ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯಕ್ಕೆ ಮೋದಿ ಭೇಟಿ; ಸಕಲ ಸಿದ್ಧತೆ- ಸಿಎಂ ಬೊಮ್ಮಾಯಿ

Last Updated 19 ಜೂನ್ 2022, 8:59 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಇದೇ 20, 21 ರಂದು ಪ್ರಧಾನಿ ನರೇಂದ್ರ ಮೋದಿ ರಾಜ್ಯ ಪ್ರವಾಸಕೈಗೊಳ್ಳಲಿದ್ದು, ಇದಕ್ಕಾಗಿ ಸರ್ಕಾರವು ಸಕಲ ಸಿದ್ಧತೆ ಮಾಡಿಕೊಂಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಭಾನುವಾರ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, 20 ರಂದು ಬೆಂಗಳೂರಿನಲ್ಲಿ ಕೆಲ ರೇಲ್ವೆ ಯೋಜನೆ ಕಾಮಗಾರಿ ಹಾಗೂ ಶಿಲಾನ್ಯಾಸ, ಇಂಡಿಯನ್ ಇನ್ಸ್ಟಿಟ್ಯೂಟ್ ಆಪ್ ಸಾಯಿನ್ಸ್ ಸ್ಕೂಲ್ ಉದ್ಘಾಟನೆ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವರು. 21 ರಂದು ಮೈಸೂರಿನಲ್ಲಿ ಅಂತರ ರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರು.

ಮೋದಿ ಅವರ ಕಾರ್ಯಕ್ರಮದಲ್ಲಿ ಜನ ಸೇರುವುದರಿಂದ ಕೋವಿಡ್ ಸೋಂಕು ಹರಡುವುದಿಲ್ಲವೇ ಎಂಬ ಕೇಳಿದ ಪ್ರಶ್ನೆಗೆ ಮುನಿಸಿಕೊಂಡು ಉತ್ತರಿಸದೇ ತೆರಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT