<p><strong>ಧಾರವಾಡ:</strong> ‘ನವದೆಹಲಿಯಲ್ಲಿ ನಡೆದ ಎ.ಐ ಶೃಂಗಸಭೆಯ ‘ಎಕ್ಸ್ ಪೋ’ ದಲ್ಲಿ ಕಾಂಗ್ರೆಸ್ ಯುವ ಕಾರ್ಯಕರ್ತರು ಮಾಡಿದ ಗಲಾಟೆಯಿಂದ ದೇಶ ತಲೆ ತಗ್ಗಿಸುವಂತಾಗಿದ್ದು, ಈ ಬಗ್ಗೆ ಕಾಂಗ್ರೆಸ್ ನಾಯಕರು ಕ್ಷಮೆ ಕೇಳಬೇಕು’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಗ್ರಹಿಸಿದರು.</p>.<p>ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಹುಲ್ ಗಾಂಧಿ ಮಾರ್ಗದರ್ಶನದಲ್ಲಿ ಕಾಂಗ್ರೆಸ್ ಗೂಂಡಾ ವರ್ತನೆ ಮಾಡುತ್ತಿದೆ. ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಪ್ರಿಯಾಂಕಾ ವಾದ್ರಾ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರು ಈ ಬಗ್ಗೆ ಕ್ಷಮೆ ಕೇಳಬೇಕು‘ ಎಂದು ಒತ್ತಾಯಿಸಿದರು.</p>.<p>‘ನಮ್ಮ ದೇಶದ ಬಗ್ಗೆ ಕಳಕಳಿ ಇದ್ದರೆ, ದೇಶದ ಘನತೆ ಬಗ್ಗೆ ಯೋಚನೆ ಇದ್ದಿದ್ದರೆ ಇಷ್ಟೊಂದು ಕಟುವಾಗಿ ಟೀಕೆ ಮಾಡುತ್ತಿರಲಿಲ್ಲ. ಇವರು ದೇಶಕ್ಕೆ ಅಪಮಾನ ಮಾಡಿದ್ದಾರೆ’ ಎಂದರು.</p>
<p><strong>ಧಾರವಾಡ:</strong> ‘ನವದೆಹಲಿಯಲ್ಲಿ ನಡೆದ ಎ.ಐ ಶೃಂಗಸಭೆಯ ‘ಎಕ್ಸ್ ಪೋ’ ದಲ್ಲಿ ಕಾಂಗ್ರೆಸ್ ಯುವ ಕಾರ್ಯಕರ್ತರು ಮಾಡಿದ ಗಲಾಟೆಯಿಂದ ದೇಶ ತಲೆ ತಗ್ಗಿಸುವಂತಾಗಿದ್ದು, ಈ ಬಗ್ಗೆ ಕಾಂಗ್ರೆಸ್ ನಾಯಕರು ಕ್ಷಮೆ ಕೇಳಬೇಕು’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಗ್ರಹಿಸಿದರು.</p>.<p>ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಹುಲ್ ಗಾಂಧಿ ಮಾರ್ಗದರ್ಶನದಲ್ಲಿ ಕಾಂಗ್ರೆಸ್ ಗೂಂಡಾ ವರ್ತನೆ ಮಾಡುತ್ತಿದೆ. ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಪ್ರಿಯಾಂಕಾ ವಾದ್ರಾ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರು ಈ ಬಗ್ಗೆ ಕ್ಷಮೆ ಕೇಳಬೇಕು‘ ಎಂದು ಒತ್ತಾಯಿಸಿದರು.</p>.<p>‘ನಮ್ಮ ದೇಶದ ಬಗ್ಗೆ ಕಳಕಳಿ ಇದ್ದರೆ, ದೇಶದ ಘನತೆ ಬಗ್ಗೆ ಯೋಚನೆ ಇದ್ದಿದ್ದರೆ ಇಷ್ಟೊಂದು ಕಟುವಾಗಿ ಟೀಕೆ ಮಾಡುತ್ತಿರಲಿಲ್ಲ. ಇವರು ದೇಶಕ್ಕೆ ಅಪಮಾನ ಮಾಡಿದ್ದಾರೆ’ ಎಂದರು.</p>