<p><strong>ಹುಬ್ಬಳ್ಳಿ</strong>: ‘ನಗರದ ಮಂಟೂರು ರಸ್ತೆಯಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ (ಪಿಎಂಎವೈ) ನಿರ್ಮಿಸಿರುವ 1,008 ಮನೆಗಳ ಹಂಚಿಕೆಯಲ್ಲಿ ಭ್ರಷ್ಟಾಚಾರ ನಡೆದಿದೆ’ ಎಂದು ರಾಜ್ಯ ಬಿಜೆಪಿ ಎಸ್ಸಿ ಮೊರ್ಚಾ ಪ್ರಧಾನ ಕಾರ್ಯದರ್ಶಿ ಮಹೇಂದ್ರ ಕೌತಾಳ ಆರೋಪಿಸಿದರು.</p>.<p>ನಗರದ ಬಿಜೆಪಿ ಕಚೇರಿಯಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪರಿಶಿಷ್ಟ ಸಮುದಾಯಗಳ ಅಭಿವೃದ್ಧಿಗಾಗಿ ಮೀಸಲಿಟ್ಟಿದ್ದ ಎಸ್ಸಿಪಿ, ಟಿಎಸ್ಪಿ ಅನುದಾನವನ್ನು ಮನೆಗಳ ನಿರ್ಮಾಣಕ್ಕಾಗಿ ಬಳಸಿಕೊಳ್ಳಲಾಗಿದೆ. ಇದು ಪರಿಶಿಷ್ಟ ಸಮುದಾಯದ ಜನರಿಗೆ ಮಾಡಿದ ಅನ್ಯಾಯವಾಗಿದೆ. ಈ ಬಗ್ಗೆ ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ, ಶಾಸಕ ಪ್ರಸಾದ ಅಬ್ಬಯ್ಯ ಅವರಿಗೆ ಮಾಹಿತಿ ಇದ್ದರೂ ಸದನದಲ್ಲಿ ಇದನ್ನು ಪ್ರಶ್ನಿಸಿಲ್ಲ’ ಎಂದು ದೂರಿದರು. </p>.<p>‘ಮನೆಗಳ ನಿರ್ಮಾಣದ ಗುತ್ತಿಗೆದಾರರಿಗೆ ₹1,100 ಕೋಟಿ ಬಿಲ್ ಪಾವತಿಸಿಲ್ಲ. ಬಿಲ್ ಪಾವತಿಗಾಗಿ ಶೇ 28ರಷ್ಟು ಕಮಿಷನ್ ಕೇಳುತ್ತಿದ್ದಾರೆ ಎಂಬ ಆರೋಪಗಳಿವೆ. ಈ ಬಗ್ಗೆ ತನಿಖೆಯಾಗಬೇಕು’ ಎಂದು ಆಗ್ರಹಿಸಿದರು. </p>.<p>‘ಮನೆಗಳ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರದ ಪಾಲಿನ ಅನುದಾನ ಮಂಜೂರು ಮಾಡಿಸುವಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಪಾತ್ರ ತುಂಬಾ ಇದೆ. ಆದರೆ, ಶಿಷ್ಟಾಚಾರದ ಅನ್ವಯ ಅವರನ್ನೇ ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ’ ಎಂದು ದೂರಿದರು. </p>.<p>‘ಹುಬ್ಬಳ್ಳಿ-ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 38 ಕೊಳಚೆ ಪ್ರದೇಶಗಳಿದ್ದು, ಇಂದಿಗೂ ಮೂಲಸೌಕರ್ಯಗಳಿಂದ ವಂಚಿತವಾಗಿವೆ. ಶಾಸಕ ಪ್ರಸಾದ ಅಬ್ಬಯ್ಯ ಅವರು ತಮ್ಮ ಕ್ಷೇತ್ರದಲ್ಲಿ ಏನು ಅಭಿವೃದ್ಧಿ ಮಾಡಿದ್ದಾರೆ ಎಂಬುದನ್ನು ತೋರಿಸಲಿ’ ಎಂದರು. </p>.<p>ಬಿಜೆಪಿ ಮುಖಂಡರಾದ ಪ್ರಕಾಶ ಕ್ಯಾರಕಟ್ಟಿ, ಸಂತೋಷ ಅರಕೇರಿ ಅವರು, ‘ಮನೆಗಳ ಹಂಚಿಕೆಯಲ್ಲಿ ಕಾಂಗ್ರೆಸ್ ಸರ್ಕಾರವು ತುಷ್ಟೀಕರಣ ರಾಜಕಾರಣ ಮಾಡುತ್ತಿದೆ. ಸಾಮಾಜಿಕ ನ್ಯಾಯದ ಪರಿಕಲ್ಪನೆಯಡಿಯಲ್ಲಿ ಎಲ್ಲಾ ವರ್ಗದ ಬಡವರಿಗೆ ಮನೆಗಳ ಹಂಚಿಕೆ ಮಾಡಬೇಕು. ನಿರ್ಲಕ್ಷಿಸಿದ್ದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಮಾಡಲಾಗುತ್ತದೆ’ ಎಂದರು. </p>.