<p><strong>ಹುಬ್ಬಳ್ಳಿ:</strong> ‘ಸುಜಾತಾ ಹಂಡಿ ಅವರ ಮೇಲೆ ನಡೆದ ಪೊಲೀಸ್ ದೌರ್ಜನ್ಯ, ಕಾಂಗ್ರೆಸ್ ಪ್ರಾಯೋಜಿತ ಗುಂಡಾಗಿರಿಯಾಗಿದೆ. ಘಟನೆ ಕುರಿತು ನ್ಯಾಯಾಧೀಶರಿಂದ ತನಿಖೆ ನಡೆಸಬೇಕು’ ಎಂದು ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷೆ ಸಿ.ಮಂಜುಳಾ ಹೇಳಿದರು.</p><p>ಇಲ್ಲಿನ ಚಾಲುಕ್ಯ ನಗರದಲ್ಲಿರುವ ಸುಜಾತಾ ಹಂಡಿ ಅವರ ಮನೆಗೆ ಗುರುವಾರ ಭೇಟಿ ನೀಡಿ, ಘಟನೆ ಕುರಿತು ಅವರ ಕುಟುಂಬ ಸದಸ್ಯರಿಂದ ಮಾಹಿತಿ ಪಡೆದು ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.</p><p>‘ಪುಡಾರಿಗಳು ಮಾಡುವ ಕೆಲಸವನ್ನು ಇನ್ಸ್ಪೆಕ್ಟರ್ ಕೆ.ಎಸ್.ಹಟ್ಟಿ ಅವರು ಪೊಲೀಸ್ ಸಮವಸ್ತ್ರ ಧರಿಸಿ ಮಾಡಿದ್ದಾರೆ. ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಅವರು ಹಟ್ಟಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಅವರನ್ನು ಸೇವೆಯಿಂದ ವಜಾಗೊಳಿಸಬೇಕು’ ಎಂದು ಹೇಳಿದರು.</p><p>‘ರಾಜ್ಯ ಮಹಿಳಾ ಆಯೋಗವು ನಿಷ್ಪಕ್ಷಪಾತವಾಗಿ ನಡೆದುಕೊಳ್ಳುತ್ತಿಲ್ಲ. ಹೀಗಾಗಿ ರಾಷ್ಟ್ರೀಯ ಮಹಿಳಾ ಆಯೋಗವು ಇಲ್ಲಿಗೆ ಭೇಟಿ ತನಿಖೆ ನಡೆಸಬೇಕು. ಘಟನೆ ಕುರಿತು ಅವರಿಗೆ ಈಗಾಗಲೇ ಮಾಹಿತಿ ನೀಡಲಾಗಿದೆ’ ಎಂದರು. </p><p>‘ಮಹಿಳೆಯೇ ವಿವಸ್ತ್ರಗೊಂಡಿದ್ದಾಳೆ ಎಂದು ಮಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಗುರವಾಗಿ ಹೇಳಿಕೆ ನೀಡಿರುವುದು ಖಂಡನೀಯ. ಅವರಿಗೆ ರಾಜ್ಯದ ಮಹಿಳೆಯರ ಬಗ್ಗೆ ಗೌರವ ಇದ್ದರೆ, ಕೂಡಲೇ ಈ ಕುರಿತು ತನಿಖೆಗೆ ಆದೇಶಿಸಬೇಕು. ಮಹಾನಗರ ಪಾಲಿಕೆ ಸದಸ್ಯೆ ಸುವರ್ಣಾ ಕಲ್ಲಕುಂಟ್ಲ ಅವರ ವಿರುದ್ಧ ಈಗಾಗಲೇ ಪ್ರಕರಣ ದಾಖಲಾಗಿದ್ದು, ಅವರನ್ನು ಕೂಡಲೇ ಬಂಧಿಸಬೇಕು. ಸುಜಾತಾ ಅವರ ಮನೆಗೆ ಭದ್ರತೆ ಒದಗಿಸಬೇಕು’ ಎಂದು ಹೇಳಿದರು. </p><p>‘40 ಪೊಲೀಸರು ಒಬ್ಬ ಮಹಿಳೆ ವಿವಸ್ತ್ರವಾಗುವುದನ್ನು ತಡೆಯಲು ಸಾಧ್ಯವಾಗಲಿಲ್ಲವೇ ಎಂದು ಪ್ರಶ್ನಿಸಿದ ಅವರು, ಇದು ಲಜ್ಜೆಗೆಟ್ಟ, ಮಾನಗೇಡಿ ಸರ್ಕಾರ. ಪುಂಡ ಪೋಕರಿಗಳ ಕೈಯಲ್ಲಿ ಕಾನೂನು ಸುವ್ಯವಸ್ಥೆ ಕೊಟ್ಟು ಅವರ ಮುಂದೆ ನಡುಬಗ್ಗಿಸಿದೆ’ ಎಂದರು.