<p><strong>ಹುಬ್ಬಳ್ಳಿ</strong>: 'ವಿಶ್ವಮಟ್ಟದ ರಾಜತಾಂತ್ರಿಕ ವ್ಯವಸ್ಥೆಯಲ್ಲಿ ಕೆಲವು ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಪಾಕಿಸ್ತಾನದ ವಿರುದ್ಧ ನಡೆಯುತ್ತಿರುವ ಕದನಕ್ಕೆ ವಿರಾಮ ಘೋಷಿಸಲಾಗಿದೆ' ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.</p><p>'ಪಾಕಿಸ್ತಾನದ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು(ಡಿಜಿಎಂಒ) ಕದನ ವಿರಾಮಕ್ಕೆ ಮನವಿ ಮಾಡಿದ್ದರು. ಅಮೆರಿಕಾ ಅಧ್ಯಕ್ಷರು ಸಹ ಈ ಕುರಿತು ಭಾರತದ ಜೊತೆ ಚರ್ಚಿಸಿದ್ದರು. ಕದನ ವಿರಾಮ ಘೋಷಿಸಿದ ನಂತರವೂ ಪಾಕಿಸ್ತಾನ ಗಡಿಯಲ್ಲಿ ಗುಂಡಿನ ಚಕಮಕಿ ನಡೆಸಿದ್ದು ಸರಿಯಲ್ಲ' ಎಂದು ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡುತ್ತ ಆಕ್ರೋಶ ವ್ಯಕ್ತಪಡಿಸಿದರು.</p><p>‘ಪಾಕಿಸ್ತಾನದ್ದು ಎಂದಿಗೂ ಇಬ್ಬಗೆಯ ನೀತಿ. ಅಲ್ಲಿಯ ಮಿಲಿಟರಿ ಪಡೆ ಚುನಾಯಿತಿ ಸರ್ಕಾರದ ಮಾತು ಎಂದಿಗೂ ಕೇಳಲ್ಲ. ಅಲ್ಲದೆ, ಅಲ್ಲಿಯ ಸರ್ಕಾರವೇ ಭಯೋತ್ಪಾದನೆಯನ್ನು ಪೋಷಣೆ ಮಾಡತ್ತಾ ಬಂದಿದೆ. ಇದು ಸರಿಯಾದ ನಡೆಯಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p><p>‘ಎರಡು-ಮೂರು ದಿನಗಳಿಂದ ಗಡಿಯಲ್ಲಿ ನಡೆದ ಸಂಘರ್ಷದಲ್ಲಿ ನಮ್ಮ ಸೈನಿಕರು, ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾರೆ. ನಮ್ಮ ಮಿಲಿಟರಿ ಪಡೆಗೆ ಎಲ್ಲ ಸ್ವಾತಂತ್ರ್ಯ ಕೊಡಲಾಗಿತ್ತು. ಸಂಘರ್ಷದಲ್ಲಿ ಸಾಕಷ್ಟು ಸಾವು-ನೋವು ಸಂಭವಿಸಿವೆ. ಇದರಲ್ಲಿ ನಾವು ಯಾವ ಕಾರಣಕ್ಕೂ ರಾಜಕಾರಣ ಬೆರಸಲ್ಲ’ ಎಂದು ಹೇಳಿದರು.</p><p>‘ಪಾಕಿಸ್ತಾನದ ಮಾಧ್ಯಮಗಳ ವರದಿ ಪ್ರಕಾರ ಕಂದಹಾರ್ನಲ್ಲಿ ನಡೆದ ದಾಳಿಯಲ್ಲಿ, ಅನೇಕ ಭಯೋತ್ಪಾದಕರು ಹಾಗೂ ಅವರ ಕುಟುಂಬದವರು, ಸಂಬಂಧಿಕರು ಮೃತಪಟ್ಟಿದ್ದಾರೆ. ಮೋಸ್ಟ್ ವಾಂಟೆಂಡ್ ಉಗ್ರರರು ಸಹ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ಇದರಲ್ಲಿ ಯಾವುದೇ ಗೊಂದಲ ಬೇಡ’ ಎಂದು ಸಚಿವ ಜೋಶಿ ಹೇಳಿದರು.</p><p>'ಕದನ ವಿರಾಮ ಘೋಷಣೆ ನಂತರ ಕೆಲವರು ಸಂಭ್ರಮಪಟ್ಟಿದ್ದಾರೆ. ಇದು ದೇಶದ ಭದ್ರತೆ ವಿಚಾರವಾಗಿದ್ದು, ಖುಷಿ ಪಡುವ ಅಗತ್ಯವಿಲ್ಲ' ಎಂದ ಸಚಿವ ಜೋಶಿ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಧ್ಯಸ್ಥಿಕೆ ವಿಚಾರದ ಕುರಿತು, 'ಕೆಲವು ಬಾರಿ ಆಡಳಿತಾತ್ಮಕವಾಗಿ ನಿರ್ಧಾರ ಕೈಗೊಳ್ಳಬೇಕಾಗುತ್ತದೆ. ಈ ಕುರಿತು ವಿದೇಶಾಂಗ ಸಚಿವರು ಹೆಚ್ಚಿನ ಮಾಹಿತಿ ನೀಡುತ್ತಾರೆ' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: 'ವಿಶ್ವಮಟ್ಟದ ರಾಜತಾಂತ್ರಿಕ ವ್ಯವಸ್ಥೆಯಲ್ಲಿ ಕೆಲವು ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಪಾಕಿಸ್ತಾನದ ವಿರುದ್ಧ ನಡೆಯುತ್ತಿರುವ ಕದನಕ್ಕೆ ವಿರಾಮ ಘೋಷಿಸಲಾಗಿದೆ' ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.