‘ವ್ಯವಸ್ಥೆಯಲ್ಲಿ ಸುಧಾರಣೆಯಾಗುವ ಜೊತೆಗೆ, ಜನರ ಬಳಿಗೆ ಸರ್ಕಾರ ಹಾಗೂ ಅದರ ಯೋಜನೆಗಳು ಹೋಗಬೇಕಿದೆ. ಆರ್ಥಿಕತೆ ಬೆಳವಣಿಗೆಗೆ ಮಾನವ ಸಂಪನ್ಮೂಲವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕಿದೆ. ತಲಾ ಆದಾಯದಲ್ಲಿಕರ್ನಾಟಕ ಐದನೇ ಸ್ಥಾನದಲ್ಲಿದೆ. ಇದರ ಏರಿಕೆಗಾಗಿ ಎಸ್ಸಿ, ಎಸ್ಟಿ, ಹಿಂದುಳಿದ ವರ್ಗದವರು, ಬಡವರು ಹಾಗೂ ಮಹಿಳೆಯರನ್ನು ಒಳಗೊಳ್ಳಬೇಕಿದೆ. ಅದಕ್ಕಾಗಿ, ಅವರಿಗೆ ಆರ್ಥಿಕ ನೆರವು ನೀಡುವಂತಹ ವಿಶೇಷ ಕಾರ್ಯಕ್ರಮಗಳು ಮತ್ತು ಯೋಜನೆಗಳನ್ನು ರೂಪಿಸಲಾಗುತ್ತಿದೆ’ ಎಂದು ತಿಳಿಸಿದರು.