಗಿ ವರ್ಚ್ಯುವಲ್ ಆಗಿ ಕಾರ್ಯಕ್ರಮ ನಡೆಯಲಿದೆ’ ಎಂದು ಕೂಟದ ಸದಸ್ಯ ಪ್ರಕಾಶ್ ರಾಮಚಂದ್ರಯ್ಯ ‘ಪ್ರಜಾವಾಣಿ’ಗೆ ತಿಳಿಸಿದರು.