ಸರ್ಕಾರ ಕ್ರಮ ಕೈಗೊಳ್ಳಲಿ: ‘ರಕ್ತದೊತ್ತಡ, ಮಧುಮೇಹ, ಥೈರಾಯ್ಡ್ ಸಮಸ್ಯೆ ಹಾಗೂ ಶಸ್ತ್ರಚಿಕಿತ್ಸೆಗೆ ಒಳಗಾದವರು ರಕ್ತದಾನ ಮಾಡಬಾರದು. ಕೆಲವು ಮಧ್ಯವರ್ತಿಗಳು ಹೆಚ್ಚಿನ ದರಕ್ಕೆ ರಕ್ತ ಮಾರಾಟ ಮಾಡುತ್ತಿದ್ದು, ಆರೋಗ್ಯ ಇಲಾಖೆ ಕಠಿಣ ಕ್ರಮ ಕೈಗೊಳ್ಳಬೇಕು. ಶಿಕ್ಷಣದಲ್ಲಿ ರಕ್ತದಾನದ ಮಹತ್ವ ತಿಳಿಸಬೇಕು. ಪೋಷಕರು, ಶಿಕ್ಷಕರು ರಕ್ತದಾನ ಮಾಡಿ, ಮಕ್ಕಳಿಗೆ ಪ್ರೇರಣೆ ನೀಡಬೇಕು. ನಿರಂತರವಾಗಿ ರಕ್ತದಾನ ಮಾಡುವವರಿಗೆ ಕಾಲೇಜಿನಲ್ಲಿ ಹೆಚ್ಚುವರಿ ಅಂಕ, ನೌಕರರಿಗೆ ಬಡ್ತಿ ಹಾಗೂ ವೇತನ ಹೆಚ್ಚಳ ಮಾಡುವಂತಹ ಕ್ರಮಗಳು ಸರ್ಕಾರದ ಮಟ್ಟದಲ್ಲಾಗಬೇಕು’ ಎಂದು ಸಲಹೆ ನೀಡಿದರು.