</p><p>‘ಮಹಾನಗರ ಪಾಲಿಕೆ ಸದಸ್ಯೆ ಸುವರ್ಣಾ ಕಲ್ಲಕುಂಟ್ಲ ಬಡವರ ಮೇಲೆ ದೌರ್ಜನ್ಯ ಮಾಡುತ್ತಿದ್ದಾರೆ. ಅವರನ್ನು ಕಾಂಗ್ರೆಸ್ ಪಕ್ಷದಿಂದ ಹೊರಹಾಕಬೇಕು’ ಎಂದು ಆಗ್ರಹಿಸಿದರು.</p><p>‘ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಪ್ರಧಾನಿ ಬಗ್ಗೆ ಮಾತನಾಡುತ್ತಾರೆ. ಆದರೆ, ಅವರ ಜಿಲ್ಲೆಯಲ್ಲಿ ನೇಹಾ, ಅಂಜಲಿ ಅವರ ಕೊಲೆಗಳಾಗಿವೆ. ಈಗ ಮಹಿಳೆಯನ್ನು ವಿವಸ್ತ್ರಗೊಳಿಸಿ, ದೌರ್ಜನ್ಯ ಎಸಗಲಾಗಿದೆ. ಕಾಂಗ್ರೆಸ್ನವರು ದುರ್ಯೋಧನ, ದುಶ್ಯಾನರಂತೆ ಆಗಿದ್ದಾರೆ’ ಎಂದರು.</p><p>‘ಸುಜಾತಾ ಹಂಡಿ ಮಹಿಳಾ ಪೊಲೀಸರ ಮೇಲೆ ಹಲ್ಲೆ ಮಾಡಿದ್ದರೆ ತನಿಖೆ ನಡೆಸಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಿ. ಘಟನೆ ಕುರಿತು ಪೊಲೀಸ್ ಇಲಾಖೆ ಐದು ವಿಡಿಯೊಗಳನ್ನು ಮಾಡಿದೆ. ಅದರಲ್ಲಿ ಆಕೆ ಪೊಲೀಸರಿಗೆ ಕಚ್ಚಿದ ದೃಶ್ಯಗಳಿಲ್ಲ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ‘ಸುಜಾತಾ ಹಂಡಿ ಅವರ ಮೇಲೆ ನಡೆದ ಪೊಲೀಸ್ ದೌರ್ಜನ್ಯ, ಕಾಂಗ್ರೆಸ್ ಪ್ರಾಯೋಜಿತ ಗುಂಡಾಗಿರಿಯಾಗಿದೆ. ಘಟನೆ ಕುರಿತು ನ್ಯಾಯಾಧೀಶರಿಂದ ತನಿಖೆ ನಡೆಸಬೇಕು’ ಎಂದು ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷೆ ಸಿ.ಮಂಜುಳಾ ಹೇಳಿದರು.</p><p>ಇಲ್ಲಿನ ಚಾಲುಕ್ಯ ನಗರದಲ್ಲಿರುವ ಸುಜಾತಾ ಹಂಡಿ ಅವರ ಮನೆಗೆ ಗುರುವಾರ ಭೇಟಿ ನೀಡಿ, ಘಟನೆ ಕುರಿತು ಅವರ ಕುಟುಂಬ ಸದಸ್ಯರಿಂದ ಮಾಹಿತಿ ಪಡೆದು ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.</p><p>‘ಪುಡಾರಿಗಳು ಮಾಡುವ ಕೆಲಸವನ್ನು ಇನ್ಸ್ಪೆಕ್ಟರ್ ಕೆ.ಎಸ್.ಹಟ್ಟಿ ಅವರು ಪೊಲೀಸ್ ಸಮವಸ್ತ್ರ ಧರಿಸಿ ಮಾಡಿದ್ದಾರೆ. ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಅವರು ಹಟ್ಟಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಅವರನ್ನು ಸೇವೆಯಿಂದ ವಜಾಗೊಳಿಸಬೇಕು’ ಎಂದು ಹೇಳಿದರು.