ಹುಬ್ಬಳ್ಳಿ: ಸರ್ಕಾರದ ಆದೇಶದ ಪ್ರಕಾರ, ಪೌರ ಕಾರ್ಮಿಕರಿಗೆ ವಿಶೇಷ ನೇರ ನೇಮಕಾತಿ ಹಾಗೂ ಪಾಲಿಕೆಯಿಂದ ನೇರ ವೇತನವನ್ನು ಪಾವತಿಸಬೇಕು ಎಂದು ಆಗ್ರಹಿಸಿ, ಧಾರವಾಡ ಜಿಲ್ಲಾ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಪೌರ ಕಾರ್ಮಿಕರು ಮತ್ತು ನೌಕರರ ಸಂಘದ ಸದಸ್ಯರು ನಗರದ ಮಹಾನಗರ ಪಾಲಿಕೆ ಎದುರು ಸೋಮವಾರ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಹಮ್ಮಿಕೊಂಡಿದ್ದಾರೆ.