ಕರ್ನಾಟಕ ನೀರಾವರಿ ನಿಗಮ ನಿಯಮಿತ ವ್ಯವಸ್ಥಾಪಕ ನಿರ್ದೇಶಕರ ಕಚೇರಿ ಬೆಂಗಳೂರಿನಲ್ಲಿದ್ದು, ಕಚೇರಿಯನ್ನು ಧಾರವಾಡಕ್ಕೆ ಸ್ಥಳಾಂತರಿಸಬೇಕು ಎಂದು ಹಲವು ಬಾರಿ ಮನವಿ ಮಾಡಲಾಗಿದೆ. ಆದರೆ, ಇಲಾಖೆಯನ್ನು ಅವೈಜ್ಞಾನಿಕವಾಗಿ ದಾವಣಗೆರೆಗೆ ಸ್ಥಳಾಂತರ ಮಾಡಲಾಗುತ್ತಿದೆ. ನಿಗಮವು 22 ಜಿಲ್ಲೆಗಳ ವ್ಯಾಪ್ತಿಗೆ ಒಳಪಟ್ಟಿದೆ. ದಾವಣಗೆರೆ ನಿಗಮದ ವ್ಯಾಪ್ತಿಯಲ್ಲಿ ಇಲ್ಲ. ಧಾರವಾಡದಲ್ಲೇ ನಿಗಮದ ಕಚೇರಿ ಆರಂಭಿಸಬೇಕು ಎಂದು ಒತ್ತಾಯಿಸಿದರು.