<p><strong>ಹುಬ್ಬಳ್ಳಿ</strong>: ‘ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಅಕ್ರಮವಾಗಿ ಟೋಲ್ ಸಂಗ್ರಹ ಮಾಡಲಾಗುತ್ತಿದ್ದು, ಕೂಡಲೇ ಟೋಲ್ ಸಂಗ್ರಹ ನಿಲ್ಲಿಸಬೇಕು’ ಎಂದು ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ಪಿ.ಎಚ್. ನೀರಲಕೇರಿ ಆಗ್ರಹಿಸಿದರು.</p>.<p>ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಹುಬ್ಬಳ್ಳಿಯಿಂದ ಹೊಸಪೇಟೆವರೆಗಿನ 143.78 ಕಿ.ಮೀ ಹೆದ್ದಾರಿಯಲ್ಲಿ ₹2,293 ಕೋಟಿ ಮೊತ್ತದ ಚತುಷ್ಪಥ ಹಾಗೂ ₹1,625 ಕೋಟಿ ವೆಚ್ಚದ ಎರಡು ಸರ್ವಿಸ್ ರಸ್ತೆ ನಿರ್ಮಾಣಕ್ಕೆ 2016ರಲ್ಲಿ ಚಾಲನೆ ನೀಡಲಾಯಿತು. ಕಾಮಗಾರಿ ಪೂರ್ಣಗೊಳಿಸಲು ಎರಡು ವರ್ಷಗಳ ಗುರಿ ನೀಡಲಾಗಿದ್ದರೂ, ಈವರೆಗೆ ಪೂರ್ಣಗೊಂಡಿಲ್ಲ’ ಎಂದು ದೂರಿದರು.</p>.<p>‘ಕಾಮಗಾರಿ ಪೂರ್ಣಗೊಳಿಸದೆ ಟೋಲ್ ಸಂಗ್ರಹಿಸುವಂತಿಲ್ಲ ಎಂಬ ನಿಯಮ ಉಲ್ಲಂಘಿಸಲಾಗುತ್ತಿದೆ. ಇದರಿಂದ ಬಸ್ ಪ್ರಯಾಣ ದರ ಏರಿಕೆಯಾಗಿ, ಪ್ರಯಾಣಿಕರಿಗೆ ಹೊರೆಯಾಗುತ್ತಿದೆ. ಹೆದ್ದಾರಿ ಸುತ್ತಲಿನ ಹಳ್ಳಿಗರು, ರೈತರಿಂದ ಟೋಲ್ ವಸೂಲಿ ಮಾಡುತ್ತಿರುವುದು ಸರಿಯಲ್ಲ’ ಎಂದರು.</p>.<p>‘ಹೆದ್ದಾರಿಯಲ್ಲಿ ಪ್ರತಿ 2 ಕಿ.ಮೀ.ಗೆ ಬಿರುಕು ಉಂಟಾಗಿದೆ. ಹೀಗಿದ್ದರೂ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್, ಸಕ್ಕರೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ಜಿಲ್ಲಾಧಿಕಾರಿ ಯಾವುದೇ ಕ್ರಮ ಕೈಗೊಳ್ಳದೆ, ಜನರನ್ನು ಲೂಟಿ ಮಾಡಲು ಪ್ರೋತ್ಸಾಹಿಸುತ್ತಿದ್ದಾರೆ’ ಎಂದು ಟೀಕಿಸಿದರು.</p>.<p>‘ಕಾಮಗಾರಿ ಪೂರ್ಣಗೊಳಿಸದೆ ಟೋಲ್ ಸಂಗ್ರಹಿಸಬಾರದು ಹಾಗೂ ರೈತರಿಂದ ಹಣ ಪಡೆಯಲೇಬಾರದೆಂದು ಜಿಲ್ಲಾಡಳಿತ ಆದೇಶಿಸಬೇಕು. ಇಲ್ಲವಾದರೆ, ಜನರೇ ಟೋಲ್ ನೀಡುವುದನ್ನು ನಿಲ್ಲಿಸಬೇಕು. 15 ದಿನದೊಳಗೆ ಜಿಲ್ಲಾಧಿಕಾರಿ, ಎಸ್ಪಿ ಖುದ್ದು ಪರಿಶೀಲಿಸಿ, ಕ್ರಮ ಕೈಗೊಳ್ಳದಿದ್ದ,ರೆ ಕಾಂಗ್ರೆಸ್ನಿಂದ ಹೋರಾಟ ಹಮ್ಮಿಕೊಳ್ಳಲಾಗುವುದು’ ಎಂದು ಎಚ್ಚರಿಸಿದರು.</p>.<p>‘ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪಮೇಯರ್ ಚುನಾವಣೆ ನಡೆಸದ ಕಾರಣ ಮುಂದಿನ ವಾರ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲು ನಿರ್ಧರಿಸಿದ್ದೇವೆ’ ಎಂದರು.</p>.