<p><strong>ಹುಬ್ಬಳ್ಳಿ:</strong> ‘ಛಾಯಾಗ್ರಹಣ ಕ್ಷೇತ್ರದಲ್ಲಿಯೂ ತಂತ್ರಜ್ಞಾನ ನಿರಂತರವಾಗಿ ಬದಲಾಗುತ್ತಿದ್ದು, ಇದಕ್ಕೆ ಛಾಯಾಗ್ರಾಹಕರು ಹೊಂದಿಕೊಳ್ಳಬೇಕಾದ ಅಗತ್ಯವಿದೆ’ ಎಂದು ನೈರುತ್ಯ ರೈಲ್ವೆ ವಲಯದ ಪ್ರಧಾನ ವ್ಯವಸ್ಥಾಪಕ ಮುಕುಲ್ ಸರನ್ ಮಾಥೂರ್ ಹೇಳಿದರು.</p>.<p>ನಗರದ ವಾಸವಿ ಮಹಲ್ನಲ್ಲಿ ಕರ್ನಾಟಕ ವಿಡಿಯೊ ಮತ್ತು ಫೋಟೊ ಅಸೋಸಿಯೇಷನ್ ಆಶ್ರಯದಲ್ಲಿ ಶನಿವಾರ ನಡೆದ ‘11ನೇ ಆವೃತ್ತಿಯ ಡಿಜಿ ಫೋಟೊ ಎಕ್ಸ್ಪೋ’ ಉದ್ಘಾಟಿಸಿ, ಮಾತನಾಡಿದರು. </p>.<p>‘ಒಂದೇ ವೇದಿಕೆಯಲ್ಲಿ ಛಾಯಾಗ್ರಹಣಕ್ಕೆ ಸಂಬಂಧಿಸಿದ ಎಲ್ಲ ವಸ್ತು, ಉಪಕರಣ ಹಾಗೂ ಸಾಫ್ಟ್ವೇರ್ಗಳನ್ನು ಪರಿಚಯಿಸುವ ಪ್ರದರ್ಶನಗಳು, ಛಾಯಾಗ್ರಾಹಕರ ವೃತ್ತಿ ಬದುಕಿಗೆ ಉಪಯುಕ್ತವಾಗಿವೆ’ ಎಂದರು. </p>.<p>ವಿ.ಎ.ಕೆ ಸಂಸ್ಥಾಪಕ ಅಧ್ಯಕ್ಷ ವೆಂಕಟೇಶ ಕಾಟವೆ ಹಾಗೂ ಪಾಲಿಕೆ ಸದಸ್ಯ ಚೇತನ ಹಿರೇಕೆರೂರು ಮಾತನಾಡಿದರು. </p>.<p>ಇದೇ ವೇಳೆ ಉತ್ತರ ಕರ್ನಾಟಕ ಭಾಗದ ವಿವಿಧ ಜಿಲ್ಲೆಗಳ 12 ಮಂದಿ ಛಾಯಾಗ್ರಾಹಕರಿಗೆ ‘ಉತ್ತರ ಕರ್ನಾಟಕ ಛಾಯಾ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಯಿತು. </p>.<p>ಅಸೋಸಿಯೇಷನ್ ಅಧ್ಯಕ್ಷ ಕಿರಣ್ ಬಾಕಳೆ, ಸಂಘದ ಪ್ರಮುಖರಾದ ಶ್ರೀನಿವಾಸ್, ದಿನೇಶ್ ದಾಬಡೆ, ರವೀಂದ್ರ ಕಾಟೀಗರ, ಅನಿಲ್ ತುರುಮರಿ, ಅನಿಲ್ ಕಲಾಲ ಸೇರಿದಂತೆ ಪದಾಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ‘ಛಾಯಾಗ್ರಹಣ ಕ್ಷೇತ್ರದಲ್ಲಿಯೂ ತಂತ್ರಜ್ಞಾನ ನಿರಂತರವಾಗಿ ಬದಲಾಗುತ್ತಿದ್ದು, ಇದಕ್ಕೆ ಛಾಯಾಗ್ರಾಹಕರು ಹೊಂದಿಕೊಳ್ಳಬೇಕಾದ ಅಗತ್ಯವಿದೆ’ ಎಂದು ನೈರುತ್ಯ ರೈಲ್ವೆ ವಲಯದ ಪ್ರಧಾನ ವ್ಯವಸ್ಥಾಪಕ ಮುಕುಲ್ ಸರನ್ ಮಾಥೂರ್ ಹೇಳಿದರು.</p>.<p>ನಗರದ ವಾಸವಿ ಮಹಲ್ನಲ್ಲಿ ಕರ್ನಾಟಕ ವಿಡಿಯೊ ಮತ್ತು ಫೋಟೊ ಅಸೋಸಿಯೇಷನ್ ಆಶ್ರಯದಲ್ಲಿ ಶನಿವಾರ ನಡೆದ ‘11ನೇ ಆವೃತ್ತಿಯ ಡಿಜಿ ಫೋಟೊ ಎಕ್ಸ್ಪೋ’ ಉದ್ಘಾಟಿಸಿ, ಮಾತನಾಡಿದರು. </p>.<p>‘ಒಂದೇ ವೇದಿಕೆಯಲ್ಲಿ ಛಾಯಾಗ್ರಹಣಕ್ಕೆ ಸಂಬಂಧಿಸಿದ ಎಲ್ಲ ವಸ್ತು, ಉಪಕರಣ ಹಾಗೂ ಸಾಫ್ಟ್ವೇರ್ಗಳನ್ನು ಪರಿಚಯಿಸುವ ಪ್ರದರ್ಶನಗಳು, ಛಾಯಾಗ್ರಾಹಕರ ವೃತ್ತಿ ಬದುಕಿಗೆ ಉಪಯುಕ್ತವಾಗಿವೆ’ ಎಂದರು. </p>.<p>ವಿ.ಎ.ಕೆ ಸಂಸ್ಥಾಪಕ ಅಧ್ಯಕ್ಷ ವೆಂಕಟೇಶ ಕಾಟವೆ ಹಾಗೂ ಪಾಲಿಕೆ ಸದಸ್ಯ ಚೇತನ ಹಿರೇಕೆರೂರು ಮಾತನಾಡಿದರು. </p>.<p>ಇದೇ ವೇಳೆ ಉತ್ತರ ಕರ್ನಾಟಕ ಭಾಗದ ವಿವಿಧ ಜಿಲ್ಲೆಗಳ 12 ಮಂದಿ ಛಾಯಾಗ್ರಾಹಕರಿಗೆ ‘ಉತ್ತರ ಕರ್ನಾಟಕ ಛಾಯಾ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಯಿತು. </p>.<p>ಅಸೋಸಿಯೇಷನ್ ಅಧ್ಯಕ್ಷ ಕಿರಣ್ ಬಾಕಳೆ, ಸಂಘದ ಪ್ರಮುಖರಾದ ಶ್ರೀನಿವಾಸ್, ದಿನೇಶ್ ದಾಬಡೆ, ರವೀಂದ್ರ ಕಾಟೀಗರ, ಅನಿಲ್ ತುರುಮರಿ, ಅನಿಲ್ ಕಲಾಲ ಸೇರಿದಂತೆ ಪದಾಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>