ಆಗ ಸ್ಥಳಕ್ಕೆ ಬಂದ ಇನ್ಸ್ಪೆಕ್ಟರ್ ಶ್ಯಾಮರಾಜ ಸಜ್ಜನ, ‘ಪೂರ್ವಾನುಮತಿ ಪಡೆಯದಿರುವುದರಿಂದ ರ್ಯಾಲಿಗೆ ಅವಕಾಶ ನೀಡುವುದಿಲ್ಲ. ಬೇಕಿದ್ದರೆ, ಮಿನಿ ವಿಧಾನಸೌಧಕ್ಕೆ ಹೋಗಿ ಮನವಿ ಕೊಡಿ’ ಎಂದು ಸಲಹೆ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಪ್ರತಿಭಟನಾಕಾರರು, ‘ನೆರೆ ಪರಿಹಾರ ವಿಳಂಬ ಖಂಡಿಸಿ ರ್ಯಾಲಿ ಹಮ್ಮಿಕೊಂಡಿದ್ದೆವೆಯೇ ಹೊರತು, ಬೇರೆ ಯಾವುದೇ ಉದ್ದೇಶವಿಲ್ಲ. ಹಾಗಾಗಿ, ನಮ್ಮ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ’ ಎಂದರು.