</p><p>'ಪಾಕಿಸ್ತಾನದ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು(ಡಿಜಿಎಂಒ) ಕದನ ವಿರಾಮಕ್ಕೆ ಮನವಿ ಮಾಡಿದ್ದರು. ಅಮೆರಿಕಾ ಅಧ್ಯಕ್ಷರು ಸಹ ಈ ಕುರಿತು ಭಾರತದ ಜೊತೆ ಚರ್ಚಿಸಿದ್ದರು. ಕದನ ವಿರಾಮ ಘೋಷಿಸಿದ ನಂತರವೂ ಪಾಕಿಸ್ತಾನ ಗಡಿಯಲ್ಲಿ ಗುಂಡಿನ ಚಕಮಕಿ ನಡೆಸಿದ್ದು ಸರಿಯಲ್ಲ' ಎಂದು ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡುತ್ತ ಆಕ್ರೋಶ ವ್ಯಕ್ತಪಡಿಸಿದರು.</p><p>‘ಪಾಕಿಸ್ತಾನದ್ದು ಎಂದಿಗೂ ಇಬ್ಬಗೆಯ ನೀತಿ. ಅಲ್ಲಿಯ ಮಿಲಿಟರಿ ಪಡೆ ಚುನಾಯಿತಿ ಸರ್ಕಾರದ ಮಾತು ಎಂದಿಗೂ ಕೇಳಲ್ಲ. ಅಲ್ಲದೆ, ಅಲ್ಲಿಯ ಸರ್ಕಾರವೇ ಭಯೋತ್ಪಾದನೆಯನ್ನು ಪೋಷಣೆ ಮಾಡತ್ತಾ ಬಂದಿದೆ. ಇದು ಸರಿಯಾದ ನಡೆಯಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p><p>‘ಎರಡು-ಮೂರು ದಿನಗಳಿಂದ ಗಡಿಯಲ್ಲಿ ನಡೆದ ಸಂಘರ್ಷದಲ್ಲಿ ನಮ್ಮ ಸೈನಿಕರು, ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾರೆ. ನಮ್ಮ ಮಿಲಿಟರಿ ಪಡೆಗೆ ಎಲ್ಲ ಸ್ವಾತಂತ್ರ್ಯ ಕೊಡಲಾಗಿತ್ತು. ಸಂಘರ್ಷದಲ್ಲಿ ಸಾಕಷ್ಟು ಸಾವು-ನೋವು ಸಂಭವಿಸಿವೆ. ಇದರಲ್ಲಿ ನಾವು ಯಾವ ಕಾರಣಕ್ಕೂ ರಾಜಕಾರಣ ಬೆರಸಲ್ಲ’ ಎಂದು ಹೇಳಿದರು.</p><p>‘ಪಾಕಿಸ್ತಾನದ ಮಾಧ್ಯಮಗಳ ವರದಿ ಪ್ರಕಾರ ಕಂದಹಾರ್ನಲ್ಲಿ ನಡೆದ ದಾಳಿಯಲ್ಲಿ, ಅನೇಕ ಭಯೋತ್ಪಾದಕರು ಹಾಗೂ ಅವರ ಕುಟುಂಬದವರು, ಸಂಬಂಧಿಕರು ಮೃತಪಟ್ಟಿದ್ದಾರೆ. ಮೋಸ್ಟ್ ವಾಂಟೆಂಡ್ ಉಗ್ರರರು ಸಹ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ಇದರಲ್ಲಿ ಯಾವುದೇ ಗೊಂದಲ ಬೇಡ’ ಎಂದು ಸಚಿವ ಜೋಶಿ ಹೇಳಿದರು.</p><p>'ಕದನ ವಿರಾಮ ಘೋಷಣೆ ನಂತರ ಕೆಲವರು ಸಂಭ್ರಮಪಟ್ಟಿದ್ದಾರೆ. ಇದು ದೇಶದ ಭದ್ರತೆ ವಿಚಾರವಾಗಿದ್ದು, ಖುಷಿ ಪಡುವ ಅಗತ್ಯವಿಲ್ಲ' ಎಂದ ಸಚಿವ ಜೋಶಿ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಧ್ಯಸ್ಥಿಕೆ ವಿಚಾರದ ಕುರಿತು, 'ಕೆಲವು ಬಾರಿ ಆಡಳಿತಾತ್ಮಕವಾಗಿ ನಿರ್ಧಾರ ಕೈಗೊಳ್ಳಬೇಕಾಗುತ್ತದೆ. ಈ ಕುರಿತು ವಿದೇಶಾಂಗ ಸಚಿವರು ಹೆಚ್ಚಿನ ಮಾಹಿತಿ ನೀಡುತ್ತಾರೆ' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>