ಸಿಂದಗಿ ಹಾಗೂ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜೆಡಿಎಸ್ ಅಲ್ಪಸಂಖ್ಯಾತ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ ಬಗ್ಗೆ ಕೇಳಲಾದ ಪ್ರಶ್ನೆಗೆ ‘ಯಾರನ್ನು ಕಣಕ್ಕಿಳಿಸಬೇಕು ಎನ್ನುವುದು ಆಯಾ ಪಕ್ಷಕ್ಕೆ ಬಿಟ್ಟ ವಿಚಾರ. ಇದನ್ನು ಟೀಕಿಸುವ ಕಾಂಗ್ರೆಸ್ಗೆ ಅಲ್ಪಸಂಖ್ಯಾತರ ಮತಗಳನ್ನು ಗಳಿಸುವ ವಿಶ್ವಾಸವಿಲ್ಲವೇ’ ಎಂದು ಪ್ರಶ್ನಿಸಿದರು.