<p>ಬಿಜೆಪಿ ಮುಖಂಡರಾದ ಮಂಜುನಾಥ ಕಾಟಕರ, ಶಿವುಕುಮಾರ ಮೆಣಸಿನಕಾಯಿ, ಶಶಿಕಾಂತ ಬಿಜವಾಡ, ಅನೂಪ ಬಿಜವಾಡ, ವಿಜಯ ಗುಂಟ್ರಾಳ, ರಾಜು ಕೋರ್ಯಾಣಮಠ ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ‘ನಗರದ ಮಂಟೂರು ರಸ್ತೆಯಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ (ಪಿಎಂಎವೈ) ನಿರ್ಮಿಸಿರುವ 1,008 ಮನೆಗಳ ಹಂಚಿಕೆಯಲ್ಲಿ ಭ್ರಷ್ಟಾಚಾರ ನಡೆದಿದೆ’ ಎಂದು ರಾಜ್ಯ ಬಿಜೆಪಿ ಎಸ್ಸಿ ಮೊರ್ಚಾ ಪ್ರಧಾನ ಕಾರ್ಯದರ್ಶಿ ಮಹೇಂದ್ರ ಕೌತಾಳ ಆರೋಪಿಸಿದರು.</p>.<p>ನಗರದ ಬಿಜೆಪಿ ಕಚೇರಿಯಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪರಿಶಿಷ್ಟ ಸಮುದಾಯಗಳ ಅಭಿವೃದ್ಧಿಗಾಗಿ ಮೀಸಲಿಟ್ಟಿದ್ದ ಎಸ್ಸಿಪಿ, ಟಿಎಸ್ಪಿ ಅನುದಾನವನ್ನು ಮನೆಗಳ ನಿರ್ಮಾಣಕ್ಕಾಗಿ ಬಳಸಿಕೊಳ್ಳಲಾಗಿದೆ. ಇದು ಪರಿಶಿಷ್ಟ ಸಮುದಾಯದ ಜನರಿಗೆ ಮಾಡಿದ ಅನ್ಯಾಯವಾಗಿದೆ. ಈ ಬಗ್ಗೆ ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ, ಶಾಸಕ ಪ್ರಸಾದ ಅಬ್ಬಯ್ಯ ಅವರಿಗೆ ಮಾಹಿತಿ ಇದ್ದರೂ ಸದನದಲ್ಲಿ ಇದನ್ನು ಪ್ರಶ್ನಿಸಿಲ್ಲ’ ಎಂದು ದೂರಿದರು. </p>.<p>‘ಮನೆಗಳ ನಿರ್ಮಾಣದ ಗುತ್ತಿಗೆದಾರರಿಗೆ ₹1,100 ಕೋಟಿ ಬಿಲ್ ಪಾವತಿಸಿಲ್ಲ. ಬಿಲ್ ಪಾವತಿಗಾಗಿ ಶೇ 28ರಷ್ಟು ಕಮಿಷನ್ ಕೇಳುತ್ತಿದ್ದಾರೆ ಎಂಬ ಆರೋಪಗಳಿವೆ. ಈ ಬಗ್ಗೆ ತನಿಖೆಯಾಗಬೇಕು’ ಎಂದು ಆಗ್ರಹಿಸಿದರು. </p>.<p>‘ಮನೆಗಳ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರದ ಪಾಲಿನ ಅನುದಾನ ಮಂಜೂರು ಮಾಡಿಸುವಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಪಾತ್ರ ತುಂಬಾ ಇದೆ. ಆದರೆ, ಶಿಷ್ಟಾಚಾರದ ಅನ್ವಯ ಅವರನ್ನೇ ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ’ ಎಂದು ದೂರಿದರು. </p>.<p>‘ಹುಬ್ಬಳ್ಳಿ-ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 38 ಕೊಳಚೆ ಪ್ರದೇಶಗಳಿದ್ದು, ಇಂದಿಗೂ ಮೂಲಸೌಕರ್ಯಗಳಿಂದ ವಂಚಿತವಾಗಿವೆ. ಶಾಸಕ ಪ್ರಸಾದ ಅಬ್ಬಯ್ಯ ಅವರು ತಮ್ಮ ಕ್ಷೇತ್ರದಲ್ಲಿ ಏನು ಅಭಿವೃದ್ಧಿ ಮಾಡಿದ್ದಾರೆ ಎಂಬುದನ್ನು ತೋರಿಸಲಿ’ ಎಂದರು. </p>.<p>ಬಿಜೆಪಿ ಮುಖಂಡರಾದ ಪ್ರಕಾಶ ಕ್ಯಾರಕಟ್ಟಿ, ಸಂತೋಷ ಅರಕೇರಿ ಅವರು, ‘ಮನೆಗಳ ಹಂಚಿಕೆಯಲ್ಲಿ ಕಾಂಗ್ರೆಸ್ ಸರ್ಕಾರವು ತುಷ್ಟೀಕರಣ ರಾಜಕಾರಣ ಮಾಡುತ್ತಿದೆ. ಸಾಮಾಜಿಕ ನ್ಯಾಯದ ಪರಿಕಲ್ಪನೆಯಡಿಯಲ್ಲಿ ಎಲ್ಲಾ ವರ್ಗದ ಬಡವರಿಗೆ ಮನೆಗಳ ಹಂಚಿಕೆ ಮಾಡಬೇಕು. ನಿರ್ಲಕ್ಷಿಸಿದ್ದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಮಾಡಲಾಗುತ್ತದೆ’ ಎಂದರು. </p>.<p>ಬಿಜೆಪಿ ಮುಖಂಡರಾದ ಮಂಜುನಾಥ ಕಾಟಕರ, ಶಿವುಕುಮಾರ ಮೆಣಸಿನಕಾಯಿ, ಶಶಿಕಾಂತ ಬಿಜವಾಡ, ಅನೂಪ ಬಿಜವಾಡ, ವಿಜಯ ಗುಂಟ್ರಾಳ, ರಾಜು ಕೋರ್ಯಾಣಮಠ ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>