<p>ವಿದ್ಯಾನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಜತ್ ಉಳ್ಳಾಗಡ್ಡಿಮಠ, ನೆಲವಡಿ ಗ್ರಾಮದ ಪ್ರದೀಪ ಕೆಂಚನಗೌಡರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ‘ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಅಕ್ರಮವಾಗಿ ಟೋಲ್ ಸಂಗ್ರಹ ಮಾಡಲಾಗುತ್ತಿದ್ದು, ಕೂಡಲೇ ಟೋಲ್ ಸಂಗ್ರಹ ನಿಲ್ಲಿಸಬೇಕು’ ಎಂದು ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ಪಿ.ಎಚ್. ನೀರಲಕೇರಿ ಆಗ್ರಹಿಸಿದರು.</p>.<p>ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಹುಬ್ಬಳ್ಳಿಯಿಂದ ಹೊಸಪೇಟೆವರೆಗಿನ 143.78 ಕಿ.ಮೀ ಹೆದ್ದಾರಿಯಲ್ಲಿ ₹2,293 ಕೋಟಿ ಮೊತ್ತದ ಚತುಷ್ಪಥ ಹಾಗೂ ₹1,625 ಕೋಟಿ ವೆಚ್ಚದ ಎರಡು ಸರ್ವಿಸ್ ರಸ್ತೆ ನಿರ್ಮಾಣಕ್ಕೆ 2016ರಲ್ಲಿ ಚಾಲನೆ ನೀಡಲಾಯಿತು. ಕಾಮಗಾರಿ ಪೂರ್ಣಗೊಳಿಸಲು ಎರಡು ವರ್ಷಗಳ ಗುರಿ ನೀಡಲಾಗಿದ್ದರೂ, ಈವರೆಗೆ ಪೂರ್ಣಗೊಂಡಿಲ್ಲ’ ಎಂದು ದೂರಿದರು.</p>.<p>‘ಕಾಮಗಾರಿ ಪೂರ್ಣಗೊಳಿಸದೆ ಟೋಲ್ ಸಂಗ್ರಹಿಸುವಂತಿಲ್ಲ ಎಂಬ ನಿಯಮ ಉಲ್ಲಂಘಿಸಲಾಗುತ್ತಿದೆ. ಇದರಿಂದ ಬಸ್ ಪ್ರಯಾಣ ದರ ಏರಿಕೆಯಾಗಿ, ಪ್ರಯಾಣಿಕರಿಗೆ ಹೊರೆಯಾಗುತ್ತಿದೆ. ಹೆದ್ದಾರಿ ಸುತ್ತಲಿನ ಹಳ್ಳಿಗರು, ರೈತರಿಂದ ಟೋಲ್ ವಸೂಲಿ ಮಾಡುತ್ತಿರುವುದು ಸರಿಯಲ್ಲ’ ಎಂದರು.</p>.<p>‘ಹೆದ್ದಾರಿಯಲ್ಲಿ ಪ್ರತಿ 2 ಕಿ.ಮೀ.ಗೆ ಬಿರುಕು ಉಂಟಾಗಿದೆ. ಹೀಗಿದ್ದರೂ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್, ಸಕ್ಕರೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ಜಿಲ್ಲಾಧಿಕಾರಿ ಯಾವುದೇ ಕ್ರಮ ಕೈಗೊಳ್ಳದೆ, ಜನರನ್ನು ಲೂಟಿ ಮಾಡಲು ಪ್ರೋತ್ಸಾಹಿಸುತ್ತಿದ್ದಾರೆ’ ಎಂದು ಟೀಕಿಸಿದರು.</p>.<p>‘ಕಾಮಗಾರಿ ಪೂರ್ಣಗೊಳಿಸದೆ ಟೋಲ್ ಸಂಗ್ರಹಿಸಬಾರದು ಹಾಗೂ ರೈತರಿಂದ ಹಣ ಪಡೆಯಲೇಬಾರದೆಂದು ಜಿಲ್ಲಾಡಳಿತ ಆದೇಶಿಸಬೇಕು. ಇಲ್ಲವಾದರೆ, ಜನರೇ ಟೋಲ್ ನೀಡುವುದನ್ನು ನಿಲ್ಲಿಸಬೇಕು. 15 ದಿನದೊಳಗೆ ಜಿಲ್ಲಾಧಿಕಾರಿ, ಎಸ್ಪಿ ಖುದ್ದು ಪರಿಶೀಲಿಸಿ, ಕ್ರಮ ಕೈಗೊಳ್ಳದಿದ್ದ,ರೆ ಕಾಂಗ್ರೆಸ್ನಿಂದ ಹೋರಾಟ ಹಮ್ಮಿಕೊಳ್ಳಲಾಗುವುದು’ ಎಂದು ಎಚ್ಚರಿಸಿದರು.</p>.<p>‘ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪಮೇಯರ್ ಚುನಾವಣೆ ನಡೆಸದ ಕಾರಣ ಮುಂದಿನ ವಾರ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲು ನಿರ್ಧರಿಸಿದ್ದೇವೆ’ ಎಂದರು.</p>.<p>ವಿದ್ಯಾನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಜತ್ ಉಳ್ಳಾಗಡ್ಡಿಮಠ, ನೆಲವಡಿ ಗ್ರಾಮದ ಪ್ರದೀಪ ಕೆಂಚನಗೌಡರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>