<p><strong>ಹುಬ್ಬಳ್ಳಿ: </strong>ಚುನಾವಣೆಯಲ್ಲಿ ಮುಸ್ಲಿಮರ ಮತಗಳನ್ನು ಗಳಿಸಲು ಎಚ್.ಡಿ. ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಆರ್ಎಸ್ಎಸ್ ಅನ್ನು ಟೀಕಿಸುತ್ತಿದ್ದಾರೆ. ಇದರಿಂದ ಅವರಿಗೆ ಏನೂ ಲಾಭವಾಗುವುದಿಲ್ಲ ಎಂದು ಶಾಸಕ ಜಗದೀಶ ಶೆಟ್ಟರ್ ಹೇಳಿದರು.</p>.<p>ನಗರದಲ್ಲಿ ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ’ಸಾಕಷ್ಟು ಮುಸ್ಲಿಂ ನಾಯಕರು ಆರ್ಎಸ್ಎಸ್ ಅನ್ನು ಒಪ್ಪಿಕೊಂಡಿದ್ದಾರೆ. ಹಿಂದೆ ದೇವೇಗೌಡರು ಕೂಡ ಮೆಚ್ಚಿಕೊಂಡಿದ್ದರು. ಇವರ ಟೀಕೆಯಿಂದಾಗಿ ಆರ್ಎಸ್ಎಸ್ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಇನ್ನಷ್ಟು ಬಲಿಷ್ಠವಾಗಿ ಬೆಳೆಯುತ್ತದೆ’ ಎಂದರು.</p>.<p>’ತುಷ್ಠೀಕರಣ ರಾಜಕಾರಣಕ್ಕಾಗಿ ಆರ್ಎಸ್ಎಸ್ ಅನ್ನು ಟೀಕಿಸಲಾಗುತ್ತಿದೆ. ಸಂಘದಿಂದ ಭಾರತದ ಮೂಲ ಸಂಸ್ಕೃತಿ ಉಳಿಸುವ ಕೆಲಸವಾಗುತ್ತಿದೆ. ಈಗ ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಅವರಿಗೆ ಸಂಘದ ಮೇಲೆ ಬಹಳ ಪ್ರೀತಿ ಬಂದಿದೆ’ ಎಂದು ಚಟಾಕಿ ಹಾರಿಸಿದರು.</p>.<p>ಸಿಂದಗಿ ಹಾಗೂ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜೆಡಿಎಸ್ ಅಲ್ಪಸಂಖ್ಯಾತ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ ಬಗ್ಗೆ ಕೇಳಲಾದ ಪ್ರಶ್ನೆಗೆ ‘ಯಾರನ್ನು ಕಣಕ್ಕಿಳಿಸಬೇಕು ಎನ್ನುವುದು ಆಯಾ ಪಕ್ಷಕ್ಕೆ ಬಿಟ್ಟ ವಿಚಾರ. ಇದನ್ನು ಟೀಕಿಸುವ ಕಾಂಗ್ರೆಸ್ಗೆ ಅಲ್ಪಸಂಖ್ಯಾತರ ಮತಗಳನ್ನು ಗಳಿಸುವ ವಿಶ್ವಾಸವಿಲ್ಲವೇ’ ಎಂದು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: </strong>ಚುನಾವಣೆಯಲ್ಲಿ ಮುಸ್ಲಿಮರ ಮತಗಳನ್ನು ಗಳಿಸಲು ಎಚ್.ಡಿ. ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಆರ್ಎಸ್ಎಸ್ ಅನ್ನು ಟೀಕಿಸುತ್ತಿದ್ದಾರೆ. ಇದರಿಂದ ಅವರಿಗೆ ಏನೂ ಲಾಭವಾಗುವುದಿಲ್ಲ ಎಂದು ಶಾಸಕ ಜಗದೀಶ ಶೆಟ್ಟರ್ ಹೇಳಿದರು.</p>.<p>ನಗರದಲ್ಲಿ ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ’ಸಾಕಷ್ಟು ಮುಸ್ಲಿಂ ನಾಯಕರು ಆರ್ಎಸ್ಎಸ್ ಅನ್ನು ಒಪ್ಪಿಕೊಂಡಿದ್ದಾರೆ. ಹಿಂದೆ ದೇವೇಗೌಡರು ಕೂಡ ಮೆಚ್ಚಿಕೊಂಡಿದ್ದರು. ಇವರ ಟೀಕೆಯಿಂದಾಗಿ ಆರ್ಎಸ್ಎಸ್ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಇನ್ನಷ್ಟು ಬಲಿಷ್ಠವಾಗಿ ಬೆಳೆಯುತ್ತದೆ’ ಎಂದರು.</p>.<p>’ತುಷ್ಠೀಕರಣ ರಾಜಕಾರಣಕ್ಕಾಗಿ ಆರ್ಎಸ್ಎಸ್ ಅನ್ನು ಟೀಕಿಸಲಾಗುತ್ತಿದೆ. ಸಂಘದಿಂದ ಭಾರತದ ಮೂಲ ಸಂಸ್ಕೃತಿ ಉಳಿಸುವ ಕೆಲಸವಾಗುತ್ತಿದೆ. ಈಗ ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಅವರಿಗೆ ಸಂಘದ ಮೇಲೆ ಬಹಳ ಪ್ರೀತಿ ಬಂದಿದೆ’ ಎಂದು ಚಟಾಕಿ ಹಾರಿಸಿದರು.</p>.<p>ಸಿಂದಗಿ ಹಾಗೂ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜೆಡಿಎಸ್ ಅಲ್ಪಸಂಖ್ಯಾತ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ ಬಗ್ಗೆ ಕೇಳಲಾದ ಪ್ರಶ್ನೆಗೆ ‘ಯಾರನ್ನು ಕಣಕ್ಕಿಳಿಸಬೇಕು ಎನ್ನುವುದು ಆಯಾ ಪಕ್ಷಕ್ಕೆ ಬಿಟ್ಟ ವಿಚಾರ. ಇದನ್ನು ಟೀಕಿಸುವ ಕಾಂಗ್ರೆಸ್ಗೆ ಅಲ್ಪಸಂಖ್ಯಾತರ ಮತಗಳನ್ನು ಗಳಿಸುವ ವಿಶ್ವಾಸವಿಲ್ಲವೇ’ ಎಂದು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>