</p><p>‘ರಾಜ್ಯ ಮಹಿಳಾ ಆಯೋಗವು ನಿಷ್ಪಕ್ಷಪಾತವಾಗಿ ನಡೆದುಕೊಳ್ಳುತ್ತಿಲ್ಲ. ಹೀಗಾಗಿ ರಾಷ್ಟ್ರೀಯ ಮಹಿಳಾ ಆಯೋಗವು ಇಲ್ಲಿಗೆ ಭೇಟಿ ತನಿಖೆ ನಡೆಸಬೇಕು. ಘಟನೆ ಕುರಿತು ಅವರಿಗೆ ಈಗಾಗಲೇ ಮಾಹಿತಿ ನೀಡಲಾಗಿದೆ’ ಎಂದರು. </p><p>‘ಮಹಿಳೆಯೇ ವಿವಸ್ತ್ರಗೊಂಡಿದ್ದಾಳೆ ಎಂದು ಮಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಗುರವಾಗಿ ಹೇಳಿಕೆ ನೀಡಿರುವುದು ಖಂಡನೀಯ. ಅವರಿಗೆ ರಾಜ್ಯದ ಮಹಿಳೆಯರ ಬಗ್ಗೆ ಗೌರವ ಇದ್ದರೆ, ಕೂಡಲೇ ಈ ಕುರಿತು ತನಿಖೆಗೆ ಆದೇಶಿಸಬೇಕು. ಮಹಾನಗರ ಪಾಲಿಕೆ ಸದಸ್ಯೆ ಸುವರ್ಣಾ ಕಲ್ಲಕುಂಟ್ಲ ಅವರ ವಿರುದ್ಧ ಈಗಾಗಲೇ ಪ್ರಕರಣ ದಾಖಲಾಗಿದ್ದು, ಅವರನ್ನು ಕೂಡಲೇ ಬಂಧಿಸಬೇಕು. ಸುಜಾತಾ ಅವರ ಮನೆಗೆ ಭದ್ರತೆ ಒದಗಿಸಬೇಕು’ ಎಂದು ಹೇಳಿದರು. </p><p>‘40 ಪೊಲೀಸರು ಒಬ್ಬ ಮಹಿಳೆ ವಿವಸ್ತ್ರವಾಗುವುದನ್ನು ತಡೆಯಲು ಸಾಧ್ಯವಾಗಲಿಲ್ಲವೇ ಎಂದು ಪ್ರಶ್ನಿಸಿದ ಅವರು, ಇದು ಲಜ್ಜೆಗೆಟ್ಟ, ಮಾನಗೇಡಿ ಸರ್ಕಾರ. ಪುಂಡ ಪೋಕರಿಗಳ ಕೈಯಲ್ಲಿ ಕಾನೂನು ಸುವ್ಯವಸ್ಥೆ ಕೊಟ್ಟು ಅವರ ಮುಂದೆ ನಡುಬಗ್ಗಿಸಿದೆ’ ಎಂದರು.</p><p>‘ಮಹಾನಗರ ಪಾಲಿಕೆ ಸದಸ್ಯೆ ಸುವರ್ಣಾ ಕಲ್ಲಕುಂಟ್ಲ ಬಡವರ ಮೇಲೆ ದೌರ್ಜನ್ಯ ಮಾಡುತ್ತಿದ್ದಾರೆ. ಅವರನ್ನು ಕಾಂಗ್ರೆಸ್ ಪಕ್ಷದಿಂದ ಹೊರಹಾಕಬೇಕು’ ಎಂದು ಆಗ್ರಹಿಸಿದರು.</p><p>‘ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಪ್ರಧಾನಿ ಬಗ್ಗೆ ಮಾತನಾಡುತ್ತಾರೆ. ಆದರೆ, ಅವರ ಜಿಲ್ಲೆಯಲ್ಲಿ ನೇಹಾ, ಅಂಜಲಿ ಅವರ ಕೊಲೆಗಳಾಗಿವೆ. ಈಗ ಮಹಿಳೆಯನ್ನು ವಿವಸ್ತ್ರಗೊಳಿಸಿ, ದೌರ್ಜನ್ಯ ಎಸಗಲಾಗಿದೆ. ಕಾಂಗ್ರೆಸ್ನವರು ದುರ್ಯೋಧನ, ದುಶ್ಯಾನರಂತೆ ಆಗಿದ್ದಾರೆ’ ಎಂದರು.</p><p>‘ಸುಜಾತಾ ಹಂಡಿ ಮಹಿಳಾ ಪೊಲೀಸರ ಮೇಲೆ ಹಲ್ಲೆ ಮಾಡಿದ್ದರೆ ತನಿಖೆ ನಡೆಸಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಿ. ಘಟನೆ ಕುರಿತು ಪೊಲೀಸ್ ಇಲಾಖೆ ಐದು ವಿಡಿಯೊಗಳನ್ನು ಮಾಡಿದೆ. ಅದರಲ್ಲಿ ಆಕೆ ಪೊಲೀಸರಿಗೆ ಕಚ್ಚಿದ ದೃಶ್ಯಗಳಿಲ್ಲ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>