ಧಾರವಾಡ: ನಾಡೋಜ ಡಾ. ಚೆನ್ನವೀರ ಕಣವಿ ಅವರ ಪಾರ್ಥೀವ ಶರೀರವನ್ನು ಇಲ್ಲಿನ ಕಲ್ಯಾಣ ನಗರದಲ್ಲಿರುವ ಅವರ ಮನೆ ಬಳಿ ದರ್ಶನಕ್ಕೆ ಇಡಲಾಗಿದೆ. ಗಣ್ಯರು, ಸಂಬಂಧಿಕರು ಹಾಗೂ ಅವರ ಅಭಿಮಾನಿಗಳು ಕಣವಿ ಅವರ ಅಂತಿಮ ದರ್ಶನ ಪಡೆದರು.
ಬೆಳಿಗ್ಗೆ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಸಂಬಂಧಿಕರು ಕಣವಿ ಅವರ ಮನೆಗೆ ಭೇಟಿ ನೀಡಿದರು. ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಿದರು.
ಶಾಸಕ ಅರವಿಂದ ಬೆಲ್ಲದ, ಕರ್ನಾಟಕ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಚಂದ್ರಕಾಂತ ಬೆಲ್ಲದ ಸೇರಿದಂತೆ ವಿವಿಧ ಗಣ್ಯರು ಕಣವಿ ಅವರ ಅಂತಿಮ ದರ್ಶನ ಪಡೆದರು.
ಧಾರವಾಡ: ಚೆಂಬೆಳಕಿನ ಕವಿ, ನಾಡೋಜ ಡಾ.ಚೆನ್ನವೀರ ಕಣವಿ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕಾಗಿ ಕೆಸಿಡಿ ಆವರಣದಲ್ಲಿ ಇರಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.
ಕವಿ ಕಣವಿ ಪಾರ್ಥಿವ ಶರೀರದ ಸಾರ್ವಜನಿಕ ದರ್ಶನಕ್ಕೆ ಕೆಸಿಡಿ ಆವರಣದಲ್ಲಿ ಜಿಲ್ಲಾಡಳಿತದಿಂದ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ. ಮಧ್ಯಾಹ್ನ 1 ರಿಂದ 3ರವರೆಗೆ ಅಂತಿಮ ದರ್ಶನ ಪಡೆಯಬಹುದಾಗಿದೆ.